ಬೆಂಗಳೂರು ವಿವಿ ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಊಟ; ವಿದ್ಯಾರ್ಥಿಗಳ ಪ್ರತಿಭಟನೆ

Date:

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನ ಭಾರತಿ ಆವರಣದಲ್ಲಿರುವ ಅಂಬೇಡ್ಕರ್ ವಸತಿ ನಿಲಯ ಪಿಜಿ2 ಹಾಸ್ಟೆಲ್‌ವೊಂದರಲ್ಲಿ ವಿದ್ಯಾರ್ಥಿಗಳಿಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದರ ವಿರುದ್ಧ ಹಾಸ್ಟೆಲ್ ವಿದ್ಯಾರ್ಥಿಗಳು ಊಟದ ಕೊಠಡಿಯಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.

”ಬಹಳ ದಿನಗಳಿಂದ ಹಾಸ್ಟೆಲ್‌ನಲ್ಲಿ ನೀಡುತ್ತಿರುವ ಊಟ ಕಳಪೆಯಾಗಿದೆ. ಈ ಬಗ್ಗೆ ಹಲವು ಬಾರಿ ವಾರ್ಡ್‌ನ್‌ಗೆ ತಿಳಿಸಿದರೂ ಅವರು ತಲೆ ಕೆಡಿಸಿಕೊಳ್ಳುತ್ತಿಲ್ಲ. ಹಾಸ್ಟೆಲ್‌ನಲ್ಲಿ ಊಟದ ವ್ಯವಸ್ಥೆ ಬಹಳ ಕೆಟ್ಟದ್ದಾಗಿದೆ. ಶುಚಿ ರುಚಿ ಊಟ ಸಿಗುತ್ತಿಲ್ಲ” ಎಂದು ವಿದ್ಯಾರ್ಥಿಗಳು ಹಾಸ್ಟೆಲ್ ವಾರ್ಡನ್ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಬೆಂವಿವಿ ವಿದ್ಯಾರ್ಥಿ ಬಸವಣ್ಣ, “ಬಳ್ಳಾರಿಯಿಂದ ಬೆಂಗಳೂರಿಗೆ ವಿದ್ಯಾಭ್ಯಾಸ ಮಾಡಲು ಬಂದಿದ್ದೇನೆ. ನಾವಿರುವ ಹಾಸ್ಟೆಲ್‌ನಲ್ಲಿ ಕಳಪೆ ಗುಣಮಟ್ಟದ ಊಟ ನೀಡುತ್ತಿದ್ದಾರೆ. ಈ ಬಗ್ಗೆ ಮೇಲಾಧಿಕಾರಿಗಳಿಗೆ ಕಳೆದ ಒಂದು ತಿಂಗಳಿನಿಂದ ದೂರು ನೀಡುತ್ತಿದ್ದೇವೆ. ಆದರೆ, ಯಾರು ತಲೆಕೆಡಿಸಿಕ್ಕೊಳ್ಳುತ್ತಿಲ್ಲ. ಅಂಬೇಡ್ಕರ್ ವಸತಿ ನಿಲಯ ಪಿಜಿ2 ನಲ್ಲಿ ಒಟ್ಟು 700 ವಿದ್ಯಾರ್ಥಿಗಳಿದ್ದಾರೆ. ಒಬ್ಬ ವಿದ್ಯಾರ್ಥಿಗೆ ಊಟದ ದರ ₹90 ಇದೆ. ಒಂದು ದಿನಕ್ಕೆ ಅಂದಾಜು ₹63,000 ಖರ್ಚು ಮಾಡಬೇಕಾಗುತ್ತದೆ. ಇಷ್ಟು ಖರ್ಚು ಮಾಡಿಯೂ ಕೂಡ ನಮಗೆ ಕಳಪೆ ಗುಣಮಟ್ಟದ ಆಹಾರ ನೀಡುತ್ತಿದ್ದಾರೆ” ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಅಡುಗೆ ಮಾಡುವ ಕೊಠಡಿಯಲ್ಲಿ ಸ್ವಚ್ಛತೆ ಕಾಪಾಡಿಕೊಂಡಿಲ್ಲ. ದನದ ಕೊಟ್ಟಿಗೆ ರೀತಿ ಅಡುಗೆ ಕೋಣೆಯನ್ನು ಇಟ್ಟುಕೊಂಡಿದ್ದಾರೆ. ಅಡುಗೆಯಲ್ಲಿ ಹುಳುಗಳು ಬಿದ್ದಿರುತ್ತವೆ. ಆಹಾರ ಧಾನ್ಯಗಳನ್ನು ಸ್ವಚ್ಛ ಮಾಡುವುದಿಲ್ಲ. ವಾರ್ಡನ್ ಕೆಲವರಿಗೆ ಬಾಳೆಹಣ್ಣು, ಮೊಟ್ಟೆ ಸೇರಿದಂತೆ ಹೆಚ್ಚಿನ ಆಹಾರ ನೀಡುತ್ತಾರೆ. ಬೇರೆ ಯಾವುದೇ ವಿದ್ಯಾರ್ಥಿ ಕೇಳಿದರೆ, ಅವರ ವಿರುದ್ಧ ಉಳಿದವರನ್ನು ಎತ್ತಿ ಕಟ್ಟುತ್ತಾರೆ. ಎಂತಹ ದೊಡ್ಡ ಸಮಸ್ಯೆ ಇದ್ದರೂ ಇಲ್ಲಿ ಯಾವುದೇ ಅಧಿಕಾರಿಗಳು ಬರಲ್ಲ, ನೋಡುವುದೂ ಇಲ್ಲ” ಎಂದರು.

