ರಾಯಚೂರು | ಒಂದೇ ಕುಟುಂಬದ ವಶದಲ್ಲಿ ಬಡವರ ಭೂಮಿ; ಅ.17ಕ್ಕೆ ರಸ್ತೆ ತಡೆ ಪ್ರತಿಭಟನೆ

Date:

ಸಿಂಧನೂರು ತಾಲೂಕಿನ ಜವಳಗೇರಾದಲ್ಲಿ ನಾಡಗೌಡರ ಕುಟುಂಬದ ವಶದಲ್ಲಿರುವ ಸರ್ಕಾರಿ ಭೂಮಿಯನ್ನು ಭೂ ರಹಿತರಿಗೆ ವಿತರಿಸಬೇಕೆಂದು ಒತ್ತಾಯಿಸಿ ಅಕ್ಟೋಬರ್‌ 17ರಂದು ಸಿಂಧನೂರಿನಲ್ಲಿ ರಸ್ತೆ ತಡೆ ನಡೆಸುವುದಾಗಿ ‘ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಾಲಿಟ್ ಬ್ಯುರೋ’ ಸದಸ್ಯ ಆರ್. ಮಾನಸಯ್ಯ ಹೇಳಿದ್ದಾರೆ.

ಅಕ್ಟೋಬರ್‌ 13ರಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ವೆ ನಂ.419 ಮತ್ತು ಸುಲ್ತಾನಪುರ ಸರ್ವೆ ನಂ. 186ರಲ್ಲಿರುವ,  187 ರಲ್ಲಿ 62.37 ಎಕರೆ ಹೆಚ್ಚುವರಿ ಭೂಮಿಯೂ, ಸರ್ಕಾರಿ ಭೂಮಿ ಎಂದು ದಾಖಲೆಯಲ್ಲಿ ನಮೂದಾಗಿದೆ. ಆದರೂ, ರಾಜಶೇಖರ ನಾಡಗೌಡ ಹಾಗೂ ಚಂದ್ರಭೂಪಾಲ ನಾಡಗೌಡ ಇವರು ಅಕ್ರಮ ಸಾಗುವಳಿ ಮಾಡುತ್ತಿದ್ದಾರೆ. ಆದರೂ, ಕಂದಾಯ ಇಲಾಖೆ ಯಾವುದೇ ಕ್ರಮಕ್ಕೆ ಮುಂದಾಗುತ್ತಿಲ್ಲ. ಸರ್ಕಾರಿ ಭೂಮಿಯನ್ನು ಭೂ ರಹಿತರಿಗೆ ಹಂಚಿಕೆ ಮಾಡಲು ಸಿಪಿಐ(ಎಂಎಲ್) ರೆಡ್ ಸ್ಟಾರ್ ಮತ್ತು ಕರ್ನಾಟಕ ರೈತ ಸಂಘ ಹೋರಾಟ ನಡೆಸುತ್ತಲೇ ಬಂದಿವೆ.

ಕಳೆದ ಆರು ದಿನಗಳಿಂದ ಸರ್ವೆ ನಂ 419ರಲ್ಲಿ ಅಹೋರಾತ್ರಿ ಧರಣ ನಡೆಸುತ್ತಿದ್ದೇವೆ. ಸ್ಥಳಕ್ಕೆ ಆಗಮಿಸಿದ್ದ ತಹಸೀಲ್ದಾರರು ಮತ್ತು ಲಿಂಗಸೂಗೂರು ಸಹಾಯಕ ಆಯುಕ್ತರು, ಅಕ್ರಮವಾಗಿ ಭೂಮಾಲೀಕರೆಂದು ಹೇಳಿಕೊಳ್ಳುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಅಲ್ಲದೇ, ವಿಸ್ತೃತ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸಿದ್ದರೂ, ಜಿಲ್ಲಾಧಿಕಾರಿಗಳು ಸರ್ಕಾರಿ ಭೂಮಿ ಉಳಿಸಲು ಮುಂದಾಗುತ್ತಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1974ರಲ್ಲಿ, ರಾಜ್ಯದಲ್ಲಿ ಭೂ ಸುಧಾರಣಾ ಕಾಯ್ದೆ ಜಾರಿಗೊಂಡಿದೆ. ನಾಡಗೌಡರ ಕುಟುಂಬಕ್ಕೆ ಸೇರಿದ 4,900 ಎಕರೆ ಭೂಮಿಯಿದೆ. ಅವರ ಕುಟುಂಬದವರೇ ಘೋಷಿಸಿಕೊಂಡಂತೆ, ಘೋಷಣಾ ಪತ್ರಗಳು ಕಂದಾಯ ಇಲಾಖೆಯಲ್ಲಿವೆ. ರಾಮರಾವ್, ಸೂರ್ಯನಾರಾಯಣರಾವ್, ಸಿದ್ದಲಿಂಗಮ್ಮ ಸೇರಿದಂತೆ ಒಂಬತ್ತು ಕುಟುಂಬದವರ ಘೋಷಣಾ ಪತ್ರಗಳಿವೆ. ಆದರೆ, ಸಿದ್ದಲಿಂಗಮ್ಮ ಗಂಡ ವೆಂಕಟರಾವ್ ಹೆಸರಿನಲ್ಲಿ 1123 ಎಕರೆ 32 ಗುಂಟೆ ಜಮೀನು ಇದೆ. ಇವರಿಗೆ ಮಕ್ಕಳಿಲ್ಲ. ಇವರ ಘೋಷಣೆ ಮೇರಗೆ 1981 ನವಂಬರ್ 05ರಂದು, ತಾಲೂಕ ಭೂ ನ್ಯಾಯಮಂಡಳಿ ವಿಚಾರಣೆ ನಡೆಸಿ 1,069 ಎಕರೆ 32 ಗುಂಟೆ ಹೆಚ್ಚುವರಿ ಜಮೀನು ಎಂದು ತೀರ್ಪು ನೀಡಿದೆ.

