‘ಪ್ರಸಾದ್ ಯೋಜನೆ’ಯಿಂದ ಚಾಮುಂಡಿಬೆಟ್ಟ ಪಾರಂಪರಿಕತೆಗೆ ದಕ್ಕೆಯಾಗದಂತೆ ಅಭಿವೃದ್ಧಿ ಮಾಡಲಾಗುವುದು: ಸಚಿವ ಮಹದೇವಪ್ಪ

Date:

‘ಪ್ರಸಾದ್ ಯೋಜನೆ’ಯಿಂದ ಚಾಮುಂಡಿ ಬೆಟ್ಟದ ಪಾರಂಪರಿಕತೆಗೆ ಯಾವುದೇ ದಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಹೆಚ್.ಸಿ. ಮಹದೇವಪ್ಪ ತಿಳಿಸಿದರು.

ಮೈಸೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಪ್ರಸಾದ್ ಯೋಜನೆ’ಯ ‘ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಚಾಮುಂಡಿ ಬೆಟ್ಟದಲ್ಲಿ ಪರಿಸರಕ್ಕೆ ದಕ್ಕೆ ಆಗದಂತೆ ಅಭಿವೃದ್ಧಿ ಮಾಡಲಾಗುತ್ತಿದೆ. ಬೆಟ್ಟಕ್ಕೆ ಭೇಟಿ ನೀಡುವ ಭಕ್ತಾದಿಗಳ ಸಂಖ್ಯೆ ಹೆಚ್ಚಳವಾಗುತ್ತಿದೆ. ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ದರ್ಶನಕ್ಕೆ ಸೂಕ್ತ ವ್ಯವಸ್ಥೆ ಮಾಡಲು ಅಭಿವೃದ್ಧಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಚಾಮುಂಡಿ ಬೆಟ್ಟದಲ್ಲಿ ವಾಸಿಸುವ ಸಾರ್ವಜನಿಕರಿಗೆ ಯಾವುದೇ ತೊಂದರೆ ಆಗದಂತೆ ಅಭಿವೃದ್ಧಿ ಕಾರ್ಯಗಳನ್ನು ಮಾಡಲಾಗುವುದು. ಆದ್ದರಿಂದಲೇ, ಇಂದು ಚಾಮುಂಡಿ ಬೆಟ್ಟದ ನಿವಾಸಿಗಳ ಅಹವಾಲುಗಳನ್ನು ಹಾಗೂ ಅನಿಸಿಕೆಗಳನ್ನು ಸ್ವೀಕರಿಸಲಾಗುತ್ತಿದೆ. ನಿವಾಸಿಗಳ ಸಲಹೆಗಳನ್ನು ಪಡೆದು ಅದರಂತೆ ಯೋಜನೆ ರೂಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಾಸಕರಾದ ಜಿ.ಟಿ. ದೇವೇಗೌಡ ಮಾತನಾಡಿ, ವಿವಿಐಪಿ ದರ್ಶನದ ಸಂಧರ್ಭದಲ್ಲಿ ಇತರೆ ಜನರು 50 ಜನ ನುಗ್ಗುವುದರಿಂದ ಗೊಂದಲ ಉಂಟಾಗುತ್ತದೆ. ಇದಕ್ಕೆ ಒಂದು ಪರಿಹಾರವನ್ನು ರೂಪಿಸಬೇಕು. ದೇವಸ್ಥಾನದ ಪ್ರವೇಶಕ್ಕೆ ಒಂದು ಕಡೆ, ಹೊರಗೆ ಬರಲು ಇನ್ನೊಂದು ಕಡೆ ಪ್ರತ್ಯೇಕ ವ್ಯವಸ್ಥೆ ಮಾಡಬೇಕು. ಈ ಹಿಂದೆ ಬೆಟ್ಟದಲ್ಲಿ ಅಂಗಡಿ ಮಳಿಗೆಗಳನ್ನು ಇದ್ದವರಿಗೆ, ಮೂಲದಲ್ಲಿ ಇದ್ದ ಅರ್ಹರಿಗೆ ಮಾತ್ರ ಮಳಿಗೆ ಮಾಡಲು ಅವಕಾಶ ನೀಡಬೇಕು ಎಂದು ಸಲಹೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಮಲೆ ಮಹದೇಶ್ವರ ಬೆಟ್ಟ | ಚಿರತೆ ದಾಳಿಗೆ ಯುವಕ ಮೃತಪಟ್ಟ ಪ್ರಕರಣ; ರೈತ ಸಂಘದಿಂದ ರಸ್ತೆ ತಡೆ

ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ ಮಾತನಾಡಿ, ಪ್ರಸಾದ್ ಯೋಜನೆಯಡಿ ₹45.70 ಕೋಟಿ ರೂಪಾಯಿ ಅನುಧಾನ ಮಂಜೂರು ಆಗಿರುತ್ತದೆ. ಸುಗಮ ದರ್ಶನಕ್ಕೆ ವ್ಯವಸ್ಥೆ ಮಾಡಲು ಸರತಿ ಸಾಲಿಗೆ ಕಲ್ಲಿನ ಕ್ಯೂ ಮಂಟಪ ಮಾಡಲಾಗುತ್ತಿದೆ. ಮಹಾಬಲೇಶ್ವರ ದೇವಸ್ಥಾನದ ಪಕ್ಕದಲ್ಲಿ ಕ್ಯೂ ಬಂದು ದೇವಸ್ಥಾನದ ಮುಂಭಾಗದಲ್ಲಿ ಬಂದು ಸೇರುತ್ತದೆ ಎಂದು ಮಾಹಿತಿ ನೀಡಿದರು.

ಈ ವಿಶೇಷ ಸುದ್ದಿ ಓದಿದ್ದೀರಾ? ಮೈಸೂರು ಜಿಲ್ಲೆಯಾದ್ಯಂತ 18 ಸಾವಿರಕ್ಕೂ ಅಧಿಕ BPL ಕಾರ್ಡ್ ರದ್ದು; ಅನರ್ಹತೆಗೆ ಕಾರಣಗಳೇನು?

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್. ಯುಕೇಶ್ ಕುಮಾರ್, ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ರೂಪ, ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...