ಉಡುಪಿ | ಶಾಸಕ ಸುನಿಲ್‌ ಕುಮಾರ್‌ ವಿರುದ್ಧ ದೂರು ದಾಖಲಿಸಿದ ಪ್ರಮೋದ್‌ ಮುತಾಲಿಕ್‌

Date:

  • ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್: ಸುನಿಲ್ ಕುಮಾರ್
  • ಟೈಗರ್ ಗ್ಯಾಂಗ್ ಹೆಸರಿನಲ್ಲಿ ಎಷ್ಟು ಹಿಂದೂಗಳ‌ ಹತ್ಯೆ ಮಾಡಿಸಿದ್ದೀರಿ

ಕಾರ್ಕಳ ಕ್ಷೇತ್ರದ ಬಿಜೆಪಿ ಶಾಸಕ ಸುನಿಲ್ ಕುಮಾರ್ ವಿರುದ್ಧ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ದೂರು ದಾಖಲಿಸಿದ್ದಾರೆ.

ಕಾರ್ಕಳ ನಗರದ ಠಾಣೆಗೆ ಬೆಂಬಲಿಗರೊಂದಿಗೆ ತೆರಳಿದ ಪ್ರಮೋದ್ ಮುತಾಲಿಕ್, ಶಾಸಕರ ವಿರುದ್ಧ ಮಾನಹಾನಿ ಕೇಸ್ ದಾಖಲಿಸಿದ್ದಾರೆ. ಬಿಜೆಪಿ ವಿಜಯೋತ್ಸವ ಸಭೆಯಲ್ಲಿ ಮುತಾಲಿಕ್ ವಿರುದ್ಧ ಸುನಿಲ್ ಕುಮಾರ್ ವಾಗ್ದಾಳಿ ನಡೆಸಿದ್ದರು. “ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್” ಎಂದು ನೇರ ಆರೋಪ ಮಾಡಿದ್ದರು.

ಈ ಹಿನ್ನೆಲೆ ಪ್ರಮೋದ್ ಮುತಾಲಿಕ್ ಸೋಮವಾರ ದೂರು ದಾಖಲಿಸಿದ್ದಾರೆ. ಇತ್ತೀಚೆಗೆ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ ಸುನಿಲ್ ಕುಮಾರ್ ಮತ್ತು ಪ್ರಮೋದ್ ಮುತಾಲಿಕ್ ಮುಖಾಮುಖಿಯಾಗಿದ್ದರು. ಚುನಾವಣೆಯಲ್ಲಿ ಪ್ರಮೋದ್ ಮುತಾಲಿಕ್ ಕೇವಲ ಸುಮಾರು 4 ಸಾವಿರ ಮತಗಳನ್ನು ಪಡೆದುಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುನಿಲ್ ಕುಮಾರ ಏನು ಹೇಳಿದ್ದರು?

“ನೈಜ ಹಿಂದುತ್ವದ ಹೆಸರಲ್ಲಿ ಡೀಲ್ ಮಾಸ್ಟರ್ ಬಂದ್ರು, ಮೊದಲ ಬಾರಿಗೆ ಪ್ರಮೋದ್ ಮುತಾಲಿಕ್ ಹೆಸರು ಬಳಸುತ್ತಿದ್ದೇನೆ. ಯಾಕೆ ಇಲ್ಲಿಗೆ ಬಂದ್ರಿ ನೀವು? ಮುಂದಿನ ಲೋಕಸಭೆಗೆ ಎಲ್ಲಿಗೆ ಡೀಲ್ ಮಾಡಲು ಹೊರಟಿದ್ದೀರಾ? ಉತ್ತರ ಕರ್ನಾಟಕದಲ್ಲಿ ಟೈಗರ್ ಗ್ಯಾಂಗ್ ಹೆಸರಿನಲ್ಲಿ ಎಷ್ಟು ಹಿಂದೂಗಳ‌ ಹತ್ಯೆ ಮಾಡಿಸಿದ್ದೀರಿ” ಎಂದು ಸುನಿಲ್ ಕುಮಾರ್ ಪ್ರಶ್ನೆ ಮಾಡಿದ್ದರು.

ಈ ಸುದ್ದಿ ಓದಿದ್ದೀರಾ? ಯು ಟಿ ಖಾದರ್‌ ವಿಧಾನಸಭಾ ನೂತನ ಸ್ವೀಕರ್‌; ಮಂಗಳವಾರ ನಾಮಪತ್ರ ಸಲ್ಲಿಕೆ

“ನಾನು ಹತ್ತು ಬಾರಿ ಹೇಳುತ್ತಿದ್ದೇನೆ ಪ್ರಮೋದ್ ಮುತಾಲಿಕ್ ಒಬ್ಬ ಡೀಲ್ ಮಾಸ್ಟರ್​ ಎಂದು ಹತ್ತು ಬಾರಿ ಹೇಳಲು ಸಿದ್ಧ. ಹಣ ಸಿಗುತ್ತೆ ಅಂದ್ರೆ ಏನು ಬೇಕಾದರೂ ಮಾಡಬಲ್ಲರು. ಅಭಿವೃದ್ಧಿಯನ್ನು ಅಪಹಾಸ್ಯ, ಅವಮಾನ ಮಾಡಿದ್ರು. ಪರಶುರಾಮ ಕ್ಷೇತ್ರದ ಅಣೆಕಟ್ಟು ಜಾಗದಲ್ಲಿ ನೀರಿಲ್ಲ ಎಂದು ಮುತಾಲಿಕ್ ಹಾಗೂ ಬೆಂಬಲಿಗರು ಕ್ರಿಕೆಟ್ ಆಡಿದ್ರು, ಅಣೆಕಟ್ಟು ಮೇಲಿಂದ ಹಾರಿ ಎತ್ತರವೂ ಗೊತ್ತಾಗತ್ತೆ” ಎಂದು ವ್ಯಂತ್ಯವಾಡಿದ್ದರು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...