ನಾಲ್ಕು ತಿಂಗಳಲ್ಲಿ ಭೂಮಿಯನ್ನು ಕಂದಾಯ ಇಲಾಖೆ ಸ್ವಾಧೀನಕ್ಕೆ ಪಡೆದು, ಸರ್ಕಾರಿ ಭೂಮಿ ಎಂದು ನಮೂದಿಸಲಾಗಿದೆ. ಆದರೆ, ಭೂಮಿ ಕಬ್ಜ ಮಾತ್ರ ಜಮೀನದಾರರ ಕೈಯೊಳಗೆ, ಇಂದಿಗೂ ಇದೆ. ರಾಜ್ಯದಲ್ಲಿ ಅಸ್ತಿತ್ವಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ, ಭೂ ಸುಧಾರಣೆ ಕಾಯ್ದೆಯ ವಾರಸುದಾರರು ಎಂದು ಹೇಳಿಕೊಳ್ಳುತ್ತಲಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅಭಿನವ ದೇವರಾಜ ಅರಸು ಎಂದು ಸಹ ಹೇಳಲಾಗುತ್ತಿದೆ. ಸಿಂಧನೂರಿನಲ್ಲಿ, ಭೂ ಸುಧಾರಣೆ ಕಾಯ್ದೆಯನ್ನು ಬುಡಮೇಲು ಮಾಡಿದರೂ ಕ್ರಮಕ್ಕೆ ಮುಂದಾಗುತ್ತಿಲ್ಲ ಎಂದು ಅವರು ಟೀಕಿಸಿದರು.

1981ರಿಂದ 2022ವರೆಗೆ, ಭೂ ನ್ಯಾಯ ಮಂಡಳಿಯೂ ಪ್ರಶ್ನಿಸಿಲ್ಲ. ಅಲ್ಲದೇ, ಸಹಾಯಕ ಆಯುಕ್ತರು, ತಹಸೀಲ್ದಾರರು ಸೇರಿದಂತೆ, ಕಂದಾಯ ಇಲಾಖೆ ಸರ್ಕಾರಿ ಭೂಮಿ ಉಳಿಸಿ, ಭೂ ರಹಿತರಿಗೆ ಹಂಚಿಕೆ ಮಾಡದೇ ಇರುವದರಿಂದ, ಬಹುದೊಡ್ಡ ಹಗರಣವಿದ್ದ ಕಂದಾಯ ಸಚಿವರು ತನಿಖೆಗೆ ಆದೇಶಿಸಬೇಕೆಂದರು. ಕಳೆದ 40 ವರ್ಷಗಳಿಂದ ಸರ್ಕಾರಿ ಭೂಮಿಯನ್ನು, ಮಾಜಿ ಭೂ ಮಾಲೀಕರಿಗೆ ಬಿಟ್ಟು ಕೊಟ್ಟ ಅಧಿಕಾರಿಗಳ ವಿರುದ್ದ ತನಿಖೆಯಾಗಬೇಕು. ರಾಜ್ಯದಲ್ಲಿ ಭೂ ಸುಧಾರಣೆ ಕಾಯ್ದೆ ಜಾರಿಯಲ್ಲಿದೆ ಎಂಬದನ್ನು ಸ್ಪಷ್ಟಪಡಿಸಿ, ಸಿಂಧನೂರು ಶಾಸಕರು ಸರ್ಕಾರ ಮೇಲೆ ಒತ್ತಡಹಾಕಿ ತನಿಖೆಗೆ ಒತ್ತಾಯಿಸಬೇಕೆಂದು ಆಗ್ರಹಿಸಿದರು.

ಕಾನೂನು ಬಾಹಿರವಾಗಿ ಸರ್ಕಾರಿ ಭೂಮಿ ಬಳಸುತ್ತಿರುವವರ ವಿರುದ್ದ, ಕೇಸ್ ದಾಖಲಿಸಬೇಕು ಎಂದಿರುವ ಅವರು, ಭೂ  ರಹಿತರಿಗೆ ಭೂಮಿ ಹಂಚಿಕೆ ಮಾಡಬೇಕೆಂದು ನಡೆಯಲಿರುವ ರಸ್ತೆ ತಡೆಯಲ್ಲಿ, ಸರ್ಕಾರಿ ಭೂಮಿ ಉಳಿಸಬೇಕೆನ್ನುವ ಆಶಯ ಹೊಂದಿರುವ ಸಂಘಟನೆಗಳು, ಬೆಂಬಲಿಸಿ ಭಾಗವಹಿಸಲು ಮನವಿ ಮಾಡಿದರು.

ಈ ಸಂದರ್ಬದಲ್ಲಿ ಸಿಪಿಐ(ಎಂಎಲ್) ರೆಡ್‌ಸ್ಟಾರ್ ಪಕ್ಷದ ಜಿಲ್ಲಾ ಕಾರ್ಯದರ್ಶಿ ಎಂ.ಡಿ.ಅಮೀರ್ ಅಲಿ, ಕರ್ನಾಟಕ ರೈತ ಸಂಘ ಜಿಲ್ಲಾಧ್ಯಕ್ಷ ಮಲ್ಲಯ್ಯ ಕಟ್ಟಿಮನಿ, ಗಂಗಾಧರ, ಹುಚ್ಚಾರೆಡ್ಡಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...