ಉಡುಪಿ | ಸರಕಾರದ ಯೋಜನೆಗಳ ಆರ್ಥಿಕ ನೆರವು ಅರ್ಹ ಫಲಾನುಭವಿಗಳಿಗೆ ತಲುಪಿಸಿ : ಸಿ.ಇ.ಒ ಪ್ರತೀಕ್ ಬಾಯಲ್

Date:

ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪ್ರಾಯೋಜಿತ ಯೋಜನೆಗಳಡಿ ಆಯ್ಕೆಯಾಗಿ ಆರ್ಥಿಕ ನೆರವು ನೀಡಲು ಶಿಫಾರಸಾದ ಅರ್ಜಿಗಳನ್ನು ಆದ್ಯತೆಯ ಮೇಲೆ ಜನರಿಗೆ ಅನುಕೂಲವಾಗುವಂತೆ ಸರಳ ರೀತಿಯಲ್ಲಿ ನಿಯಮಾನುಸಾರ ವಿಲೇವಾರಿ ಮಾಡಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು.

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ.ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಪಿ.ಎಂ.ವಿಶ್ವಕರ್ಮ ಯೋಜನೆಯಡಿ ಈವರೆಗೆ 5661 ಅರ್ಜಿಗಳು ಸ್ವೀಕೃತವಾಗಿದ್ದು, 1337 ಅರ್ಜಿಗಳು ತಿರಸ್ಕೃತಗೊಂಡು, 3937 ಫಲಾನುಭವಿಗಳಿಗೆ 35.29 ಕೋಟಿ ರೂ. ಸಾಲ ವಿತರಿಸಲಾಗಿದೆ. ತಿರಸ್ಕೃತ ಅರ್ಜಿಗಳ ಸಂಖ್ಯೆ ಕಡಿಮೆಯಾಗಬೇಕು ಎಂದ ಅವರು, ಬಾಕಿ ಇರುವ ಅರ್ಜಿಗಳ ವಿಲೇವಾರಿಗೆ ಶೀಘ್ರ ಕ್ರಮ ವಹಿಸಬೇಕು ಎಂದರು.

ಜಿಲ್ಲೆಯ ಉದ್ಯಮಿಗಳಿಗೆ ಜೀವನೋಪಾಯದ ಚಟುವಟಿಕೆಗಳನ್ನು ನಿರ್ಮಿಸಲು ಹಾಗೂ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಠಿಸಲು ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ 129 ನಿಗಧಿತ ಗುರಿಗೆ, 91 ಜನ ಫಲಾನುಭವಿಗಳಿಗೆ 10.06 ಕೋಟಿ ಆರ್ಥಿಕ ನೆರವು ವಿತರಿಸಲಾಗಿದೆ. ಯಾವುದೇ ಯೋಜನೆಗಳಡಿ ಅರ್ಜಿ ಸಲ್ಲಿಕೆಯಾದಾಗ ಅರ್ಜಿಗಳನ್ನು ಬಾಕಿ ಉಳಿಸದೇ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಬೇಕು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಗೆ ಆದ್ಯತೆಯ ಮತ್ತು ಆದ್ಯತೆಯೇತರ ವಲಯಗಳೆರಡಕ್ಕೂ ಒಟ್ಟಾರೆಯಾಗಿ 15,514.16 ಕೋಟಿ ರೂ.ಗಳ ವಾರ್ಷಿಕ ಕ್ರೆಡಿಟ್ ಯೋಜನೆ ಗುರಿಯನ್ನು ನಿಗದಿಪಡಿಸಲಾಗಿದ್ದು, ಈವರೆಗೆ 8,941.11 ಗುರಿ ಸಾಧಿಸಿ, ಶೇ. 57.63 ಸಾಧನೆ ಮಾಡಲಾಗಿದೆ ಎಂದ ಅವರು, ಕೃಷಿ ವಲಯಕ್ಕೆ 4230 ನಿಗಧಿತ ಗುರಿಗೆ 2274 ಗುರಿ ಸಾಧಿಸಿ ಶೇ. 53.76, ಎಂ.ಎಸ್.ಎಂ.ಇ ವಲಯಕ್ಕೆ 3713 ಗುರಿ ನಿಗಧಿಪಡಿಸಲಾಗಿದ್ದು, 2426 ಗುರಿ ಸಾಧಿಸಿ ಶೇ. 65.35 ರಷ್ಟು, ಶಿಕ್ಷಣ ವಲಯಕ್ಕೆ 187 ನಿಗಧಿತ ಗುರಿಗೆ 116 ಗುರಿ ಸಾಧಿಸಿ ಶೇ. 62.12 ರಷ್ಟು, ವಸತಿ ಕ್ಷೇತ್ರಗಳಿಗೆ 510 ನಿಗಧಿತ ಗುರಿಗೆ 111 ಗುರಿ ಸಾಧಿಸಿ ಶೇ. 21.85 ರಷ್ಟು, ಇತರೆ ಕ್ಷೇತ್ರಗಳಿಗೆ 399 ನಿಗಧಿತ ಗುರಿಗೆ, 194 ಗುರಿ ಸಾಧಿಸಿ ಶೇ. 48.46 ಹಾಗೂ ಆದ್ಯತೇತರ ವಲಯಗಳಿಗೆ 6474 ನಿಗಧಿತ ಗುರಿಗೆ, 3819 ಗುರಿ ಸಾಧಿಸಿ ಶೇ. 58.99 ರಷ್ಟು ಸಾಧನೆ ಮಾಡಲಾಗಿದೆ ಎಂದರು.

