ಮುಖ್ಯಮಂತ್ರಿಗಳ ಮುಖ್ಯ ಸಲಹೆಗಾರರಾಗಿ ಸುನೀಲ್‌ ಕನುಗೋಳು ನೇಮಕ: ಯಾರಿದು ಕನುಗೋಳು?

Date:

ಕಾಂಗ್ರೆಸ್‌ನ ಚುನಾವಣಾ ಚಾಣಾಕ್ಷ, ಬಳ್ಳಾರಿ ಮೂಲದ ಸುನೀಲ್‌ ಕನುಗೋಳು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮುಖ್ಯ ಸಲಹೆಗಾರರಾಗಿ ನೇಮಕ ಮಾಡಲಾಗಿದೆ.

ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗಳು ಆದೇಶ ಹೊರಡಿದ್ದಾರೆ. ರಾಜ್ಯ ಕಾಂಗ್ರೆಸ್‌ನ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸುನೀಲ್‌ ಕನುಗೋಳು ಚುನಾವಣಾ ತಂತ್ರಗಾರಿಕೆ ಹೆಣೆದಿದ್ದರು. ಜತೆಗೆ ಪೇಸಿಎಂನಂತಹ ಅಭಿಯಾನಗಳ ಮೂಲಕ ಹಿಂದಿನ ಬಿಜೆಪಿ ಸರ್ಕಾರ ಭ್ರಷ್ಟ ಎಂದು ಸಾರ್ವಜನಿಕರ ಮುಂದೆ ಬಿಂಬಿಸುವಲ್ಲಿ ಯಶಸ್ವಿಯಾಗಿದ್ದರು.

ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸುನೀಲ್‌ ಕನುಗೋಳು ಅವರನ್ನೇ ತಮ್ಮ ಸಲಹೆಗಾರರನ್ನಾಗಿ ನೇಮಿಸಿಕೊಂಡಿದ್ದಾರೆ. ರಾಜ್ಯಾದ್ಯಂತ ಕಾಂಗ್ರೆಸ್‌ ಪರವಾದ ಅಲೆ ಎಬ್ಬಿಸಿ ಪಕ್ಷಕ್ಕೆ ಭರ್ಜರಿ ಗೆಲುವು ತಂದುಕೊಡುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಚುನಾವಣಾ ತಂತ್ರಗಾರಿಕೆಯ ಹಿಂದಿರುವ ಶಕ್ತಿಯೇ ಸುನಿಲ್‌ ಕನುಗೋಳು ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಂಗ್ರೆಸ್‌ ಸ್ಥಳೀಯ ನಾಯಕರ ಸಮೂಹ ನಾಯಕತ್ವ ಹಾಗೂ ರಾಹುಲ್‌ ಗಾಂಧಿಯವರ ಭಾರತ್‌ ಜೋಡೋ ಯಾತ್ರೆ ಕರ್ನಾಟಕದಲ್ಲಿ ಕಾಂಗ್ರೆಸ್‌ಗೆ ದೊಡ್ಡ ಮಟ್ಟದಲ್ಲಿ ಗೆಲುವು ನೀಡಿತ್ತು. ಅದಲ್ಲದೇ, ಬಿಜೆಪಿ ವಿರುದ್ಧದ 40 ಪರ್ಸೆಂಟ್‌ ಕಮಿಷನ್‌ ಅಸ್ತ್ರ, ʻಪೇ ಸಿಎಂʼ ಅಭಿಯಾನಗಳು ಬಿಜೆಪಿವನ್ನು ಕಟ್ಟಿಹಾಕುವಲ್ಲಿ ಯಶಸ್ವಿಯಾಗಿತ್ತು.

kanagolu

ಬಳ್ಳಾರಿ ಮೂಲದ ಸುನೀಲ್ ಕನುಗೋಳು

ಭಾರತದ ಮುಂಚೂಣಿ ರಾಜಕೀಯ ತಂತ್ರಗಾರರ ಪೈಕಿ ಒಬ್ಬರಾಗಿರುವ ಸುನೀಲ್‌ ಕನುಗೋಳು ಕರ್ನಾಟಕದ ಬಳ್ಳಾರಿ ಮೂಲದವರಾಗಿದ್ದು, ಅಮೆರಿಕಾದಲ್ಲಿ ಉನ್ನತ ಶಿಕ್ಷಣ ಪೂರೈಸಿದ ಬಳಿಕ ಗುಜರಾತ್‌ ಚುನಾವಣೆಯಲ್ಲಿ ರಾಜಕೀಯ ತಂತ್ರಗಾರರಾಗಿ ಕರ್ತವ್ಯ ನಿರ್ವಹಿಸಿದ್ದವರು.

