ರಾಯಚೂರು | ಹಬ್ಬದ ದಿನಗಳಲ್ಲಿ ಮೂರು ಪಟ್ಟು ದರ ಹೆಚ್ಚಿಸಿದ ಖಾಸಗಿ ಬಸ್‌ಗಳು: ಸಾರ್ವಜನಿಕರಿಂದ ಆಕ್ರೋಶ

Date:

ದೀಪಾವಳಿ ಹಬ್ಬ ಹಾಗೂ ಕನ್ನಡ ರಾಜ್ಯೋತ್ಸವದ ಹಿನ್ನೆಲೆ ರಜೆಗಳಿರುವ ಕಾರಣಕ್ಕೆ ರಾಯಚೂರು ನಗರದಿಂದ ಬೆಂಗಳೂರು, ಮಂಗಳೂರು, ಪುಣೆಗಳಂತಹ ಮಹಾನಗರಗಳಿಂದ ಊರುಗಳಿಗೆ ಬಂದಿದ್ದ ಪ್ರಯಾಣಿಕರಿಂದ ಖಾಸಗಿ ಬಸ್‌ಗಳ ಮಾಲೀಕರು, ಮೂರು ನಾಲ್ಕು ಪಟ್ಟು ಹೆಚ್ಚು ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪ್ರಯಾಣಿಕರು ದುಬಾರಿ ಹಣ ನೀಡಿ ಮಹಾನಗರಗಳಿಗೆ ತೆರಳಲು ಹರಸಾಹಸ ಪಡುತ್ತಿದ್ದಾರೆ.

ರಜೆ, ಹಬ್ಬ ಹರಿದಿನ ಇದ್ದಾಗ ಸಾವಿರಾರು ಸಂಖ್ಯೆಯಲ್ಲಿ ಜನರು ಊರಿಗೆ ಬಂದು ಹೋಗಲು ಮುಂದಾದರೆ ಖಾಸಗಿ ಬಸ್ ನವರು ಮೂರು ಪಟ್ಟು ಹೆಚ್ಚು ಹಣವನ್ನು ಹೆಚ್ಚಳ ಮಾಡುತ್ತಿರುವುದರಿಂದ ಹಲವು ಮಂದಿ ಬೇಸರ ಹೊರಹಾಕಿದ್ದಾರೆ.

ಊರಿಗೆ ಬಂದು ಹಬ್ಬ ಆಚರಣೆ ಮಾಡಿ, ಮತ್ತೆ ತಮ್ಮ ಕರ್ತವ್ಯ, ಕೆಲಸಗಳಿಗೆ ದೂರದ ಊರಿಗೆ ತೆರಳುವವರು ಖಾಸಗಿ ಬಸ್ ಮಾಲೀಕರ ಈ ನಡೆಯನ್ನು ಖಂಡಿಸಿದ್ದು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದರ ಬಗ್ಗೆ ರಮೇಶ್ ವೀರಾಪುರ ಸಿಪಿಐಎಂ ಮುಖಂಡ ಮಾತನಾಡಿ, “ದಿನದಿಂದ ದಿನಕ್ಕೆ ಹಳ್ಳಿಗಳಿಂದ ಸಾವಿರಾರು ಸಂಖ್ಯೆಯಲ್ಲಿ ಜನರು ಗುಳೇ ಹೋಗುತ್ತಿದ್ದಾರೆ. ಸಾರಿಗೆ ಬಸ್ ಗಳು ಜನ ದಟ್ಟಣೆಯಿಂದ, ಕೆಲವೊಮ್ಮೆ ಸಿಗದ ಕಾರಣಕ್ಕೆ ಖಾಸಗಿ ಬಸ್‌ಗಳ ಮೊರೆ ಹೋಗುತ್ತಾರೆ. ಆದರೆ ಖಾಸಗಿ ಬಸ್‌ಗಳ ದರ ಮೂರು ಪಟ್ಟು ಹೆಚ್ಚಾಗಿರುತ್ತದೆ” ಎಂದು ತಿಳಿಸಿದರು.

