ಮೈಸೂರು | ಹಿರಿಯ ಪತ್ರಕರ್ತ ದೀಪಕ್‌ಗೆ ಪೊಲೀಸ್‌ ಸಮನ್ಸ್‌ – ಮುಚ್ಚಳಿಕೆಗೆ ತಾಕೀತು; ವ್ಯಾಪಕ ಖಂಡನೆ

Date:

ಮೈಸೂರಿನ ಹಿರಿಯ ಪತ್ರಕರ್ತ, ಪ್ರಗತಿಪರ ಚಿಂತಕ ಕೆ ದೀಪಕ್ ಅವರಿಗೆ ಮೈಸೂರು ಪೊಲೀಸರು ಸಮನ್ಸ್‌ ನೀಡಿದ್ದಾರೆ. ಮುಚ್ಚಳಿಕೆ ಪತ್ರ ಬರೆದುಕೊಡುವಂತೆ ತಾಕೀತು ಮಾಡಿದ್ದಾರೆ. ಪೊಲೀಸರ ನಡೆಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ.

2019ರ ಪ್ರಕರಣದಲ್ಲಿ ದೀಪಕ್ ಅವರಿಗೆ ಸಮನ್ಸ್‌ ನೀಡಲಾಗಿದೆ. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದ್ದರೂ, ಸಮನ್ಸ್‌ ನೀಡಿರುವುದು ಪತ್ರಕರ್ತರ ಸ್ವಾತಂತ್ರ್ಯವನ್ನು ಹತ್ತಿಕ್ಕುವ ನಡೆಯಾಗಿದೆ ಎಂದು ಆಕ್ರೋಶ ವ್ಯಕ್ತವಾಗಿದೆ.

ಮೈಸೂರಿನಲ್ಲಿ ಪ್ರಜಾಭಾರತ ಸಾಮಾಜಿಕ ಮಾಧ್ಯಮ ಸಂಸ್ಥೆ ನಡೆಸುತ್ತಿರುವ ದೀಪಕ್ ಅವರು, 2019ರಲ್ಲಿ ತಮ್ಮ ಪತ್ರಿಕೆಯಲ್ಲಿ ಸಂಸದ ಪ್ರತಾಪ್ ಸಿಂಹ ಅವರನ್ನು ಕುರಿತು ‘ಪ್ರತಾಪಸಿಂಹನ ಬೆತ್ತಲೆ ಜಗತ್ತು’ ಎಂಬ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಿದ್ದರು. ವರದಿ ಕಾರಣಕ್ಕಾಗಿ ದೀಪಕ್ ವಿರುದ್ದ ಸೈಬರ್ ಕ್ರೈಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆಯೂ ನಡೆಯುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಿಚಾರಣೆಯ ಹಂತದಲ್ಲಿರುವ ಪ್ರಕರಣದಲ್ಲಿ ಮೈಸೂರು ಪೊಲೀಸ್ ಡಿಸಿಪಿ ಮುತ್ತುರಾಜ್ ಅವರು ದೀಪಕ್ ಅವರಿಗೆ ಬುಧವಾರ ಸಂಜೆ ಸಮನ್ಸ್ ಜಾರಿಗೊಳಿಸಿದ್ದಾರೆ.

