ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಡಾ.ಬಿ. ಆರ್ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಲು ಪೂರ್ವ ಸಿದ್ಧತೆ ನಡೆಸಲಾಗುತ್ತಿದೆ.

ಈ ದೇಶದ ಹೆಮ್ಮೆ ಪಡುವ ಸಂವಿಧಾನ ಶಿಲ್ಪಿ ಡಾ. ಬಿ ಆರ್ ಅಂಬೇಡ್ಕರ್ ಪ್ರತಿಯನ್ನು ನಮ್ಮ ಕ್ಷೇತ್ರದಲ್ಲಿ ಪ್ರತಿಮೆ ಸ್ಥಾಪಿಸುವುದು ನಮ್ಮ ಹೆಮ್ಮೆ ಎಂದು ಶೃಂಗೇರಿ ಕ್ಷೇತದ ಶಾಸಕ ಟಿ.ಡಿ ರಾಜೇಗೌಡ ತಿಳಿಸಿದರು.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಕಾಡಿನ ಜನವಸತಿ ಸ್ಥಳಾಂತರಿಸುವ ಬಗ್ಗೆ ಸಿಎಂ ನೇತೃತ್ವದಲ್ಲಿ ಸಭೆ; ಅರಣ್ಯ ಸಚಿವ ಈಶ್ವರ ಖಂಡ್ರೆ
ಮುತ್ತಿನಕೊಪ್ಪ ಗ್ರಾ. ಪಂ. ಭಾಗದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆ ನಿರ್ಮಾಣ ಮಾಡಬೇಕೆಂದು ಅಲ್ಲಿನ ಸ್ಥಳೀಯ ನಿವಾಸಿಗಳು ಹಾಗೂ ಸಾಮಾಜಿಕ ಸಂಘಟನೆಗಳು ನರಸಿಂಹರಾಜಪುರ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡರ ಬಳಿ ಬೇಡಿಕೆಯಿಟ್ಟಿದ್ದರು, ಹಾಗೆಯೇ, ಈ ದಿನ.ಕಾಮ್ ನಿರಂತರವಾಗಿ ಈ ಹೋರಾಟದ ಸುದ್ದಿ ಪ್ರಕಟಿಸುವ ಮೂಲಕ ಪ್ರತಿಮೆ ನಿರ್ಮಾಣದ ಕೆಲಸ ಅಂತಿಮ ಮಟ್ಟಕ್ಕೆ ತಲುಪಿದೆ. ಅಂಬೇಡ್ಕರ್ ಪ್ರತಿಮೆಯನ್ನು ಆಯ್ಕೆ ಮಾಡಲು ಸ್ವತಃ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡಬಂದಿದ್ದರು ಎಂದು ಸಾಮಾಜಿಕ ಹೋರಾಟಗಾರರಾದ ಕೆ. ಎಲ್ ಅಶೋಕ್ ಈ ದಿನ.ಕಾಮ್ ಜೊತೆ ಮಾತಾಡಿದ್ದಾರೆ.





