ಬೀದರ್‌ | ಭಾಲ್ಕಿ ತಾಲ್ಲೂಕಿನಲ್ಲಿ ಜೆಜೆಎಂ ಕಾಮಗಾರಿ ಕಳಪೆ : ತನಿಖೆಗೆ ಆಗ್ರಹ

Date:


ಭಾಲ್ಕಿ ತಾಲ್ಲುಕಿನಲ್ಲಿ ಕೈಗೊಂಡಿರುವ ಜೆಜೆಎಂ ಕಾಮಗಾರಿ ಕಳಪೆಯಾಗಿದ್ದು, ಕೂಡಲೇ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಪ್ರಜಾ ಪ್ರಭುತ್ವ ಸಂರಕ್ಷಣಾ ಸಮಿತಿಯ ಪದಾಧಿಕಾರಿಗಳು ಗುರುವಾರ ಪ್ರತಿಭಟನೆ ನಡೆಸಿದರು.

ಭಾಲ್ಕಿ ಪಟ್ಟಣದ ತಹಸೀಲ್ ಕಚೇರಿಯ ಎದುರು ಪ್ರಜಾ ಪ್ರಭುತ್ವ ಸಂರಕ್ಷಣಾ ಸಮಿತಿಯ ಸಂಸ್ಥಾಪಕ ಗಗನ ಫುಲೆ ನೇತೃತ್ವದಲ್ಲಿ ಒಂದು ದಿನದ ಸಾಂಕೇತಿಕ ಧರಣಿ ಸತ್ಯಾಗ್ರಹ ನಡೆಸಿ, ಜಿಲ್ಲಾಧಿಕಾರಿಗಳಿಗೆ ಹೆಸರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಗ್ರೇಡ್-‌2 ತಹಸೀಲ್ದಾರ್‌ ಅವರಿಗೆ ಸಲ್ಲಿಸಿದರು.

ಗ್ರಾಮೀಣ ಭಾಗದ ಜನರಿಗೆ ಶುದ್ಧ ಕುಡಿಯುವ ನೀರು ಒದಗಿಸುವ ಉದ್ದೇಶದಿಂದ ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಜಲಜೀವನ್ ಮಿಷನ್ ಯೋಜನೆಯಡಿ ಭಾಲ್ಕಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕೈಗೊಂಡಿರುವ ಕಾಮಗಾರಿ ಸಂಪೂರ್ಣ ಕಳಪೆಯಾಗಿದ್ದು, ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ, ಅವ್ಯವಹಾರದಲ್ಲಿ ಭಾಗಿಯಾದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಂಡು ಕಠಿಣ ಶಿಕ್ಷೆಗೆ ಒಳಪಡಿಸಿ, ಉತ್ತಮ ಗುಣಮಟ್ಟದ ಕಾಮಗಾರಿ ನಡೆಸಿ ಜನರಿಗೆ ಶುದ್ಧ ನೀರು ಒದಗಿಸಬೇಕುʼ ಎಂದು ಆಗ್ರಹಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 01 30 at 6.44.38 PM

ಜೆಜೆಎಂ ಕಾಮಗಾರಿ ಪೂರ್ಣಗೊಂಡರೂ ನೀರಿನ ಸಮಸ್ಯೆ :

ʼಜೆಜೆಎಂ ಯೋಜನೆಯಡಿ ಮನೆ-ಮನೆಗೆ ನಳ ನೀರು ಸಂಪರ್ಕ ಕಲ್ಪಿಸುವ ಕಾಮಗಾರಿಯಲ್ಲಿ ಸಾಕಷ್ಟು ನ್ಯೂನತೆಗಳು ಕಂಡು ಬಂದ ಹಿನ್ನಲೆ ಭಾಲ್ಕಿ ತಾಲ್ಲೂಕಿನ ಮದಕಟ್ಟಿ, ಬಾಜೋಳಗಾ, ಬಾಜೋಳಗಾ(ಕೆ), ಬ್ಯಾಲಹಳ್ಳಿ(ಡಬ್ಲ್ಯೂ), ಮೊರಂಬಿ ಹಾಗೂ ರಾ.ಗೌಡಗಾಂವ ಸೇರಿದಂತೆ ಹಲವು ಗ್ರಾಮಗಳಲ್ಲಿ ನೀರಿನ ಸಮಸ್ಯೆ ಉದ್ಭವಿಸಿದೆʼ ಎಂದರು.

ಜೆಜೆಎಂ ಕಾಮಗಾರಿ ಸರಿಪಡಿಸುವಂತೆ ಒತ್ತಾಯಿಸಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಕ್ರಮ ತೆಗೆದುಗೊಳ್ಳದೇ ತಾಲ್ಲೂಕಿನ ಜನತೆಗೆ ದ್ರೋಹ ಬಗೆದಿದ್ದಾರೆ. ಇಂತಹ ಭ್ರಷ್ಟ ಅಧಿಕಾರಿಯನ್ನು ಕೂಡಲೇ ಅಮಾನತುಗೊಳಿಸಬೇಕು. ಎರಡು ವಾರದೊಳಗೆ ನ್ಯಾಯ ಒದಗಿಸದಿದ್ದರೆ ಉಗ್ರ ಹೋರಾಟ ನಡೆಸಲಾಗುವುದುʼ ಎಂದು ಎಚ್ಚರಿಸಿದರು.

ಈ ಸುದ್ದಿ ಓದಿದ್ದೀರಾ? ದೇಶದ ಶೇ. 55 ರಷ್ಟು ಟ್ರಕ್ ಚಾಲಕರಲ್ಲಿ ದೃಷ್ಟಿದೋಷ; ಅಪಘಾತಗಳಿಗೆ ಕಾರಣವಾದ ಕಣ್ಣಿನ ಸಮಸ್ಯೆ!

ಮುಖಂಡರಾದ ಮಹೇಂದ್ರ ಪ್ಯಾಗೆ, ಸಿದ್ದಾರ್ಥ ಪ್ಯಾಗೆ, ಶ್ರೀಮಂತ ಭೋಸ್ಲೆ, ರಾಜೇಂದ್ರ ಕರವಂದ, ಗೌತಮ ಹಳ್ಳಿಖೇಡೆ, ಶ್ರೀನಿವಾಸ ಫುಲೆ, ಗೌತಮ ಡಿಗಾರೆ, ಅಶೋಕ, ಅವಿನಾಶ ಪಟ್ನೆ, ಆಕಾಶ ಸಿಂದೆ, ಎಸ್.ಕೆ.ಜಯ್, ನಾಗಾರ್ಜುನ ಫುಲೆ, ಸುಶೀಲಕುಮಾರ ಕಲವಂಡೆ, ಪುಟ್ಟು ಕಣಜೆ, ಆಕಾಶ, ದಿಲೀಪಕುಮಾರ ಶೇರಿಕಾರ, ಪರಶುರಾಮ ವರ್ಮಾ, ಆಕಾಶ ಕಾಳೆ ಹಾಗೂ ದಲಿತ ಮೈನಾರಿಟಿ ಸೇನೆ, ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಸೇನೆ, ಅಂಬೇಡ್ಕರ್ ಸೇವಾ ಸಮಿತಿಯ ಪದಾಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...