ಪ್ರಾಕೃತಿಕ ವಿಕೋಪಗಳ ನಿಯಂತ್ರಣಕ್ಕೆ ಸಿದ್ಧರಾಗಿ; ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ಸೂಚನೆ

Date:

ಪ್ರವಾಹ, ಭೂ ಕುಸಿತ ಸೇರಿದಂತೆ ಎಲ್ಲ ರೀತಿಯ ಪ್ರಾಕೃತಿಕ ವಿಕೋಪಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸಬೇಕು ಹಾಗೂ ವಿಕೋಪಗಳು ಸಂಭವಿಸುವ ಮುನ್ನವೇ ಜನರನ್ನು ಎಚ್ಚರಿಸಿ ಸುರಕ್ಷಿತ ಸ್ಥಳಕ್ಕೆ ರವಾನಿಸಬೇಕು ಎಂದು ಸಚಿವ ಕೃಷ್ಣಭೈರೇಗೌಡ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದಲ್ಲಿ ವಿಪತ್ತು ನಿರ್ವಹಣೆ ಬಗ್ಗೆ ಅಧಿಕಾರಿಗಳೊಂದಿಗೆ ಸಚಿವ ಕೃಷ್ಣ ಭೈರೇಗೌಡ ಸಭೆ ನಡೆಸಿದ್ದಾರೆ. ರಾಜ್ಯದಲ್ಲಿನ ಪ್ರಸ್ತುತ ಮಳೆಯ ವಿವರ, ಮಾನ್ಸೂನ್ ಮಾರುತದ ಪ್ರಭಾವ, ಯಾವ ಜಿಲ್ಲೆಯಲ್ಲಿ ಅಧಿಕ ಮಳೆಯಾಗುವ ಸಾಧ್ಯತೆ, ಭೂ ಕುಸಿತ ಸೇರಿದಂತೆ ಪ್ರಾಕೃತಿಕ ವಿಕೋಪಗಳ ಕುರಿತು ಚರ್ಚೆ ನಡೆಸಿದ್ದಾರೆ.

“ಈ ವರ್ಷ ಜೂನ್ ಮೂರನೇ ವಾರದ ನಂತರ ರಾಜ್ಯದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ಅಲ್ಪ ಪ್ರಮಾಣದ ನೆರೆ ಉಂಟಾಗುವ ಸಾಧ್ಯತೆ ಇದೆ. ಇಂತಹ ಸಂದರ್ಭದಲ್ಲಿ ಪ್ರವಾಹ ಸ್ಥಿತಿಯನ್ನು ನಿಯಂತ್ರಿಸುವ ಸಲುವಾಗಿ ಎನ್ಡಿಆರ್ ಎಫ್ ಹಾಗೂ ಎಸ್ಡಿಆರ್ ಎಫ್ ತಂಡಗಳು ಸನ್ನದ್ದವಾಗಿರಬೇಕು. ಅಲ್ಲದೆ, 3500 ಕ್ಕೂ ಅಧಿಕ ಸ್ವಯಂ ಸೇವಕರಿಗೆ ತರಬೇತಿ ನೀಡಲಾಗಿದ್ದು ಅವರನ್ನೂ ಈ ಕೆಲಸಗಳಿಗೆ ಬಳಸಿಕೊಳ್ಳಬಹುದು” ಎಂದು ಸಚಿವ ಕೃಷ್ಣ ಭೈರೇಗೌಡ ಸೂಚನೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“2018ರಲ್ಲಿ ಕೊಡಗು ಭಾಗದಲ್ಲಿ ಉಂಟಾದ ಭೂ ಕುಸಿತದಿಂದ ಕನಿಷ್ಟ 21ಕ್ಕೂ ಅಧಿಕ ಜನ ಮೃತಪಟ್ಟಿದ್ದರು. ರಾಜ್ಯದಲ್ಲಿ ಮತ್ತೊಮ್ಮೆ ಇಂತಹ ಕಹಿ ಘಟನೆಗಳು ಸಂಭವಿಸಬಾರದು. ಹೀಗಾಗಿ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಅಗತ್ಯವಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಶಾಸಕರಿಗೆ ತರಬೇತಿ ಶಿಬಿರ ವಿವಾದ | ಪೂರ್ವಗ್ರಹ ಪೀಡಿತ ಚರ್ಚೆ ಸರಿಯಲ್ಲ: ಯು ಟಿ ಖಾದರ್

“ಈ ವರ್ಷದ ಮಳೆಗಾಲದಲ್ಲೂ ಮೂಡಿಗೆರೆ, ಸುಲ್ಯ, ಭಾಗಮಂಡಲ, ಕೊಡಗು-ಮಡಿಕೇರಿ, ಸಕಲೇಶಪುರ, ವಿರಾಜಪೇಟೆ ಸೇರಿದಂತೆ ಕೆಲವು ಭಾಗಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆ ಇದೆ. ಹೀಗಾಗಿ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕಾದ ಅಗತ್ಯವಿದೆ” ಎಂದು ಅಧಿಕಾರಿಗಳಿಗೆ ಅವರು ಸೂಚಿಸಿದ್ದಾರೆ.

ಕಳೆದ 20 ವರ್ಷದಲ್ಲಿ 14 ವರ್ಷ ರಾಜ್ಯಕ್ಕೆ ಬರ

ಕಳೆದ 20 ವರ್ಷಗಳಲ್ಲಿ ರಾಜ್ಯ 14 ಬಾರಿ ಬರದ ಪರಿಸ್ಥಿತಿಯನ್ನು ಎದುರಿಸಿದೆ. 5 ಬಾರಿ ಅತಿವೃಷ್ಠಿ ಎದುರಿಸಿದೆ. ಇಂತಹ ಪರಿಸ್ಥಿತಿಗಳ ಬಗ್ಗೆ ಅಧ್ಯಯನ ಅಗತ್ಯವಿದ್ದು, ಈ ಬಗ್ಗೆ ಅಧಿಕಾರಿಗಳು ರಾಷ್ಟ್ರೀಯ ಮಟ್ಟದ ಸೆಮಿನಾರ್ ಗಳನ್ನು ಆಯೋಜಿಸಬೇಕು ಎಂದು ಅಧಿಕಾರಿಗಳಿಗೆ ಸಚಿವ ಕೃಷ್ಣಭೈರೇಗೌಡ ತಿಳಿಸಿದ್ದಾರೆ.

ರಾಜ್ಯದಲ್ಲಿ 7.500 ಮಳೆಮಾಪನ ಕೇಂದ್ರಗಳಿದ್ದು, ಪ್ರತಿ ಗ್ರಾಮಪಂಚಾಯತ್ ಮಟ್ಟದಲ್ಲಿ ಮಳೆಯ ಡೇಟಾವನ್ನು ಅಪ್ಡೇಟ್ ಮಾಡುವಂತಹ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಲಹೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...