ಖಾಸಗಿ ಬಸ್ ಗಳು ದರ ಏರಿಸಿದರೆ ಕ್ರಮ ಕೈಗೊಳ್ಳುವುದಾಗಿ ಸರ್ಕಾರ ತಿಳಿಸಿದೆ. ಆದರೂ ಆನ್ ಲೈನ್ ನಲ್ಲಿ ಬುಕ್ ಮಾಡಲು ಹೋದರೆ ನಾಲ್ಕೈದು ಪಟ್ಟು ದರ ಏರಿಸಲಾಗಿದೆ. ಇದು ಸಾರಿಗೆ ಇಲಾಖೆಯ ಅಧಿಕಾರಿಗಳ ಗಮನಕ್ಕೆ ಬಂದಿಲ್ಲವೇ? ಪ್ರಯಾಣಿಕರ ಅನಿವಾರ್ಯತೆಯನ್ನೇ ಬಂಡವಾಳವನ್ನಾಗಿಸಿಕೊಂಡು ದರ ಏರಿಸುತ್ತಿದ್ದರೂ ಯಾಕೆ ಕ್ರಮ ತೆಗೆದುಕೊಳ್ಳುತ್ತಿಲ್ಲ ಎಂದು ಪ್ರಶ್ನಿಸಿದ್ದಾರೆ.

ಆರ್ ಟಿ ಓ ಹಾಗೂ ಸಾರಿಗೆ ಇಲಾಖೆಯೂ ಇದರಲ್ಲಿ ಶಾಮೀಲು ಇರಬಹುದು ಅಂದು ಅನುಮಾನ ಹುಟ್ಟಿಸುತ್ತಿದೆ. ಕೂಡಲೇ ಸಾರಿಗೆ ಇಲಾಖೆ ಮಾತ್ತು ಆರ್ ಟಿ ಓ ಅಧಿಕಾರಿಗಳು ಹೆಚ್ಚವರಿ ಹಣ ಪಡೆಯುತ್ತಿರುವ ಖಾಸಗಿ ಬಸ್‌ಗಳ ಪರವಾನಗಿ ಮತ್ತು ನೋಂದಣಿ ಪತ್ರ ಅಮಾನತು ಮಾಡಬೇಕು. ಟಿಕೆಟ್ ವಿತರಕರ ಮತ್ತು ಆ್ಯಪ್ ಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಇದನ್ನು ಓದಿದ್ದೀರಾ? ಸಂಡೂರು | ಸರ್ಕಾರದ ‘ದಿಶಾಂಕ್ ಆ್ಯಪ್‌’ನಲ್ಲಿ ಇಡೀ ಗ್ರಾಮವೇ ನಾಪತ್ತೆ: ಆತಂಕದಲ್ಲಿ ಗ್ರಾಮಸ್ಥರು!

ಸರ್ಕಾರಿ ಬಸ್ ಸೇವೆ ಸಮರ್ಪಕವಾಗಿದ್ದರೆ ಜನರು ಖಾಸಗಿ ಬಸ್‌ಗಳ ಮೇಲೆ ಅವಲಂಬಿಸುವುದು ಕಡಿಮೆ ಆಗುತ್ತದೆ. ಹಬ್ಬದ ಸಂದರ್ಭಗಳಲ್ಲಿ ರಾಜ್ಯ ಸಾರಿಗೆ ಇಲಾಖೆ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಬಸ್ ಬಿಡುವ ವ್ಯವಸ್ಥೆ ಮಾಡಬೇಕು. ಖಾಸಗಿ ಬಸ್ ಮಾಲೀಕರ ಲಾಬಿಗೆ ಸಂಬಂಧಿಸಿದ ಇಲಾಖೆಗಳು ಒಳಗಾಗಬಾರದು. ಖಾಸಗಿ ವಾಹನಗಳ ದರ್ಬಾರ್‌ಗೆ ಅಧಿಕಾರಿಗಳು ಕೂಡಲೇ ಬ್ರೇಕ್ ಹಾಕದಿದ್ದರೆ ಸಿಪಿಐ(ಎಂ) ಪಕ್ಷದಿಂದ ರಸ್ತೆ ತಡೆದು ಪ್ರತಿಭಟನೆ ಮಾಡಲಾಗುವುದು ಎಂದು ರಮೇಶ್ ವೀರಾಪುರ ಎಚ್ಚರಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...