ಮೈಸೂರು | ಬೀದಿಗೆ ಬಂದ ಪ್ರಾಧ್ಯಾಪಕರ ಪ್ರತಿಷ್ಠೆ; ಪತ್ರಿಕೋದ್ಯಮ ವಿದ್ಯಾರ್ಥಿಗಳಿಗೆ ಕಾರಿಡಾರ್‌ನಲ್ಲೇ ಪಾಠ

Date:

ಪತ್ರಿಕಾ ರಂಗಕ್ಕೆ ಅತ್ಯುತ್ತಮ ಪತ್ರಕರ್ತರನ್ನು ನೀಡಿದ್ದ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗ ಈಗ ಪ್ರಾಧ್ಯಾಪಕರ ಪ್ರತಿಷ್ಠೆಯ ಕಣವಾಗಿ ಮಾರ್ಪಟ್ಟಿದೆ. ಹಲವು ವರ್ಷಗಳಿಂದ ಶೀತಲ ಸಮರದಂತಿದ್ದ ಪ್ರಧ್ಯಾಪಕರ ಮುನಿಸು, ಒಳಜಗಳ ಈಗ ಬೀದಿಗೆ ಬಂದಿದೆ. ಪರಿಣಾಮವಾಗಿ ವಿಭಾಗದ ವಿದ್ಯಾರ್ಥಿಗಳು ಕಾರಿಡಾರ್‌ನಲ್ಲಿ ಕುಳಿತು ಪಾಠ ಕೇಳುವಂತಾಗಿದೆ.

ವಿಶ್ವವಿದ್ಯಾಲಯದ ಮಾನಸ ಗಂಗೋತ್ರಿ ಕ್ಯಾಂಪಸ್‌ನಲ್ಲಿರುವ ಮಾನವಿಕ ವಿಭಾಗಗಳ ಕಟ್ಟಡಲ್ಲಿ ಸುಮಾರು 50 ವರ್ಷಗಳಿಂದ ಪತ್ರಿಕೋದ್ಯಮ ವಿಭಾಗದ ತರಗತಿಗಳು ನಡೆಯುತ್ತಿದ್ದವು. ಇತ್ತೀಚೆಗೆ, ಪತ್ರಿಕೋದ್ಯಮ ವಿಭಾಗಕ್ಕೆ ಹೊಸ ಕಟ್ಟಡವನ್ನು ನೀಡಲಾಗಿದೆ. ವಿಭಾಗವನ್ನು ಆ ಕಟ್ಟಡಕ್ಕೆ ಸ್ಥಳಾಂತರಿಸುವ ವಿಷಯದಲ್ಲೂ ಪ್ರಾಧ್ಯಾಪಕರ ಪ್ರತಿಷ್ಠೆ ತೋರಿದ್ದಾರೆ. ಹೀಗಾಗಿ, ವಿದ್ಯಾರ್ಥಿಗಳು ನೆಲದಲ್ಲಿ ಕುಳಿತು ಪಾಠ ಕೇಳಿದ್ದಾರೆ ಎಂದು ಹೇಳಲಾಗಿದೆ.

ಪತ್ರಿಕೋದ್ಯಮ ವಿಭಾಗಕ್ಕೆ ನೀಡಲಾಗಿದ್ದ ಹೊಸ ಕಟ್ಟಡದಲ್ಲಿ ಇನ್ನೂ ಹಲವಾರು ಮೂಲಭೂತ ಸೌಕರ್ಯಗಳ ಕೊರತೆ ಇತ್ತು. ಹೀಗಾಗಿ, ಮತ್ತಷ್ಟು ಅನುದಾನದೊಂದಿಗೆ ಎಲ್ಲ ಸೌಲಭ್ಯಗಳನ್ನು ನೀಡಬೇಕೆಂದು ವಿಶ್ವವಿದ್ಯಾಲಯಕ್ಕೆ ಕೋರಲಾಗಿತ್ತು. ಹೊಸ ಕಟ್ಟಡದಲ್ಲಿ ಎಲ್ಲ ಸೌಲಭ್ಯಗಳನ್ನು ಒದಗಿಸುವವರೆ ವಿಭಾಗವನ್ನು ಸ್ಥಳಾಂತರಿಸದಂತೆ ಅಧ್ಯಾಪಕರು ಒತ್ತಾಯಿಸಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆದರೆ, ಇದ್ದಕ್ಕಿದ್ದಂತೆ ಮಂಗಳವಾರ ಸಂಜೆ ವಿಭಾಗದ ಮುಖ್ಯಸ್ಥೆ ಡಾ. ಎಂ.ಎಸ್‌ ಸಪ್ನಾ ಅವರು ವಿಭಾಗವನ್ನು ಸ್ಥಳಾಂತರಿಸಲಾಗಿದೆ ಎಂದು ಬಾಗಿಲಿಗೆ ಚೀಟಿ ಅಂಟಿಸಿ ಹೋಗಿದ್ದಾರೆ. ವಿಭಾಗದ ಸ್ಥಳಾಂತರದ ಬಗ್ಗೆಯೂ ಇತರ ಪ್ರಾಧ್ಯಾಪಕರಿಗೆ ತಿಳಿಸಿರಲಿಲ್ಲ. ಬುಧವಾರ ಬೆಳಗ್ಗೆ ವಿದ್ಯಾರ್ಥಿಗಳು ವಿಭಾಗಕ್ಕೆ ಬಂದಾಗ, ಸ್ಥಳಾಂತರ ವಿಷಯ ಗೊತ್ತಾಗಿದೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ?: ರಾಜ್ಯ ರಾಜ್ಯಗಳ ನಡುವೆ ಅಸಮತೆ ಜೋಕಾಲಿ-ದೇವನೂರ ಮಹಾದೇವ