“ನಿತ್ಯ 30 ರಿಂದ 50 ಜನಕ್ಕೆ ಊಟ ಸಿಗುತ್ತಿಲ್ಲ ಮತ್ತು ಕಳಪೆ ಊಟ ನೀಡುತ್ತಿದ್ದಾರೆ. ಈ ಬಗ್ಗೆ ವಾರ್ಡನ್‌ಗೆ ಕರೆ ಮಾಡಿ ಮಾತಾಡಿದರೆ ಅವರು ಏನು ಮಾತಾಡುವುದಿಲ್ಲ. ಹಾಗಾಗಿ, ಸೆ. 5ರಂದು ರಾತ್ರಿ 8 ಗಂಟೆಯಿಂದ 11 ಗಂಟೆಯವರೆಗೂ ಊಟದ ಕೊಠಡಿಯಲ್ಲಿ ಪ್ರತಿಭಟನೆ ಮಾಡಿದೆವು. ಆದರೆ, ಯಾರೊಬ್ಬ ಅಧಿಕಾರಿಗಳು ಬರಲಿಲ್ಲ” ಎಂದು ಈ ದಿನ.ಕಾಮ್‌ಗೆ ವಿದ್ಯಾರ್ಥಿ ರಮೇಶ್ ಹೇಳಿದರು.

ಈ ಸುದ್ದಿ ಓದಿದ್ದೀರಾ?ಬೆಂಗಳೂರಿನ 100 ಕಡೆ ಏಕಕಾಲದಲ್ಲಿ ವಾಣಿಜ್ಯ ತೆರಿಗೆ ಅಧಿಕಾರಿಗಳ ದಾಳಿ

“ದೂರದ ಊರಿನಿಂದ ಬೆಂಗಳೂರಿಗೆ ವಿದ್ಯಾಭ್ಯಾಸ ಮಾಡಲು ಬಂದಿದ್ದೇವೆ ಎಂದು ಇಷ್ಟು ದಿನ ಎಲ್ಲವನ್ನೂ ಸಹಿಸಿಕೊಂಡಿದ್ದೇವೆ. ಇಷ್ಟಾದರೂ ಕಳಪೆ ಊಟ ಕೊಡುತ್ತಿದ್ದಾರೆ. ಪ್ರತಿಭಟನೆ ದಿನ 50 ಜನ ಹುಡುಗರು ಉಪವಾಸ ಇದ್ದರು. ಹಾಸ್ಟೆಲ್ ಊಟದ ಸಮಸ್ಯೆಯಲ್ಲದೇ, ಶೌಚಾಲಯದ ಸಮಸ್ಯೆ, ಸ್ವಚ್ಛತೆ ಸಮಸ್ಯೆ ಎಲ್ಲವೂ ಇದೆ. ಆದರೂ ಸಮಸ್ಯೆ ನಿವಾರಿಸುವವರು ಯಾರು ಇಲ್ಲ. ಬೆಂವಿವಿ ಕುಲಪತಿಗಳು ಬರುವವರೆಗೂ ಹೋರಾಟ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನೆ ಮಾಡಿದೆವು. ಆದರೆ ಅವರು ಬರಲಿಲ್ಲ, ಪೊಲೀಸರನ್ನು ಕರೆಸಿದರು” ಎಂದು ವಿವರಿಸಿದರು.

