ಕೊಲೆಗಾರ ಬಿಜೆಪಿಯವ, ಆತನಿಗೆ ಜಾಮೀನು ಕೊಡಿಸದಿದ್ದರೆ ಅದೇ ರಾಜ್ಯಕ್ಕೆ ಮಾಡುವ ಉಪಕಾರ: ಆರಗಗೆ ಕುಟುಕಿದ ಪ್ರಿಯಾಂಕ್

Date:

  • ದುಷ್ಟ ಶಕ್ತಿಗಳಿಗೆಲ್ಲ ಬಿಜೆಪಿಯೇ ತವರು ಮನೆಯಾಗಿರುವುದೇಕೆ?
  • ಕರ್ನಾಟಕವನ್ನು ದುಷ್ಟಶಕ್ತಿ ಮುಕ್ತ ರಾಜ್ಯ ಮಾಡುತ್ತೇವೆ: ಪ್ರಿಯಾಂಕ್

“ದುಷ್ಟ ಶಕ್ತಿಗಳಿಗೆಲ್ಲ ಬಿಜೆಪಿಯೇ ತವರು ಮನೆಯಾಗಿರುವುದೇಕೆ? ಅಂದಹಾಗೆ, ಕಲಬುರಗಿಯಲ್ಲಿ ಪೇದೆ ಕೊಂದವನು ನಿಮ್ಮ ಪಕ್ಷದ ಕಾರ್ಯಕರ್ತ ಎಂಬುದನ್ನು ರವಿಕುಮಾರ್ ಅವರನ್ನು ಕೇಳಿ ತಿಳಿದುಕೊಳ್ಳಿ!” ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಕುಟುಕಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು, “ನಿಮ್ಮದೇ ತೀರ್ಥಹಳ್ಳಿಯಲ್ಲಿ ವಿದ್ಯಾರ್ಥಿನಿಯರಿಗೆ ವಂಚಿಸಿ ಬ್ಲಾಕ್‌ಮೇಲ್‌ ಮಾಡಿದ ದುಷ್ಟನ ಬಗ್ಗೆ ತಾವು ಮಾತಾಡುವುದಿಲ್ಲವೇಕೆ? ಆತ ಹಿಂದೆ ನಿಮ್ಮ ಮನೆಯ ಮೇಲೆ ದಾಳಿ ಮಾಡಿದ ದುಷ್ಟಶಕ್ತಿಯ ಗುಂಪಿಗೆ ಸೇರಿದವನು ಎಂಬುದಕ್ಕೆ ಭಯವೇ?” ಎಂದು ಲೇವಡಿ ಮಾಡಿದ್ದಾರೆ.

“ಕಲಬುರಗಿಯಲ್ಲಿ ನಿಮ್ಮ ಪಕ್ಷದ ಕಾರ್ಯಕರ್ತ ಪೇದೆಯನ್ನು ಕೊಲೆ ಮಾಡಿದ್ದಲ್ಲದೆ, ಬಂಧಿಸಿದ ಪೊಲೀಸರಿಗೆ ಚಾಕು ಹಾಕಲು ಹೋಗಿ ಈಗ ಗುಂಡೇಟು ತಿಂದು ಬಂಧಿಯಾಗಿದ್ದಾನೆ. ತಾವು ಆತನಿಗೆ ಜಾಮೀನು ನೀಡಿ ಬಿಡಿಸಲು ಪ್ರಯತ್ನಿಸದಿದ್ದರೆ ಸಾಕು, ಅದೇ ತಾವು ಕರ್ನಾಟಕಕ್ಕೆ ಮಾಡುವ ಉಪಕಾರ!” ಎಂದು ಆರಗಗೆ ಪ್ರಿಯಾಂಕ್‌ ಕುಟುಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ಸರ್ಕಾರ ಬಂದು ಒಂದು ತಿಂಗಳಾಗಿದೆ ಅಷ್ಟೇ. ಇನ್ನು ಕೆಲವೇ ದಿನಗಳಲ್ಲಿ ಕಲಬುರಗಿ ಅಷ್ಟೇ ಅಲ್ಲ, ಕರ್ನಾಟಕವನ್ನು ದುಷ್ಟಶಕ್ತಿ ಮುಕ್ತ ರಾಜ್ಯ ಮಾಡುತ್ತೇವೆ” ಎಂದು ಎಚ್ಚರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮನ್‌ ಕಿ ಬಾತ್‌ನಲ್ಲಿ ಮಣಿಪುರದ ಬಾತ್‌ ಏಕಿಲ್ಲ: ಪ್ರಧಾನಿ ಮೋದಿಯ ಮೌನ ಪ್ರಶ್ನಿಸಿದ ಖರ್ಗೆ

ಪೊಲೀಸ್ ವಲಯದಲ್ಲಿ ಕಳವಳ

ಮರಳು ಅಕ್ರಮ ಸಾಗಾಣಿಕೆ ತಡೆಯಲು ಮುಂದಾದ ಕಾನ್‌ಸ್ಟೆಬಲ್‌ ಮೇಲೆ ಟ್ರ್ಯಾಕ್ಟರ್ ಹರಿಸಿ ಕೊಲೆ ಮಾಡಿದ ಗಂಭೀರ ಪ್ರಕರಣ ಕಲಬುರಗಿಯಲ್ಲಿ ಇತ್ತೀಚೆಗೆ ನಡೆದಿದೆ. ಈ ಬೆನ್ನಲ್ಲಿಯೇ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿಗಳನ್ನು ಬಂಧಿಸಿ ಕರೆತರುತ್ತಿದ್ದ ಯಡ್ರಾಮಿ ಪಿಎಸ್‌ಐ ಬಸವರಾಜ ಚಿತಕೋಟಿ ಅವರ ಮೇಲೆ ಕೊಲೆ ಪ್ರಕರಣದ ಆರೋಪಿಯೊಬ್ಬ ಚಾಕುವಿನಿಂದ ಇರಿದು ಗಾಯಗೊಳಿಸಿದ ಘಟನೆ ಪೊಲೀಸ್ ವಲಯದಲ್ಲಿ ಕಳವಳವನ್ನುಂಟು ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...