ವಿದ್ಯಾರ್ಥಿಗಳಿಗೆ ಕಾರಿಡಾರ್‌ನಲ್ಲೇ ಪಾಠ ಮಾಡಿರುವ ಪ್ರಾಧ್ಯಾಪಕ ಪುಟ್ಟಸ್ವಾಮಿ ಮತ್ತು ಪ್ರಾಧ್ಯಾಪಕಿ ಎನ್ ಮಮತಾ, “ವಿಭಾಗವನ್ನು ರಾತ್ರೋರಾತ್ರಿ ಹೊಸ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ. ಈ ಬಗ್ಗೆ ನಮಗೆ ಮಾಹಿತಿಯೇ ಇಲ್ಲ. ವಿಭಾಗ ಸ್ಥಳಾಂತರದ ಬಗ್ಗೆ ಮೈಸೂರು ವಿಶ್ವವಿದ್ಯಾಲಯದಿಂದ ಅಧಿಕೃತ ಆದೇಶ ಬಂದಿಲ್ಲ. ಇದರಿಂದ ನಾವು ಇಲ್ಲಿಯೇ ಪಾಠ ಮಾಡುತ್ತಿದ್ದೇವೆ” ಎಂದು ಹೇಳಿದ್ದಾರೆ.

“ವಿಭಾಗವನ್ನು ವಿಶ್ವವಿದ್ಯಾಲಯದ ಅಧಿಕಾರಿಗಳ ಸಮ್ಮುಖದಲ್ಲಿ ಸ್ಥಳಾಂತರ ಮಾಡಬೇಕಾಗಿತ್ತು. 50 ವರ್ಷಗಳ ಹಳೆಯ ದಾಖಲಾತಿಗಳು ಇಲ್ಲಿಯೇ ಇವೆ. ದಾಖಲಾತಿಗಳ ಪಂಚನಾಮೆ ಮಾಡಿದ ಬಳಿಕ ವಿಭಾಗವನ್ನು ಸ್ಥಳಾಂತರ ಮಾಡಬೇಕಿತ್ತು. ಅದಾವುದನ್ನೂ ಮಾಡಲಾಗಿಲ್ಲ” ಎಂದು ಅವರು ಹೇಳಿದ್ದಾರೆ.

ವಿವಾದದ ಬಗ್ಗೆ ಸ್ಪಷ್ಟನೆ ನೀಡಿರುವ ವಿಭಾಗದ ಮುಖ್ಯಸ್ಥೆ ಫ್ರೊ. ಸಪ್ನಾ, “ಇದು ನನ್ನ ವೈಯಕ್ತಿಕ ನಿರ್ಧಾರವಲ್ಲ. ವಿಶ್ವವಿದ್ಯಾನಿಲಯದ ಸೂಚನೆಯಂತೆ ನಿರ್ಧಾರ ತೆಗೆದುಕೊಳ್ಳಲಾಗಿದೆ. ಎಲ್ಲರಿಗೂ ತಿಳಿಸಲಾಗಿದೆ. ವಿದ್ಯಾರ್ಥಿಗಳ ಹಿತದೃಷ್ಟಿಯಿಂದಲೇ ಇದನ್ನೆಲ್ಲಾ ಮಾಡಲಾಗಿದೆಯೇ ಹೊರತು ಬೇರೆನೂ ಇಲ್ಲ” ಎಂದು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...