2024ರ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರೊ. ಜಿ.ಬಿ. ಶಿವರಾಜು ಆಯ್ಕೆ

Date:

ಕರ್ನಾಟಕ ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮೂಲಕ ಪ್ರತಿವರ್ಷ ನೀಡುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿನಲ್ಲಿ ಹಿರಿಯ ಗಾಂಧಿವಾದಿ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಗಳು ಆಯ್ಕೆಯಾಗಿವೆ ಎಂದು ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಸತ್ಯ, ಅಹಿಂಸೆ, ಸ್ವಾವಲಂಬನೆ, ಗ್ರಾಮಸ್ವರಾಜ್, ಅಸ್ಪೃಶ್ಯತೆ ನಿವಾರಣೆ, ಆರ್ಥಿಕ ಚಿಂತನೆಗಳು, ಖಾದಿ ಚಟುವಟಿಕೆ, ಜೀವನ ಶಿಕ್ಷಣ ಮತ್ತಿತರ ತತ್ವಾದರ್ಶಗಳನ್ನು ಅಳವಡಿಸಿಕೊಂಡು ಮಹತ್ಸಾಧನೆ ಮಾಡಿದ ಮಹನೀಯರು ಹಾಗೂ ಸಂಘ ಸಂಸ್ಥೆಗಳನ್ನು ಗುರುತಿಸಿ ಗೌರವಿಸಲು ಕರ್ನಾಟಕ ರಾಜ್ಯ ಸರ್ಕಾರವು 2014 ರಲ್ಲಿ ಕರ್ನಾಟಕ ಗಾಂಧೀ ಸೇವಾ ಪ್ರಶಸ್ತಿ ಸ್ಥಾಪಿಸಿ ಆದೇಶ ಹೊರಡಿಸಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರಶಸ್ತಿ ಫಲಕ ಹಾಗೂ ರೂ.5 ಲಕ್ಷ ನಗದು ಒಳಗೊಂಡಿರುವ ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿಯನ್ನು 2014 ರಿಂದ ಪ್ರದಾನ ಮಾಡುತ್ತಾ ಬಂದಿದೆ. 2023ರ ವರೆಗೆ 8 ವ್ಯಕ್ತಿಗಳು ಹಾಗೂ 2 ಸಂಸ್ಥೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024ನೇ ಸಾಲಿನ ಪ್ರಶಸ್ತಿಯು ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕು ಗೊಟ್ಟಿಕೆರೆಯ ಪ್ರೊ. ಜಿ.ಬಿ. ಶಿವರಾಜು ಹಾಗೂ ಹಾವೇರಿ ಜಿಲ್ಲೆಯ ಹೊಸರಿತ್ತಿ ಗ್ರಾಮದ ಶ್ರೀಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆ ಸಂಸ್ಥೆಗೆ ವಿಂಗಡಿಸಿ ಪ್ರದಾನ ಮಾಡಲಾಗುತ್ತಿದೆ.

ಪ್ರಶಸ್ತಿ ಮೊತ್ತವನ್ನು ತಲಾ ರೂ.2.5 ಲಕ್ಷಗಳಂತೆ ಸಮನಾಗಿ ಪುರಸ್ಕಾರ ನೀಡಿ ಸ್ಮರಣಿಕೆ, ಪ್ರಶಸ್ತಿ ಪತ್ರದೊಂದಿಗೆ ಅಕ್ಟೋಬರ್ 2ರ ಗಾಂಧಿ ಜಯಂತಿಯಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ.ನಿಂಬಾಳ್ಕರ್ ತಿಳಿಸಿದ್ದಾರೆ.

ಕರ್ನಾಟಕ ಉಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಪಿ.ಎನ್. ದೇಸಾಯಿ ಅವರ ಅಧ್ಯಕ್ಷತೆಯಲ್ಲಿ ರಚನೆಯಾದ ಆಯ್ಕೆ ಸಮಿತಿಯಲ್ಲಿ ಹಿರಿಯ ಪತ್ರಕರ್ತ ಸನತ್‍ಕುಮಾರ್ ಬೆಳಗಲಿ, ಕರ್ನಾಟಕ ಗಾಂಧಿ ಸ್ಮಾರಕ ನಿಧಿ ಅಧ್ಯಕ್ಷರಾದ ವೂಡೆ ಪಿ.ಕೃಷ್ಣ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ನಿರ್ದೇಶಕಿ ಡಾ. ಧರಣಿದೇವಿ ಮಾಲಗತ್ತಿ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ಸದಸ್ಯರಾಗಿದ್ದರು.

ಪ್ರೊ. ಜಿ.ಬಿ. ಶಿವರಾಜು ಪರಿಚಯ

ನಿವೃತ್ತ ಉಪನ್ಯಾಸಕರಾಗಿರುವ ಪ್ರೊ. ಜಿ.ಬಿ. ಶಿವರಾಜು ಅವರು ವೃತ್ತಿ ಜೀವನದುದ್ದಕ್ಕೂ ವಿದ್ಯಾರ್ಥಿಗಳಲ್ಲಿ ಗಾಂಧಿ ವಿಚಾರಧಾರೆಯನ್ನು ರೂಪಿಸಲು ಶ್ರಮಿಸಿದ್ದಾರೆ.

