ಬೆಂಗಳೂರು ಗ್ರಾಮಾಂತರ | ನೆಲಮಂಗಲದಲ್ಲಿ ಬಿಜೆಪಿ ವಿರುದ್ಧ ಪೋಸ್ಟರ್ ಅಭಿಯಾನ

Date:

  • ರಾತ್ರೋರಾತ್ರಿ ನಗರದಾದ್ಯಂತ ಪೋಸ್ಟರ್ ಅಂಟಿಸಲಾಗಿದೆ
  • ಶೇ.40 – ಶೇ.50 ತಂಡಗಳ ನಡುವೆ ಫೈನಲ್ ಪಂದ್ಯ ಎಂಬ ಪೋಸ್ಟರ್

ಬಿಜೆಪಿ ವಿರುದ್ಧ ಕಾಂಗ್ರೆಸ್ ಇತ್ತೀಚೆಗೆ ನಡೆಸಿದ ಪೇ-ಸಿಎಂ ಪೋಸ್ಟರ್ ಅಭಿಯಾನ ದೊಡ್ಡ ಸದ್ದು ಮಾಡಿತ್ತು. ಅದರ ಮಾದರಿಯಲ್ಲೇ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ನಗರದ ಹಲವೆಡೆ ರಾತ್ರೋ ರಾತ್ರಿ ಬಿಜೆಪಿ ವಿರುದ್ಧದ ಪೋಸ್ಟರ್‌ಗಳು ಕಾಣಿಸಿಕೊಂಡಿವೆ.

ಬಿಜೆಪಿ ಸರ್ಕಾರದ ಮೇಲಿನ ಭ್ರಷ್ಟಾಚಾರದ ಆರೋಪಗಳನ್ನು ಗುರಿಯಾಗಿಟ್ಟುಕೊಂಡು ‘ಭ್ರಷ್ಟ ಬಿಜೆಪಿ ಕಪ್’ ಪಂದ್ಯಾವಳಿ ಎಂಬ ಪೋಸ್ಟರ್‌ನ್ನು ರಾತ್ರಿ ವೇಳೆಯಲ್ಲಿ ಅಂಟಿಸಲಾಗಿದೆ.

ಪೋಸ್ಟರ್‌ನಲ್ಲಿ ‘ಭ್ರಷ್ಟ ಬಿಜೆಪಿ ಕಪ್; ಟೀಮ್ 40% ಮತ್ತು ಟೀಮ್ 50% ನಡುವೆ ಫೈನಲ್ ಪಂದ್ಯದ ಹಣಾಹಣಿ ಮರೆಯದೇ ವೀಕ್ಷಿಸಿ’ ಎಂದು ಬರೆಯಲಾಗಿದೆ. ಈ ಪೋಸ್ಟರ್‌ಗಳನ್ನು ಯಾರು ಅಂಟಿಸಿದ್ದಾರೆ ಎಂಬ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ. ನೆಲಮಂಗಲ ನಗರದ ಉಪನೊಂದಣಾಧಿಕಾರಿ ಕಚೇರಿ ಸೇರಿದಂತೆ ಹಲವೆಡೆ ಭಿತ್ತಿ ಪತ್ರ ಅಂಟಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟೀಮ್ 40% ಮತ್ತು ಟೀಮ್ 50% ಪರ್ಸೆಂಟ್ ಎಂದು ಎರಡು ತಂಡಗಳನ್ನು ಉಲ್ಲೇಖ ಮಾಡಲಾಗಿದ್ದು, ಟೀಮ್ 40% ನಲ್ಲಿ ಬಿ.ಎಲ್ ಸಂತೋಷ್ ಹಾಗೂ ಟೀಮ್ 50% ನಲ್ಲಿ ಬಿಎಸ್‌ ಯಡಿಯೂರಪ್ಪ ಮತ್ತು ತಂಡ ಎಂದು ಬರೆಯಲಾಗಿದೆ.

