ಕಲಬುರಗಿ | ಕಲ್ಲಿಗೆ ಹಾಲು ಎರೆಯುವುದು ಮೌಢ್ಯದ ಪರಮಾವಧಿ: ಸಿದ್ಧಬಸವ ಕಬೀರ್‌ ಸ್ವಾಮಿ

Date:

ಕಲ್ಲಿಗೆ ಹಾಲು ಎರೆಯುವುದು, ಹಾವಿಗೆ ಹಾಲು ಕುಡಿಸುವುದು, ಮೌಢ್ಯದ ಪರಮಾವಧಿ, ಬಸವಣ್ಣನವರು ಹೇಳಿದಂತೆ ‘ಎನ್ನ ಕಾಲೇ ಕಂಬ, ದೇಹವೇ ದೇಗುಲ, ಶಿರವನ್ನ ಕಳಸವಯ್ಯ’ ಎನ್ನುವಂತೆ ವೈಜ್ಞಾನಿಕ ಚಿಂತನೆಗಳು ಮೈಗೂಡಿಸಿಕೊಂಡರೆ ಬದುಕು ಬದುಕು ಸಾರ್ಥಕವಾಗುತ್ತದೆ ಎಂದು ಚಿಗರಳ್ಳಿ ಮಠದ ಸಿದ್ದಬಸವ ಕಬೀರ್ ಸ್ವಾಮೀಜಿ ಹೇಳಿದರು.

ಜೇವರ್ಗಿ ತಾಲೂಕಿನ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಾನವ ಬಂಧತ್ವ ವೇದಿಕೆ ಹಾಗೂ ದಲಿತ ಸೇನೆ ಆಯೋಜಿಸಿದ್ದ ಬಸವ ಪಂಚಮಿ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, “ಬಸವಾದಿ ಶರಣರ ವಚನಗಳನ್ನು ಪಠಿಸಿದರೆ ಸಾಲದು ಅವರ ಸತ್ಯ ನಿಷ್ಢೆ ಹಾಗೂ ಕಾಯಕ ನಿಜ ಜೀವನದಲ್ಲಿ ಅನುಷ್ಠಾನಗೊಳಿಸಿದರೆ ನಾಔು ಇನ್ನೊಬ್ಬರಿಗೆ ಆದರ್ಶವಾಗಬಹುದು” ಎಂದರು.

ಚಿಂತಕ, ಪತ್ರಕರ್ತ ಡಾ.ಶಿವರಂಜನ್ ಸತ್ಯಂಪೇಟೆ ಅವರು ಮಾತನಾಡಿ, “ಬಸವ ಪಂಚಮಿಯನ್ನು ವಿಶೇಷ ರೀತಿಯಲ್ಲಿ ಆಚರಣೆ ಮಾಡುತ್ತಿರುವ ಸಂಘಟನೆಯ ಕಾರ್ಯ ಶ್ಲಾಘನೀಯವಾಗಿದೆ, ನಿಮ್ಮ ಬೆಂಬಲಕ್ಕೆ ನಾವು ಸದಾ ಇರುತ್ತೇವೆ, ಜೇವರ್ಗಿ ತಾಲೂಕಿನ ಮನೆ-ಮನೆಗೂ ಬಸವಣ್ಣನವರ ವಿಚಾರಗಳು ಮುಟ್ಟಿಸೋಣ” ಎಂದು ನುಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾಲೇಜು ಪ್ರಾಂಶುಪಾಲ ಪ್ರೊ ಕರೀಘೂಳೇಶ್ವರ ಮಾತನಾಡಿ, ” ಬುದ್ಧ ಬಸವ ಅಂಬೇಡ್ಕರ್‌ ಅವರ ವೈಜ್ಞಾನಿಕ ಪ್ರಜ್ಞೆ ಬೆಳೆಸಿಕೊಂಡರೆ ಸಮಾಜ ಬದಲಾಗಲು ಸಾಧ್ಯ, ಇಂಥ ಸಂಘಟನೆಗಳಿಂದ ಮಾತ್ರ ವೈಚಾರಿಕ ಚಿಂತನೆ ಪಸರಿಸಲು ಸಾಧ್ಯ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ ? ಕಲಬುರಗಿ | ಬಿಜೆಪಿ ನಾಯಕ, ರೌಡಿ ಶೀಟರ್‌ ಮಣಿಕಂಠ ರಾಠೋಡ್ ಪೊಲೀಸ್‌ ವಶಕ್ಕೆ

ಕಾರ್ಯಕ್ರಮದಲ್ಲಿ ದಲಿತ ಸೇನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಮಾನವ ಬಂಧುತ್ವ ವೇದಿಕೆ ಜೇವರ್ಗಿ ತಾಲೂಕ ಸಂಚಾಲಕ ಶಿವಕುಮಾರ ಗೋಲಾ, ದಲಿತ ಸೇನೆ ಜೇವರ್ಗಿ ತಾಲ್ಲೂಕ ಅಧ್ಯಕ್ಷ ಶಿವಶರಣ ಮಂದೇವಾಲ, ಉಪಾಧ್ಯಕ್ಷ ಜಗದೀಶ್ ನಡಗಟ್ಟಿ, ಯುವ ಘಟಕದ ಅಧ್ಯಕ್ಷ ಖಮರ್ ಪೀರಾಸಾಬ ಸೇರಿದಂತೆ ಪ್ರಮುಖರಾದ ಪ್ರಕಾಶ್ ಕಾಂಬಳೆ, ಭಾಗೇಶ್ ಸೊನ್ನ, ರಮೇಶ್ ಬಿರಾಳ, ಅಂಬರೀಷ್ ಬಿರಾಳ,ಭಾಗಣ್ಣ ಗೋಲಾ,ಯಮನಪ್ಪ ಗೋಲಾ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...