“ಹಾಸ್ಟೆಲ್‌ನಲ್ಲಿ ರೌಡಿಸಂ ಮಾಡುವ ಒಂದು ವಿದ್ಯಾರ್ಥಿ ಗುಂಪಿದೆ. ಅವರಿಗೆ ವಿಶೇಷ ಆತಿಥ್ಯ ನೀಡಲಾಗುತ್ತದೆ. ಅವರ ರೂಮ್‌ಗಳಿಗೆ ತೆರಳಿ ಹಣ್ಣು, ಮೊಟ್ಟೆ ಕೊಡುವುದು. ಸಾಮಾನ್ಯ ವಿದ್ಯಾರ್ಥಿಗೆ ಈ ರೀತಿಯ ಆತಿಥ್ಯ ನೀಡುವಂತಿಲ್ಲ. ಎಲ್ಲ ವಿದ್ಯಾರ್ಥಿಗಳನ್ನು ಸಮಾನವಾಗಿ ನೋಡಬೇಕು” ಎಂದರು.

“ಬೆಂಗಳೂರು ವಿಶ್ವವಿದ್ಯಾಲಯದ ಹಾಸ್ಟೆಲ್‌ಗಳಲ್ಲಿ ಊಟದ ಸಮಸ್ಯೆ ಇದೆ. ನಮ್ಮ ಪಿಜಿ2 ವಸತಿ ನಿಲಯದಲ್ಲಿ ಹಲವು ವಿದ್ಯಾರ್ಥಿಗಳಿಗೆ ರಾತ್ರಿ ಮತ್ತು ಬೆಳಗಿನ ಜಾವ ಊಟ ಸಿಗುವುದಿಲ್ಲ. ಎಷ್ಟು ದೊಡ್ಡ ಸಮಸ್ಯೆಯಾದರೂ ವಿಶ್ವವಿದ್ಯಾಲಯದ ಆವರಣದಲ್ಲಿರುವ ಯಾವುದೇ ಅಧಿಕಾರಿಗಳು ಬಂದು ವಿಚಾರಿಸುವುದಿಲ್ಲ. ಪ್ರಭಾಕರ ಎಂಬುವವರು ವಾರ್ಡನ್ ಆಗಿ ಬಂದ ಮೊದಲ ಎರಡು ವರ್ಷ ಮೂಲಭೂತ ಸೌಲಭ್ಯಗಳೆಲ್ಲವನ್ನೂ ನೀಡಿದರು. ದಿನಕಳೆದಂತೆ ವಿದ್ಯಾರ್ಥಿಗಳ ಬಲಹೀನತೆ ಅರಿತುಕೊಂಡು ಗೂಂಡಾಗಿರಿ ಮಾಡುವ ವಿದ್ಯಾರ್ಥಿಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡರು. ಹಾಸ್ಟೆಲ್‌ಗೆ ಬರುತ್ತಿದ್ದ ಎಲ್ಲ ಸೌಲಭ್ಯ ಹಾಗೂ ಗುಣಮಟ್ಟವನ್ನು ಕಡಿಮೆ ಮಾಡುತ್ತ ಬಂದರು” ಎಂದು ವಿದ್ಯಾರ್ಥಿ ರಾಮಲಿಂಗ ಅವರು ಈ ದಿನ.ಕಾಮ್‌ಗೆ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...