ಪ್ರಜ್ವಲ್ ಲೈಂಗಿಕ ಹಗರಣ | ಎಸ್‌ಐಟಿ ಮುಂದೆ ರೇವಣ್ಣ ಹಾಜರಾಗುವ ಸಾಧ್ಯತೆ

Date:

ಎಚ್‌.ಡಿ. ದೇವೇಗೌಡರ ಮೊಮ್ಮಗ, ಹಾಸನ ಸಂಸದ ಪ್ರಜ್ವಲ್ ರೇವಣ್ಣನದ್ದು ಎನ್ನಲಾದ ಅಶ್ಲೀಲ ವಿಡಿಯೋಗಳ ಪೆನ್‌ಡ್ರೈವ್ ಪ್ರಕರಣ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ, ತನಿಖೆಗೆ ಹಾಜರಾಗುವಂತೆ ಆರೋಪಿಗಳಾದ ರೇವಣ್ಣ ಮತ್ತು ಪ್ರಜ್ವಲ್‌ಗೆ ನೋಟಿಸ್‌ ನೀಡಿತ್ತು. ಆದರೂ, ತನಿಖೆಗೆ ಹಾಜರಾಗದ ಪ್ರಜ್ವಲ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿ ಮಾಡಿದೆ.

ಹೊಳೆನರಸೀಪುರದಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಮಾಜಿ ಸಚಿವ ರೇವಣ್ಣ ‘ಎ1’ ಆರೋಪಿಯಾಗಿದ್ದು, ಗುರುವಾರ ಎಸ್‌ಐಟಿ ಮುಂದೆ ಹಾಜರಾಗುವ ಸಾಧ್ಯತೆಗಳಿವೆ. ತಮ್ಮ ನಿವಾಸದಲ್ಲಿ ಹೋಮ ಮಾಡಿಸಿರುವ ರೇವಣ್ಣ, ದೇವರ ಮೊರೆ ಹೋಗಿದ್ದು, ಬೆಂಗಳೂರಿಗೆ ಬಂದಿದ್ದಾರೆ.

“ಎಸ್‍ಐಟಿ ತಂಡ ಮನೆಗೆ ನೋಟಿಸ್ ಅಂಟಿಸಿದ್ದಾರೆ. ತನಿಖೆಗೆ ಎಲ್ಲ ರೀತಿಯಲ್ಲೂ ಸಹಕರಿಸುತ್ತೇವೆ. ನಾನು ಯಾವುದೇ ತಪ್ಪು ಮಾಡಿಲ್ಲ. ಎಲ್ಲವನ್ನೂ ಎದುರಿಸುತ್ತೇನೆ” ಎಂದು ರೇವಣ್ಣ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಆರೋಪಿ ಪ್ರಜ್ವಲ್ ಜರ್ಮನಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಎಸ್‌ಐಟಿ ನೋಟಿಸ್‌ ನೀಡಿದರೂ, ವಿಚಾರಣೆ ಹಾಜರಾಗದ ಆರೋಪಿ, “ನಾನು​ ವಿದೇಶದಲ್ಲಿರುವುದರಿಂದ ನನ್ನ ವಕೀಲರ ಮೂಲಕ ಎಸ್​ಐಟಿ ಬಳಿ ಕಾಲಾವಕಾಶ ಕೇಳಿದ್ದೇನೆ. 7 ದಿನ ಕಾಲಾವಕಾಶ ನೀಡಬೇಕೆಂದು ಮನವಿ ಮಾಡಿದ್ದೇನೆ” ಎಂದು ಟ್ವೀಟ್ ಮಾಡಿದ್ದಾರೆ.

ಎಸ್‌ಐಟಿ ತಂಡ ತನಿಖೆಯನ್ನು ತೀವ್ರಗೊಳಿಸಿದ್ದು, ಮಂಗಳವಾರ ಹಾಸನದಲ್ಲಿ ಸಂತ್ರಸ್ತೆಯರನ್ನು ಭೇಟಿ ಮಾಡಿದೆ. ವಿಚಾರಣೆಗೆ ಸಹಕರಿಸುವಂತೆ ಕೋರಿದೆ. ಆದರೆ, ತನಿಖೆಗೆ ಸಹಕರಿಸಲು ಸಂತ್ರಸ್ತೆಯರು ಹಿಂದೇಟು ಹಾಕುತ್ತಿದ್ದಾರೆ ಎಂದು ತಿಳಿದುಬಂದಿದೆ.

ಪೆನ್‌ಡ್ರೈವ್ ವಿಚಾರವಾಗಿ ವಿಡಿಯೋ ಬಿಡುಗಡೆ ಮಾಡಿರುವ ಪ್ರಜ್ವಲ್‌ನ ಮಾಜಿ ಕಾರು ಡ್ರೈವರ್ ಕಾರ್ತಿಕ್, ತಾನು ಬಿಜೆಪಿ ಮುಖಂಡ ದೇವರಾಜೇಗೌಡಗೆ ಮಾತ್ರವೇ ವಿಡಿಯೋಗಳನ್ನು ನೀಡಿದ್ದೇನೆ. ಬೇರೆ ಯಾರಿಗೂ ಕೊಟ್ಟಿಲ್ಲ ಎಂದು ಹೇಳಿದ್ದಾರೆ.

ಪೆನ್‌ಡ್ರೈವ್‌ಗಳು ಪತ್ತೆಯಾಗದೆ ಪ್ರಜ್ವಲ್‌ ರೇವಣ್ಣ ಒಬ್ಬರೇ ಆರೋಪಿ ಎಂದು ಹೇಳಲಾಗಿತ್ತು. ಆದರೆ, ಈ ಕೃತ್ಯಗಳಲ್ಲಿ ಮಾಜಿ ಸಚಿವ ರೇವಣ್ಣ ಕೂಡ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಓರ್ವ ಸಂತ್ರಸ್ತೆ ರೇವಣ್ಣ ಅವರನ್ನೇ ಎ1 ಆರೋಪಿಯನ್ನಾಗಿಸಿ ಪ್ರಕರಣ ದಾಖಲಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...