ಬೆಂಗಳೂರು ಆರ್.ಬಿ.ಐ ಎಫ್.ಐ.ಡಿ.ಡಿ ಲೀಡ್ ಡಿಸ್ಟಿçಕ್ಟ್ ಆಫೀಸರ್ ನಿಶಾ ಠಾಕೂರ್, ಮಾತನಾಡಿ, ಆರ್.ಬಿ.ಐ ನಿಯಮಾನುಸಾರ ಜಿಲ್ಲೆಗಳ ಸಿ.ಡಿ ಅನುಪಾತವು ಶೇ. 50 ಕ್ಕಿಂತ ಕಡಿಮೆ ಇರಬಾರದು. ಇದನ್ನು ಹೆಚ್ಚಿಸಲು ಎಲ್ಲಾ ಬ್ಯಾಂಕ್‌ಗಳ ಅಧಿಕಾರಿಗಳೂ ಕಾರ್ಯಪ್ರವೃತ್ತರಾಗಬೇಕು ಎಂದರು.

ಕೆನರಾ ಬ್ಯಾಂಕ್ ರೀಜನಲ್ ಮ್ಯಾನೆಜರ್ ಮಹಾಮಾಯ ಪ್ರಸಾದ್ ರಾಯ್ ಮಾತನಾಡಿ, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಬ್ಯಾಂಕಿಂಗ್ ಠೇವಣಿ ಅನುಪಾತವು ಶೇ.47.66 ಇದ್ದು, ಪ್ರಸಕ್ತ ಸಾಲಿನಲ್ಲಿ ಶೇ.48.62 ರಷ್ಟಾಗಿ ಶೇ. 0.96 ರಷ್ಟು ಏರಿಕೆಯಾಗಿದೆ. ಸಿ.ಡಿ ಅನುಪಾತದಲ್ಲಿ ಜಿಲ್ಲೆಯು ಶೇ. 50 ಕ್ಕಿಂತ ಕಡಿಮೆ ಇರುವುದು ವಿಷಾಧನೀಯವಾಗಿದ್ದು, ಮುಂದಿನ ದಿನಗಳಲ್ಲಿ ಸಿ.ಡಿ ಅನುಪಾತ ಹೆಚ್ಚಿಸಲು ಎಲ್ಲಾ ಬ್ಯಾಂರ‍್ಸ್ಗಳು ಕಾರ್ಯಪ್ರವೃತ್ತರಾಗಬೇಕು ಎಂದರು.

ಸಭೆಯಲ್ಲಿ ನಬಾರ್ಡ್ನ ಡಿ.ಡಿ.ಎಂ ಸಂಗೀತಾ ಕಾರ್ಥಾ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ಬ್ಯಾಂಕುಗಳ ಮುಖ್ಯಸ್ಥರುಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...