ಕೊಡಗು | ದಲಿತರ ಸ್ಮಶಾನ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಸಿದ್ಧತೆ; ನಿವಾಸಿಗಳಿಂದ ಧರಣಿ

Date:

  • ಹಿಂದೆ ಕಂದಾಯ ಇಲಾಖೆಯಿಂದ ದಲಿತರಿಗೆ ಮಂಜೂರಾಗಿದ್ದ ಜಾಗ
  • 150ಕ್ಕೂ ಹೆಚ್ಚು ಶವಗಳ ಅಂತ್ಯಕ್ರೀಯೆ ಇದೇ ಜಾಗದಲ್ಲಿ ಮಾಡಲಾಗಿದೆ

ದಲಿತರಿಗೆ ಮೀಸಲಾಗಿದ್ದ ಸ್ಮಶಾನ ಜಾಗದಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುತ್ತಿರುವುದನ್ನು ವಿರೋಧಿಸಿ ಕಾನ್ಸಿರಾಂ ನಗರದ ನಿವಾಸಿಗಳು ಧರಣಿ ನಡೆಸಿದರು.

“ಕೊಡಗು ಜಿಲ್ಲೆ ಮಡಿಕೇರಿ ತಾಲೂಕು ಹೊದ್ದುರು ಗ್ರಾಮ ಪಂಚಾಯಿತಿ ಪಾಲೆಮಾಡು ಸರ್ವೇ ನಂ. 167/1ಎ ಜಗದಲ್ಲಿ ಕಾನ್ಸಿರಾಂ ನಗರದ ಪರಿಶಿಷ್ಟ ಜಾತಿಯ ಸ್ಮಶಾನಕ್ಕಾಗಿ 2009-10ರಲ್ಲಿ ಜಿಲ್ಲಾಧಿಕಾರಿ ಎರಡು ಎಕರೆ ಜಾಗವನ್ನು ಮಂಜೂರು ಮಾಡಿದ್ದರು” ಎಂದು ದಲಿತ ಮುಖಂಡ ಮೊಣ್ಣಪ್ಪ, ಈದಿನ.ಕಾಮ್‌ಗೆ ತಿಳಿಸಿದರು.

“ಜಿಲ್ಲಾಧಿಕಾರಿ ಮಂಜೂರು ಮಾಡಿದ್ದ ಜಾಗವನ್ನು ಪರಿಶಿಷ್ಟ ಜಾತಿಯವರು ಸ್ಮಶಾನ ಜಾಗವನ್ನಾಗಿ ಉಪಯೋಗಿಸುತ್ತಾ ಸುಮಾರು 150ಕ್ಕೂ ಹೆಚ್ಚು ಶವ ಸಂಸ್ಕಾರ ಮಾಡಿದ್ದಾರೆ. ಈ ಸರ್ವೇ ನಂಬರ್ ಜಾಗವನ್ನು ಜಿಲ್ಲಾಡಳಿತವು ಕರ್ನಾಟಕ ಕ್ರಿಕೆಟ್ ಸಂಸ್ಥೆಯವರಿಗೆ ಕ್ರೀಡಾಂಗಣದ ಉದ್ದೇಶಕ್ಕಾಗಿ ಗುರುತಿಸಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಕೊಡಗು 02

“ಕಂದಾಯ ಇಲಾಖೆಯು ಈ ಹಿಂದೆ ಪರಿಶಿಷ್ಟ ಜಾತಿಯವರಿಗೆ ಮಂಜೂರು ಮಾಡಿದ್ದ ಎರಡು ಎಕರೆ ಜಾಗವನ್ನು ಒಳಗೊಂಡಂತೆ ಸರ್ವೇ ಕಾರ್ಯ ನಡೆಸಿದ್ದು, ದಲಿತರ ಸ್ಮಶಾನವನ್ನು ನಾಶಪಡಿಸಿ ಕ್ರೀಡಾಂಗಣ ನಿರ್ಮಾಣಕ್ಕೆ ಕೊಡಲು ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ” ಎಂದು ಆರೋಪಿಸಿದ್ದಾರೆ.

“ಈ ಎಲ್ಲ ಪ್ರಕ್ರಿಯೆಗಳಿಗೆ ಜಿಲ್ಲಾಧಿಕಾರಿಗಳು ನೇರ ಹೊಣೆಯಾಗಿದ್ದಾರೆ. ನ್ಯಾಯಾಲಯಕ್ಕೆ ಸರಿಯಾದ ದಾಖಲೆ ಸಲ್ಲಿಸದೆ, ಪಾಲೆಮಾಡು ದಲಿತರಿಗೆ ಮಂಜೂರಾದ ಸ್ಮಶಾನ ಜಾಗವನ್ನು ದುರಸ್ತಿ ಮಾಡದೆ ಉದ್ದೇಶಪೂರ್ವಕವಾಗಿ ಜಿಲ್ಲಾಧಿಕಾರಿ ಅವರು ಕ್ರಿಕೆಟ್ ಸಂಸ್ಥೆಯ ಜೊತೆ ಸೇರಿ ದಲಿತರಿಗೆ ಮೋಸ ಮಾಡಿದ್ದಾರೆ” ಎಂದು ಕಿಡಿಕಾರಿದರು.

ಈ ಸುದ್ದಿ ಓದಿದ್ದೀರಾ? ಹಾಸನ | ಕುರಾನ್ ಪಠಣ ವಿವಾದದಿಂದ ರಥೋತ್ಸವಕ್ಕೆ ಅಡ್ಡಿಯಾಗದು; ವಿದ್ಯುಲ್ಲತಾ ಸ್ಪಷ್ಟನೆ

“ನಮ್ಮ ಸಮುದಾಯದ ಯಾರೇ ನಿಧನರಾದರೂ ಇದೆ ಜಾಗದಲ್ಲಿ ಅಂತ್ಯಕ್ರೀಯೆ ನಡೆಸುತ್ತಾ ಬಂದಿದ್ದು, ಈ ಜಾಗದ ಮೇಲೆ ಭಾವನಾತ್ಮಕ ಸಂಬಂಧ ಹೊಂದಿದ್ದೇವೆ. ಆದರೆ, ಜಿಲ್ಲಾಡಳಿತ ಇದಕ್ಕೆಲ್ಲ ಬೆಲೆ ಕೊಡದೆ ನಮ್ಮಲ್ಲಿರುವ ದಾಖಲೆಗಳನ್ನು ಲೆಕ್ಕಕ್ಕೆ ತೆಗೆದುಕೊಳ್ಳದೆ ಅನ್ಯಾಯ ಮಾಡುತ್ತಿದೆ” ಎಂದು ಅಸಮಧಾನ ವ್ಯಕ್ತಪಡಿಸಿದರು.

“ಕಾನ್ಸಿರಾಂ ನಗರದ ದಲಿತ ಸಮುದಾಯ ಹಾಗೂ ಇತರ ಸಮಾನ ಮನಸ್ಕರ ನೇತೃತ್ವದಲ್ಲಿ ಹೋರಾಟ ನಡೆಸುತ್ತಿದ್ದು, ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಗ್ರಾಮಸ್ಥರ ಜೊತೆಗೆ ಮಾತುಕತೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳದಿದ್ದರೆ 2023ರ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಬಹಿಷ್ಕರಿಸಲಾಗುವುದು” ಎಂದು ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...