73 ವರ್ಷದ ಇವರು ತಮ್ಮ ನಿವೃತ್ತಿ ವೇತನವನ್ನು ಗಾಂಧೀ ವಿಚಾರಗಳನ್ನು ಯುವ ಜನರಿಗೆ ತಲುಪಿಸಲು ವಿನಿಯೋಗಿಸುತ್ತಿದ್ದಾರೆ. ಗಾಂಧಿ ಪ್ರಣೀತ ಸಂಘ ಸಂಸ್ಥೆಗಳು ಮತ್ತು ಸರ್ಕಾರಿ ಸಂಸ್ಥೆಗಳು, ರಾಷ್ಟ್ರೀಯ ಸೇವಾ ಯೋಜನೆ ಮತ್ತು ಮದ್ಯಪಾನ ಸಂಯಮ ಮಂಡಳಿಗಳ ಸಮನ್ವಯದ ಮೂಲಕ ಗಾಂಧಿ ವಿಚಾರಗಳನ್ನು ವಿದ್ಯಾರ್ಥಿಗಳು ಮತ್ತು ಯುವ ಸಮುದಾಯಕ್ಕೆ ತಲುಪಿಸುವ ಕಾರ್ಯವನ್ನು ನಿರಂತರವಾಗಿ ಮಾಡುತ್ತಿದ್ದಾರೆ.

ಪ್ರಶಸ್ತಿ 1
ಪ್ರೊ. ಜಿ.ಬಿ. ಶಿವರಾಜು

ಅರಸೀಕೆರೆಯಲ್ಲಿನ ಕಸ್ತೂರ ಬಾ ಗಾಂಧಿ ಆಶ್ರಮದ ಪುನರುಜ್ಜೀವನಗೊಳಿಸಿದ್ದಾರೆ. ಮೂಡಿಗೆರೆಯ ಭಾರತಿ ಬೈಲ್ ಕೇಂದ್ರವನ್ನು ಅಭಿವೃದ್ಧಿಗೊಳಿಸಿದ್ದಾರೆ. ಮಂಡ್ಯ ಜಿಲ್ಲೆ ಮಾರ್ನೋಮಿದೊಡ್ಡಿ ಗ್ರಾಮದಲ್ಲಿ ಕಸ್ತೂರಬಾ ಗಾಂಧಿ ಟ್ರಸ್ಟ್‌ನ ಉಪಕೇಂದ್ರವನ್ನು ಸ್ಥಳೀಯರ ಸಹಕಾರದಿಂದ ಗ್ರಾಮೀಣ ಮಹಿಳೆಯರ ಸ್ವ ಉದ್ಯೋಗ ಕಾರ್ಯಾಗಾರವಾಗಿ ಅಭಿವೃದ್ಧಿಪಡಿಸಿದ್ದಾರೆ. ಸಂಸ್ಥೆಯ 20 ಎಕರೆಗೂ ಹೆಚ್ಚು ಭೂಮಿಯಲ್ಲಿ ಸುಸ್ಥಿರ ಕೃಷಿ ಚಟುವಟಿಕೆಗಳನ್ನು ಸ್ಥಳೀಯರ ಸಹಕಾರದೊಂದಿಗೆ ನಿರ್ವಹಿಸುತ್ತಿದ್ದಾರೆ.

ಇದನ್ನು ಓದಿದ್ದೀರಾ? ‘ಈ ದಿನ’ ಫಲಶೃತಿ | ಅನೈತಿಕ ಚಟುವಟಿಕೆಗಳ ತಾಣವಾಗಿದ್ದ ರೋಣ ‘ಇಂದಿರಾ ಕ್ಯಾಂಟೀನ್’ ಸ್ವಚ್ಫಗೊಳಿಸಿದ ಪುರಸಭೆ

ಮೈಸೂರಿನ ಮಾನಸಗಂಗೋತ್ರಿಯಲ್ಲಿ ಸಬರಮತಿ ಮಾದರಿಯ ಆಶ್ರಮ ನಿರ್ಮಾಣ, ಗದಗ ಜಿಲ್ಲೆಯಲ್ಲಿರುವ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್‍ರಾಜ್ ವಿಶ್ವವಿದ್ಯಾಲಯದ ಆವರಣದಲ್ಲಿ ಸಬರಮತಿ ಆಶ್ರಮದ ಮಾದರಿಯನ್ನು ನಿರ್ಮಿಸಿ ಗಾಂಧೀಜಿಯವರ ಬದುಕು ಸಾಧನೆಗಳನ್ನು ಯುವಜನರು ಹಾಗೂ ಗ್ರಾಮೀಣ ಭಾಗದ ಜನರಿಗೆ ಆಕರ್ಷಕವಾಗಿ ಅನಾವರಣಗೊಳಿಸಿದ್ದಾರೆ. ಗಾಂಧೀ ಸಾಹಿತ್ಯ ಸಂಘ, ಹರಿಜನ ಸೇವಕ ಸಂಘ ಮೊದಲಾದ ಸಂಸ್ಥೆಗಳನ್ನು ಪುನರುಜ್ಜೀವಗೊಳಿಸಿದ್ದಾರೆ.

