ಖಾಸಗಿ ಸಾರಿಗೆಯವರಿಗೆ ಪರಿಹಾರ ಕೊಡಲು ಪ್ರಾಯೋಗಿಕವಾಗಿ ಸಾಧ್ಯವಿಲ್ಲ: ರಾಮಲಿಂಗಾರೆಡ್ಡಿ

Date:

  • ‘ಸಾರಿಗೆ ಚಾಲಕರು 3 ಲಕ್ಷ ಮಂದಿ ಇದ್ದು, ಅವರ ಬೇಡಿಕೆ ಈಡೇರಿಕೆ ಕಷ್ಟ’
  • ‘ಪ್ರತಿಯೊಬ್ಬರಿಗೆ ಪರಿಹಾರ ಕೊಟ್ಟರೆ 5,009 ಕೋಟಿ ರೂ. ಬೇಕಾಗುತ್ತದೆ’

ಖಾಸಗಿ ಸಾರಿಗೆಯವರು ಶಕ್ತಿ ಯೋಜನೆಯಿಂದ ನಷ್ಟ ಆಗಿದೆ ಪರಿಹಾರ ಕೊಡಿ ಅಂತಿದ್ದಾರೆ. ಅದು ಪ್ರಾಯೋಗಿಕವಾಗಿ ಸಾಧ್ಯವಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸ್ಪಷ್ಟಪಡಿಸಿದರು.

ಖಾಸಗಿ ಸಾರಿಗೆ ಒಕ್ಕೂಟದ ಮುಷ್ಕರ ವಿಚಾರವಾಗಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, “ನಮ್ಮ ಶಕ್ತಿ ಯೋಜನೆಗೆ ಬಜೆಟ್‌ನಲ್ಲಿ 2500 ಕೋಟಿ ರೂ. ಇಡಲಾಗಿದೆ. ಆಟೋ ಚಾಲಕರು ಪ್ರತಿ ತಿಂಗಳು 10 ಸಾವಿರ ಕೊಡು ಅಂತಾರೆ. ಎಲ್ಲಿಂದ ಹಣ ತರಬೇಕು? ಸಾರಿಗೆ ಚಾಲಕರು 3 ಲಕ್ಷ ಮಂದಿ ಇದ್ದಾರೆ. ಅವರ ಬೇಡಿಕೆ ಪ್ರಕಾರ ಪರಿಹಾರ ಕೊಟ್ಟರೆ ಅದೇ 5,009 ಕೋಟಿ ರೂ. ಆಗುತ್ತದೆ. ಇದನ್ನು ಈಡೇರಿಸಲು ಸಾಧ್ಯವೇ” ಎಂದು ಪ್ರಶ್ನಿಸಿದರು.

“ಸಾರಿಗೆ ಸಂಸ್ಥೆಗಳ ಬೇಡಿಕೆ ಎಲ್ಲವೂ ಈಗಿನದ್ದಲ್ಲ. ಕಳೆದ ನಾಲ್ಕೈದು ವರ್ಷಗಳ ಹಳೆಯ ಬೇಡಿಕೆಗಳು ಅವು. ಟ್ಯಾಕ್ಸ್ ಹೆಚ್ಚಳ ಮತ್ತು ಶಕ್ತಿ ಯೋಜನೆ ಮಾತ್ರ ನಮ್ಮ ಸರ್ಕಾರ ಬಂದ ಮೇಲೆ ಆಗಿದೆ. ಮುಖ್ಯಮಂತ್ರಿಗಳು ಸಭೆ ಕರೆದಾಗ ಸಾರಿಗೆ ಸಂಘಗಳು ಬರಲಿಲ್ಲ. ಕಾನೂನಾತ್ಮಕವಾಗಿ ಏನು ಈಡೇರಿಸಲು ಸಾಧ್ಯ ಅದನ್ನು ಈಡೇರಿಸುತ್ತೇವೆ. ಸಾರಿಗೆ ಚಾಲಕರ ಪರವಾಗಿಯೇ ನಮ್ಮ ‌ಸರ್ಕಾರ ಇದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಖಾಸಗಿ ಸಾರಿಗೆಯವರ ನಷ್ಟ ತುಂಬಿಕೊಡಲು ಸರ್ಕಾರಕ್ಕೆ ಆಗಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಖಾಸಗಿ ಸಾರಿಗೆ ಬೇಡಿಕೆ ವಿಚಾರವಾಗಿ ಕೆಲವು ಪ್ರಕರಣ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿವೆ. ನಮ್ಮ ವಕೀಲರಿಗೆ ಹೇಳಿ ಅವರ ನ್ಯಾಯಯುತ ಬೇಡಿಕೆ ಈಡೇರಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಬಿಜೆಪಿ ಅವಧಿಯಲ್ಲಿ ಬೇಡಿಕೆ ಈಡೇರಿಕೆಗೆ ಅವರು ಪ್ರಯತ್ನಿಸದೇ ಈಗ ನಮ್ಮ ಸರ್ಕಾರದ ಅವಧಿಯಲ್ಲಿ ಎಲ್ಲ ಬೇಡಿಕೆ ಮುಂದಿಟ್ಟರೆ ಹೇಗೆ? ಸಭೆಗೆ ಕರೆದಾಗ ಬರಲಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಬಿಜೆಪಿಗೆ ನೈತಿಕತೆ ಇಲ್ಲ

ಖಾಸಗಿ ಸಾರಿಗೆ ಪ್ರತಿಭಟನೆಗೆ ಬೆಂಬಲಿಸುವ ಹಕ್ಕು ಬಿಜೆಪಿಗೆ ಇದೆಯಾ? ತಮ್ಮ ಅಧಿಕಾರ ಅವಧಿಯಲ್ಲಿ ಬಿಜೆಪಿ ಏನು ಮಾಡಿತು? ಈಗ ಅವರ ಬಗ್ಗೆ ಸಿಂಪಥಿ ಮಾತುಗಳನ್ನಾಡುತ್ತಿದೆ” ಎಂದು ಟೀಕಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...