ಮಂಡ್ಯ | ಹಿಂದಿ ಹೇರಿಕೆ ಖಂಡಿಸಿ ‘ಹಿಂದಿ ತಿಥಿ ದಿನ’ ಆಚರಣೆ: ಕನ್ನಡಪರ ಸಂಘಟನೆಗಳ ಪ್ರತಿಭಟನೆ

Date:

ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ರಾಜ್ಯ ನುಡಿಯಾಗಿರುವಾಗ, ಒಕ್ಕೂಟ ಸರ್ಕಾರದಿಂದ ಹಿಂದಿ ಹೇರಿಕೆ ಖಂಡಿಸಿ ಕನ್ನಡಪರ ಸಂಘಟನೆಗಳು ಮಂಡ್ಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಹಾಗೂ ಶಿವರಾಮೇಗೌಡ ಬಣ ಮತ್ತು ಕರುನಾಡ ಸೇವಕರು ಸಂಘಟನೆ ಸೇರಿಕೊಂಡು ‘ಹಿಂದಿ ತಿಥಿ ದಿನ’ ಆಚರಿಸಿ, ಹಿಂದಿ ಹೇರಿಕೆಯ ವಿರುದ್ಧ ಪ್ರತಿಭಟನೆ ನಡೆಸಿದರು.

ಎಂ.ಬಿ.ನಾಗಣ್ಣಗೌಡ ನೇತೃತ್ವದಲ್ಲಿ ನಡೆದ ಈ ಪ್ರತಿಭಟನೆಯಲ್ಲಿ, ಮಂಡ್ಯ ನಗರದ ಅಂಚೆ ಕಚೇರಿ ಎದುರು ಹಿಂದಿ ನುಡಿ ಹೇರಿಕೆಯನ್ನು ಖಂಡಿಸಿ “ಹಿಂದಿ ತಿಥಿ ದಿವಸವಾಗಿದೆ. ಮತ್ತೆ ಹುಟ್ಟಿ ಬರಲೇ ಬೇಡ” ಎಂಬ ಬ್ಯಾನರ್‌ಗಳನ್ನು ಪ್ರದರ್ಶಿಸಿದರು. ಕನ್ನಡಿಗರ ಮೇಲೆ ಒಕ್ಕೂಟ ಸರ್ಕಾರ ಹಿಂದಿ ನುಡಿಯನ್ನು ಬಲವಂತವಾಗಿ ಹೇರಿದೆಯೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಬ್ಯಾಂಕ್, ಅಂಚೆ ಮತ್ತು ವಿಮಾ ಸಂಸ್ಥೆಗಳು ಕನ್ನಡ ನುಡಿಗೆ ಆದ್ಯತೆ ನೀಡದೆ, ಹಿಂದಿ ನುಡಿಯಲ್ಲಿ ವ್ಯವಹರಿಸುವ ಮೂಲಕ ಕನ್ನಡಿಗರ ಮೇಲೆ ಹಿಂದಿ ಹೇರಿಕೆ ಮಾಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕನ್ನಡದಲ್ಲಿಯೇ ಎಲ್ಲಾ ಅರ್ಜಿ, ಪತ್ರ ವ್ಯವಹಾರಗಳು, ಎಟಿಎಂ ಯಂತ್ರದ ಮೆನುಗಳು ಮತ್ತು ಸಾರ್ವಜನಿಕ ಪ್ರಕಟಣೆಗಳು ನಡೆಯಬೇಕು. ಕನ್ನಡ ಭಾಷೆಯ ಅಸ್ತಿತ್ವಕ್ಕೆ ಮಾರಕವಾಗುವ ಹಿಂದಿ ದಿವಸ ಆಚರಣೆ ಮತ್ತು ಹಿಂದಿ ಕಲಿಕೆಗೆ ಪ್ರೋತ್ಸಾಹ ನೀಡುವ ಚಟುವಟಿಕೆಯನ್ನು ನಾಡಿನಲ್ಲಿ ನಡೆಸಬಾರದು. ನಾಡಿನಲ್ಲಿ ಸೃಷ್ಟಿಯಾಗುವ ಉದ್ಯೋಗ ಭರ್ತಿಗೆ ಪ್ರತ್ಯೇಕ ನಿಯಮ ರೂಪಿಸಿ ಲಿಖಿತ ಪರೀಕ್ಷೆಗಳಲ್ಲಿ ಕನ್ನಡ ನುಡಿ ಕಡ್ಡಾಯಗೊಳಿಸಿ ನೇಮಕ ಮಾಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, “ಕನ್ನಡಿಗರು ಕಟ್ಟಿ ಬೆಳೆಸಿರುವ ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕು. ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸಿಂಡಿಕೇಟ್ ಬ್ಯಾಂಕ್, ವಿಜಯಾ ಬ್ಯಾಂಕ್‌ಗಳ ವಿಲೀನವನ್ನು ರದ್ದುಪಡಿಸಿ ಕನ್ನಡಿಗರಿಗೆ ಹಿಂದಿರುಗಿಸಬೇಕು” ಎಂದು ಆಗ್ರಹಿಸಿದರು.

ಹಿಂದಿ ನುಡಿಯನ್ನು ಹೇರಿಕೆ ಮಾಡುವುದಿಲ್ಲ ಎಂದು ಬಹಿರಂಗ ಪ್ರಕಟಣೆ ಮಾಡಲು ಮುಖ್ಯಮಂತ್ರಿಗಳು ಆದೇಶಿಸಬೇಕು. ಕನ್ನಡಿಗರ ಬೇಡಿಕೆಗಳ ಬಗ್ಗೆ ಚರ್ಚಿಸಲು ಬ್ಯಾಂಕ್, ಅಂಚೆ, ವಿಮಾ ಕಚೇರಿಗಳ ಮುಖ್ಯಸ್ಥರು, ಕನ್ನಡಪರ ಸಂಘಟನೆಗಳು, ಜನಪರ ಹೋರಾಟಗಾರರ ಸಭೆ ಕರೆದು ತೊಡಕು ಬಗೆ ಹರಿಸಲು ಮುಂದಾಗಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಕರವೇ ಜಿಲ್ಲಾಧ್ಯಕ್ಷ ಹೆಚ್ ಡಿ ಜಯರಾಮ್, ಮಣಿಗೆರೆ ರಾಮಚಂದ್ರಗೌಡ, ಅಬಿಗವುಡ ಹನಕೆರೆ, ಜೋಸೆಫ್, ಶಿವರಾಮು, ಮುದ್ದೇಗೌಡ, ಸುಕುಮಾರ್, ಕೃಷ್ಣೇಗೌಡ  ಕರವೇ (ನಾರಾಯಣಗೌಡ ಬಣ) ರಾಜ್ಯ ಸಮಿತಿ ಸದಸ್ಯ ಮಾ.ಸೋ.ಚಿದಂಬರ್, ಜಿಲ್ಲಾಧ್ಯಕ್ಷ ಕೆ ಟಿ  ಶಂಕರೇಗೌಡ, ಅಶೋಕ್, ಎಂ.ಪಿ.ಸ್ವಾಮಿ ಮತ್ತಿತರರು ಭಾಗವಹಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...