ಸಮನ್ಸ್‌ನಲ್ಲಿ, “2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಪ್ರತಾಪ ಸಿಂಹ ಅವರ ವೈಯುಕ್ತಿಕ ಚಾರಿತ್ಯ ಕುರಿತಾಗಿ ಸುಳ್ಳಾಗಿರುವ ಹೇಳಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರಿಂದ ಶಾಂತಿಭಂಗ ಉಂಟು ಮಾಡುವ ಅಥವಾ ಸಾರ್ವಜನಿಕ ನೆಮ್ಮದಿಗೆ ತೊಂದರೆಯುಂಟು ಮಾಡುವ ಸಂಭವವಿತ್ತು. ನಿಮ್ಮ ವಿರುದ್ದ ಮುಂದಿನ ಕ್ರಮಕ್ಕೆ ನೀಡಿದ ವರದಿ ಮೇರೆಗೆ ಪ್ರಕರಣ ದಾಖಲಿಸಿಲಾಗಿದ್ದು, ಈ ರೀತಿಯ ದುರ್ವರ್ತನೆಯನ್ನು ತೋರದಂತೆ ನಿಮ್ಮ ವಿರುದ್ದ ವಿಚಾರಣೆ ಕೈಗೊಂಡು ನಿಗದಿತ ಅವಧಿಯವರೆಗೆ ವೈಯುಕ್ತಿಕ ಮುಚ್ಚಳಿಕೆ ಮತ್ತು ಅಷ್ಟೇ ಮೊತ್ತದ ಸೂಕ್ತ ಗಣ್ಯ ವ್ಯಕ್ತಿಯ ಜಾಮೀನುದಾರತೆಯನ್ನು ಏಕೆ ಪಡೆಯಬಾರದು” ಎಂದು ಕೇಳಲಾಗಿದೆ. ಅಲ್ಲದೆ, ಏಪ್ರಿಲ್ 12ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಪೊಲೀಸ್‌ ಸಮನ್ಸ್‌ಗೆ ಮೈಸೂರಿನ ಹಲವಾರು ಪ್ರಗತಿಪರ ಚಿಂತಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳೆದ 25 ವರ್ಷಗಳಿಂದ ಮೈಸೂರಿನಲ್ಲಿ ನಾನಾ ಸುದ್ದಿಮಾಧ್ಯಮಗಳಲ್ಲಿ ಸೇವೆ ಸಲ್ಲಿಸಿರುವ ದೀಪಕ್ ಅವರು ಮೈಸೂರು ಪತ್ರಕರ್ತರ ಸಹಕಾರ ಸಂಘದ ಹಾಲಿ ಅಧ್ಯಕ್ಷರಾಗಿದ್ದಾರೆ. ಜನಪರ ಪತ್ರಿಕೋದ್ಯಮದ ಜೊತೆಗೆ ದಲಿತ ಚಳವಳಿ, ಪ್ರಗತಿಪರ ಚಳವಳಿಗಳಲ್ಲೂ ಮುಂಚೂಣಿಯಲ್ಲಿ ಗುರುತಿಸಿಕೊಂಡಿದ್ದಾರೆ. ಅವರಿಗೆ ಚುನಾವಣೆಯ ಸಮಯದಲ್ಲಿ ಸಮನ್ಸ್‌ ನೀಡಿರುವ ಪತ್ರಿಕಾ ಸ್ವಾತಂತ್ರ್ಯದ ಹರಣವೆಂದು ಖಂಡಿಸಿದ್ದಾರೆ.

 

“2019ರ ಚುನಾವಣೆಯ ಸಮಯದಲ್ಲಿಯೂ ‘ಪ್ರಜಾಭಾರತ’ ಮಾಧ್ಯಮದ ಮೂಲಕ ಸರಣಿ ವರದಿ ಪ್ರಕಟಿಸಿ, ಮತದಾರರನ್ನು ಜಾಗೃತಗೊಳಿಸುವ ಕೆಲಸವನನ್ನು ದೀಪಕ್ ಮಾಡಿದ್ದರು. ಆ ಸಂದರ್ಭದಲ್ಲಿ ಬಿಜೆಪಿ ಸಂಸದ ಪ್ರತಾಪಸಿಂಹ ಕುರಿತಾದ ವರದಿ ವಿರುದ್ದ ಪ್ರಕರಣ ದಾಖಲಿಸಲಾಗಿತ್ತು. ನಂತರ, ರಾಜ್ಯದಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸರ್ಕಾರ, ಪ್ರಕರಣದಲ್ಲಿ ದೀಪಕ್ ವಿರುದ್ದ ಆರೋಪಪಟ್ಟಿ ಸಲ್ಲಿಸುವ ಮೂಲಕ ಪತ್ರಕರ್ತರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಪ್ರಯತ್ನ ನಡೆಸಿತ್ತು” ಎಂದು ಆಕ್ರೋಶ ವ್ಯಕ್ತವಾಗಿದೆ.

ಪ್ರಸ್ತುತ ಪ್ರಗತಿಪರ ಸಿದ್ಧಾಂತಗಳನ್ನು ಪ್ರತಿಪಾದಿಸುತ್ತೇವೆ ಎನ್ನುವ ಕಾಂಗ್ರೆಸ್‌ ಅಧಿಕಾರದಲ್ಲಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿಯೇ ಪತ್ರಕರ್ತರಿಗೆ ಸಮನ್ಸ್‌ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...