40% ತಂಡದಲ್ಲಿ ಬಿ.ಎಲ್ ಸಂತೋಷ್, ಅಶ್ವಥ ನಾರಾಯಣ್, ಬಿ.ಸಿ ನಾಗೇಶ್, ಬಿ.ಸಿ ಪಾಟೀಲ್, ಈಶ್ವರಪ್ಪ, ಎಸ್.ಟಿ ಸೋಮಶೇಖರ್, ಯತ್ನಾಳ್, ಸಿ.ಟಿ ರವಿ, ಮುನಿರತ್ನ, ವಿ ಸೋಮಣ್ಣ, ಸಂಸದ ತೇಜಸ್ವಿ ಸೂರ್ಯ ಅವರ ಫೋಟೊ ಹಾಕಲಾಗಿದೆ.
ಇನ್ನೂ 50% ತಂಡದಲ್ಲಿ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮುನಿಸ್ವಾಮಿ, ಪ್ರತಾಪ್ ಸಿಂಹ, ಕೆ.ಸಿ ನಾರಾಯಣಗೌಡ, ಆರ್ ಅಶೋಕ್, ವಿಜಯೇಂದ್ರ, ನಿರ್ಮಲಾ ಸೀತಾರಾಮನ್, ಶೋಭಾ ಕರಂದಾಜ್ಲೆ, ರೇಣುಕಾಚಾರ್ಯ, ಎಂಟಿಬಿ ನಾಗರಾಜ್, ಎಸ್.ಆರ್ ವಿಶ್ವನಾಥ್ ಅವರ ಫೋಟೊ ಹಾಕಲಾಗಿದೆ.

ಈ ಸುದ್ದಿಓದಿದ್ದೀರಾ? ಚಾಮರಾಜನಗರ | ಕಲ್ಲುಕ್ವಾರಿ ದುರಂತ ಪ್ರಕರಣ; ವರ್ಷದ ಬಳಿಕ...

ಫೈನಲ್ ಪಂದ್ಯ ನೋಡಲು ಪೋಸ್ಟರ್‌ನಲ್ಲಿ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡಿ ಎಂದು ಮುದ್ರಿಸಲಾಗಿದೆ. ಸ್ಕ್ಯಾನ್ ಮಾಡಿದರೆ, ಸರ್ಕಾರದ ಹಗರಣಗಳು ಎನ್ನಲಾದ ವೆಬ್ಸೈಟ್ ತೆರೆದುಕೊಳ್ಳಲಿದೆ. ಪಿಎಸ್ಐ ಅಕ್ರಮ, ಬಿಟ್ ಕಾಯಿನ್ ಹಗರಣ, ರೌಡಿ ಮೋರ್ಚಾ ಸೇರಿದಂತೆ ಬಿಜೆಪಿ ನೇತೃತ್ವದ ಸರ್ಕಾರದ ಹಲವು ವೈಪಲ್ಯಗಳು ವೆಬ್ಸೈಟ್ ನಲ್ಲಿ ಇದ್ದು, ಆ ಮುಖಾಂತರ ಬಿಜೆಪಿ ವಿರುದ್ಧ ಕ್ಯಾಂಪೇನ್ ಮಾಡಲಾಗುತ್ತಿದೆ.

ಬಿತ್ತಿ ಪತ್ರದ ಹಿಂಬದಿ ಅಭಿಯಾನದ ನಾಲ್ಕು ಮುಖ್ಯ ಉದ್ದೇಶಗಳನ್ನು ಉಲ್ಲೇಖೆ ಮಾಡಲಾಗಿದೆ. ಬಿಜೆಪಿ ಕೋಮುವಾದಿ ಪಕ್ಷವನ್ನು ಸೋಲಿಸುವುದು ಪ್ರಮುಖ ಉದ್ದೇಶ, ಶಿಕ್ಷಣ ವಿರೋಧಿ ಕಾರ್ಯಗಳ ಪಟ್ಟಿ, ಸಂವಿಧಾನ ವಿರೋಧಿ ನಡೆಗಳ ಪಟ್ಟಿ, ರೈತ ವಿರೋಧ ಕಾರ್ಯಗಳ ಪಟ್ಟಿಯನ್ನು ಹಾಕಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...