ಬೀದರ್‌ | ಪೊಲೀಸ್ ಶ್ವಾನ ʼಬ್ರುನೋʼ ನಿಧನ; ಪೊಲೀಸ್‌ ಗೌರವದೊಂದಿಗೆ ಅಂತ್ಯಕ್ರಿಯೆ

Date:

ಬೀದರ್ ಜಿಲ್ಲಾ ಪೊಲೀಸ್‌ ಇಲಾಖೆಯ ದಕ್ಷ ಶ್ವಾನವೆಂದೇ ಗುರುತಿಸಿಕೊಂಡಿದ್ದ ʼಬ್ರುನೋʼ ಭಾನುವಾರ ನಿಧನ ಹೊಂದಿದೆ.

ಭಾನುವಾರ ಪೊಲೀಸ್‌ ಹೆಡ್‌ಕ್ವಾರ್ಟರ್‌ನಲ್ಲಿ ಪೊಲೀಸ್‌ ಗೌರವದೊಂದಿದೆ ಶ್ವಾನ ಬ್ರುನೋ ಅಂತ್ಯಕ್ರಿಯೆ ನಡೆಯಿತು.

ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಲಂಗೋಟಿ, ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ ಡಿವೈಎಸ್‌ಪಿ ಶಿವನಗೌಡ ಪಾಟೀಲ್‌ ಸೇರಿದಂತೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಅಂತಿಮ ಗೌರವ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಮಾತನಾಡಿ, “ರಾಜ್ಯಾದ್ಯಂತ ಗಣ್ಯ ವ್ಯಕ್ತಿಗಳ ಭೇಟಿ ಸಂದರ್ಭದ ವೇಳೆ ಪೊಲೀಸ್‌ ಇಲಾಖೆಯ ಶ್ವಾನದಳದಲ್ಲಿ ಸ್ಪೋಟಕ ಪತ್ತೆ ಹಚ್ಚುವ ಕೆಲಸವನ್ನು ಬ್ರುನೋ ಬಹಳ ದಕ್ಷ ರೀತಿಯಲ್ಲಿ ಮಾಡಿದೆ. ಎಎಸ್‍ಸಿ ತಂಡದೊಂದಿಗೆ ಭದ್ರತಾ ತಪಾಸಣಾ ಕಾರ್ಯ ಚುರುಕಾಗಿ ಭಾಗಿಯಾಗಿದ್ದು ಹಾಗೂ ವಲಯ ಮಟ್ಟದ ಪೊಲೀಸ್ ಕರ್ತವ್ಯ ಕೂಟ ಮತ್ತು ಇತರೆ ಜಿಲ್ಲಾ ಮಟ್ಟದ ಶ್ವಾನ ಪ್ರದರ್ಶನಗಳಲ್ಲಿ ಕೂಡ ಭಾಗಿಯಾಗಿ ಪದಕ ವಿಜೇತವಾಗಿದ್ದು, ನಮ್ಮ ಬೀದರ್ ಜಿಲ್ಲಾ ಪೊಲೀಸ್ ಕೀರ್ತಿ ತಂದಿದ್ದ ಶ್ವಾನ ಬ್ರುನೋ ಅಕಾಲಿಕ ನಿಧನ ಹೊಂದಿರುವುದು ದುಃಖದ ವಿಷಯ” ಎಂದರು.

ಈ ಸುದ್ದಿ ಓದಿದ್ದೀರಾ? ಬಿಜೆಪಿಗರು ಮನುವಾದಿ, ಸರ್ವಾಧಿಕಾರಿ ಧೋರಣೆಯಲ್ಲಿ ನಂಬಿಕೆ ಇಟ್ಟವರು: ಸಚಿವ ರಾಮಲಿಂಗಾರೆಡ್ಡಿ

ಶ್ವಾನದಳದ ಅಧಿಕಾರಿ ಅಶೋಕ ಮಾತನಾಡಿ, “10 ವರ್ಷ 6 ತಿಂಗಳು ಪೊಲೀಸ್‌ ಇಲಾಖೆಯಲ್ಲಿ ಕಾರ್ಯನಿರ್ವಹಿಸಿದ ಬ್ರುನೋ ಗಣ್ಯರು ಭೇಟಿ ನೀಡಿದ ವೇಳೆ ಅತ್ಯಂತ ದಕ್ಷತೆಯಿಂದ ಕೆಲಸ ನಿರ್ವಹಿಸಿ ಸ್ಫೋಟಕ ಪತ್ತೆ ಹಚ್ಚುವ ಕೆಲಸ ಮಾಡಿದೆ. ಇಂದು ಬ್ರುನೋ ಅಕಾಲಿಕವಾಗಿ ನಮ್ಮನ್ನಗಳಿಲಿರುವುದು ಶ್ವಾನ ದಳಕ್ಕೆ ತುಂಬಲಾರದ ನಷ್ಟವಾಗಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...