ಹಾವೇರಿ: ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯ ಹಿನ್ನೆಲೆ

1984ರ ಅಕ್ಟೋಬರ್ 2ರಂದು ಹಾವೇರಿ ಜಿಲ್ಲೆ ಹೊಸರಿತ್ತಿ ಗ್ರಾಮದಲ್ಲಿ ಶ್ರೀ ಗುದ್ಲೆಪ್ಪ ಹಳ್ಳಿಕೇರಿ ಸ್ಮಾರಕ ಪ್ರತಿಷ್ಠಾನವು ಸ್ಥಾಪಿಸಿದ ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯು ಕಳೆದ 39 ವರ್ಷಗಳಿಂದ ಗಾಂಧಿ ವಿಚಾರಗಳನ್ನು ಹೊಸ ಪೀಳಿಗೆಯಲ್ಲಿ ಅಳವಡಿಸಲು ಅಹರ್ನಿಶಿ ದುಡಿಯುತ್ತಿದೆ.

WhatsApp Image 2024 09 26 at 5.41.08 PM

ಗಾಂಧಿ ಗ್ರಾಮೀಣ ಗುರುಕುಲ ವಸತಿ ಶಾಲೆಯಲ್ಲಿ ರಾಜ್ಯದ ನಾನಾ ಜಿಲ್ಲೆಗಳಿಂದ 5 ರಿಂದ 10 ನೇ ತರಗತಿವರೆಗೆ ಶಿಕ್ಷಣ ನೀಡಲಾಗುತ್ತಿದೆ. ಸಮಾಜದ ಎಲ್ಲ ವರ್ಗಗಳು ಸೇರಿದಂತೆ ಗ್ರಾಮೀಣ ಕೃಷಿಕ ಹಾಗೂ ಕೂಲಿಕಾರರ ಕುಟುಂಬದ ಹಿನ್ನೆಲೆಯ ಸಾವಿರಾರು ಪ್ರತಿಭಾವಂತ ಮಕ್ಕಳಿಗೆ ಊಟ, ವಸತಿ, ಇತರೆ ಸೌಲಭ್ಯಗಳನ್ನು ನೀಡುತ್ತಾ ಬಂದಿದೆ.

ಇಲ್ಲಿನ ವಿದ್ಯಾರ್ಥಿಗಳು ತಾವೇ ನೇಯ್ದ ಬಟ್ಟೆಗಳನ್ನು ಧರಿಸುತ್ತಾರೆ. ತಾವೇ ಬೆಳೆದ ಕೃಷಿ ಬೆಳೆಗಳಿಂದ ತಯಾರಿಸಿದ ಆಹಾರ ಸೇವಿಸುತ್ತಾರೆ. ದೇಶದ ಆಂತರಿಕ ಕಲಹಗಳನ್ನು ಕಿತ್ತೆಸೆಯುವ ಹಾಗೂ ವೈಜ್ಞಾನಿಕ ಮನೋಭಾವ ಬೆಳೆಸಿಕೊಳ್ಳುವ ಶಿಕ್ಷಣ ಪಡೆಯುತ್ತಿದ್ದಾರೆ. ರಾಜ್ಯ ಪಠ್ಯಕ್ರಮದ ಜೊತೆಗೆ ಗಾಂಧೀ ವಿಚಾರಧಾರೆಯ ಅನುಸಾರ ಕೃಷಿ, ನೂಲು ಮತ್ತು ನೇಯ್ಗೆ, ಹೈನುಗಾರಿಕೆ, ತೋಟಗಾರಿಕೆ ಮುಂತಾದ ಸ್ವಾವಲಂಬಿ, ಪ್ರಾಯೋಗಿಕ ಶಿಕ್ಷಣವನ್ನು ಇಲ್ಲಿನ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ. ಇಲ್ಲಿ ಶಿಕ್ಷಣ ಪಡೆದ ಹಲವಾರು ವಿದ್ಯಾರ್ಥಿಗಳು ಅತ್ಯುತ್ತಮ ಬದುಕನ್ನು ಕಟ್ಟಿಕೊಂಡಿದ್ದಾರೆ. ಸಂಸ್ಥೆಯು ಶಿಕ್ಷಣದ ಜೊತೆಗೆ ಜೀವನ ಶಿಕ್ಷಣ ನೀಡುತ್ತಿದೆ.

ಪ್ರಶಸ್ತಿ ಪ್ರದಾನ ಸಮಾರಂಭವು ಅಕ್ಟೋಬರ್ 2ರಂದು ಸಂಜೆ 4.30 ಗಂಟೆಗೆ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವಾರ್ತಾಸೌಧದ ಸುಲೋಚನಾ ಸಭಾಂಗಣದಲ್ಲಿ ಜರುಗಲಿದೆ ಎಂದು ವಾರ್ತಾ ಇಲಾಖೆಯ ಪ್ರಕಟಣೆ ತಿಳಿಸಿದೆ.

WhatsApp Image 2024 09 26 at 5.40.10 PM
WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...