2014 ರ ಲೋಕಸಭೆಯ ಚುನಾವಣೆಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಚುನಾವಣಾ ತಂತ್ರಗಾರಿಕಾ ತಂಡ ಪ್ರಶಾಂತ್ ಕಿಶೋರ್ ನೇತೃತ್ವದ ತಂಡದಲ್ಲಿ ಮಹತ್ವದ ಜವಾಬ್ದಾರಿ ಹೊತ್ತಿದ್ದರು. 2017 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಯೋಗಿ ಆದಿತ್ಯನಾಥ್‌ ಅವರ ಸರ್ಕಾರ ರಚನೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. 2019ರ ಲೋಕಸಭಾ ಚುನಾವಣೆ ವೇಳೆ ತಮಿಳುನಾಡಿನ ಎಂ.ಕೆ ಸ್ಟಾಲಿನ್‌ ಅವರ ರಾಜಕೀಯ ತಂತ್ರಗಾರರಾಗಿದ್ದ ವೇಳೆ ಕನುಗೋಳು ಅವರು ನಡೆಸಿದ್ದ ʻನಮಕ್ಕು ನಾಮೆʼ ಎಂಬ ಹೆಸರಿನ ಪ್ರಚಾರ ಆಂದೋಲನ ಡಿಎಂಕೆಗೆ ದೊಡ್ಡ ಮಟ್ಟದ ಯಶಸ್ಸು ತಂದು ಕೊಟ್ಟಿತ್ತು.

ಈ ಸುದ್ದಿ ಓದಿದ್ದೀರಾ? ಕುಸ್ತಿಪಟುಗಳ ಹೋರಾಟಕ್ಕೆ ರಾಬಿನ್ ಉತ್ತಪ್ಪ ಬೆಂಬಲ

ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ ಬೆಂಬಲದಿಂದಾಗಿ ಕಾಂಗ್ರೆಸ್‌ ಸೇರಿದ್ದ ಸುನೀಲ್‌ ಕನುಗೋಳು ಅವರಿಗೆ ರಾಜಕೀಯ ತಜ್ಞರನ್ನೊಳಗೊಂಡ ತಂಡಕ್ಕೆ ಕರ್ನಾಟಕದಲ್ಲಿ ಕಾಂಗ್ರೆಸ್‌ಅನ್ನು ಅಧಿಕಾರಕ್ಕೇರಿಸುವ ಮಹತ್ವದ ಜವಾಬ್ದಾರಿಯನ್ನು ನೀಡಲಾಗಿತ್ತು.

ಕರ್ನಾಟಕದಲ್ಲಿ ಕಾಂಗ್ರೆಸ್‌ ಅನ್ನು ಅಧಿಕಾರಕ್ಕೆ ತರಲು ಪಣ ತೊಟ್ಟಿದ್ದ ಇವರ ತಂಡ ಬಿಡುವಿಲ್ಲದಂತೆ ತಮ್ಮನ್ನು ತೊಡಗಿಸಿಕೊಂಡಿತ್ತು. ಕರ್ನಾಟಕದ ಪ್ರತಿ ಮಂದಿಯನ್ನು ತಲುಪುವಂತ ಪ್ರಣಾಳಿಕೆ ಸಿದ್ಧಪಡಿಸಲು ಕನುಗೋಲು ಕೂಡ ಪ್ರಮುಖ ಕಾರಣಕರ್ತರು. ಇವರ ಚಾಣಾಕ್ಷ ಶ್ರಮದ ಪರಿಣಾಮದಿಂದ ಕಾಂಗ್ರೆಸ್​ಗೆ 135 ಸೀಟು ಬಂದಿದೆ ಎಂದು ಹೇಳಲಾಗುತ್ತಿದೆ.

ಮುಂಬರುವ ಲೋಕಸಭೆ ಚುನಾವಣೆಗೂ ಮೊದಲು ನಡೆಯಲಿರುವ ತೆಲಂಗಾಣ, ಛತ್ತೀಸ್‌ಗಢ, ಮಧ್ಯ ಪ್ರದೇಶ ಮತ್ತು ರಾಜಸ್ಥಾನ ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್‌ಗೆ ಕನುಗೋಳು ತಂಡ ಬಲ ತುಂಬಲಿದೆ. ಅಲ್ಲದೆ ಇವುಗಳ ಜೊತೆಗೆ ರಾಜ್ಯದಲ್ಲಿ ನಡೆಯುವ ಬಿಬಿಎಂಪಿ ಚುನಾವಣೆ, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲೂ ಇವರ ತಂತ್ರಗಾರಿಕೆ ಕೆಲಸ ಮಾಡಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...