ಚಾಮರಾಜನಗರ | ಹುಟ್ಟೂರಿನಲ್ಲಿ ವರನಟ ಡಾ ರಾಜ್ ಮ್ಯೂಸಿಯಂ ನಿರ್ಮಾಣ ಪ್ರಸ್ತಾವನೆ

Date:

ಚಾಮರಾಜನಗರ ಜಿಲ್ಲೆ, ಹನೂರು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ಸಾಹಿತ್ಯ ಪರಿಷತ್ತು ಮತ್ತು ಕನ್ನಡ ಸಾಹಿತ್ಯ ವೇದಿಕೆ ಆಯೋಜಿಸಿದ್ದ ‘ ಜಾನಪದ ಉತ್ಸವ ಮತ್ತು ಜಾನಪದ ಸಿರಿ ‘ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ಎಂ ಆರ್ ಮಂಜುನಾಥ್ ‘ ಹುಟ್ಟೂರಿನಲ್ಲಿ ವರನಟ ಡಾ ರಾಜ್ ಮ್ಯೂಸಿಯಂ ನಿರ್ಮಾಣ ‘ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವುದಾಗಿ ಹೇಳಿದರು.

” ಸಾಂಸ್ಕೃತಿಕ ರಾಯಭಾರಿ ನಟ ಸಾರ್ವಭೌಮ, ವರನಟ ಡಾ ರಾಜ್ ಕುಮಾರ್ ಅವರ ಕೊಡುಗೆ ಅಪಾರವಾಗಿದ್ದು. ಚಾಮರಾಜನಗರ ನಗರದ ಸಿಂಗನಲ್ಲೂರಿನಲ್ಲಿ ಪುಟ್ಟಸ್ವಾಮಯ್ಯನವರ ಸುಪುತ್ರರಾಗಿ ಜನಸಿದರು. ರಂಗಭೂಮಿ ಹಾಗೂ ಚಲನಚಿತ್ರ ಚಿತ್ರರಂಗಕ್ಕೆ ಮೆರುಗಾದಂತಹ ದಾದಾ ಸಾಹೇಬ್ ಪಾಲ್ಕೆ ಪುರಸ್ಕೃತರ ಮ್ಯೂಸಿಯಂ ನಿರ್ಮಾಣ ಮಾಡುವ ಕುರಿತಾಗಿ
ಸ್ಥಳೀಯ ಮುಖಂಡರು, ಜನಪ್ರತಿನಿದಿಗಳು, ಸಾಹಿತಿಗಳು, ಚಿಂತಕರು ತೀರ್ಮಾನಿಸಿದ್ದು ಈ ವಿಚಾರವಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿ ಗಮನಕ್ಕೆ ತರಲಾಗುವುದು ” ಎಂದರು.

ಗಡಿ ಜಿಲ್ಲೆ ಚಾಮರಾಜನಗರದ ಸಿಂಗಾನಲ್ಲೂರಿನಲ್ಲಿ ಪುಟ್ಟಸ್ವಾಮಯ್ಯ, ಡಾ ರಾಜಕುಮಾರ್, ಪುನೀತ್ ರಾಜಕುಮಾರ್ ರವರ ಮ್ಯೂಸಿಯಂ ನಿರ್ಮಾಣ ಮಾಡಿದರೆ ಪ್ರವಾಸಿ ತಾಣವಾಗಿ ರೂಪುಗೊಳ್ಳುವುದು. ಪ್ರವಾಸಿಗರನ್ನು ಸೆಳೆಯಲು, ಸ್ಥಳೀಯವಾಗಿ ಅಭಿವೃದ್ದಿಗೊಳಿಸಲು ಈ ಯೋಜನೆ ಸಹಕಾರಿಯಾಗಲಿದೆ ಎಂದು ಅಭಿಪ್ರಾಯಪಟ್ಟರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯೋಜನೆ ಸಾಕಾರಗೊಂಡರೆ ಪ್ರವಾಸೋದ್ಯಮವೂ ಮತ್ತಷ್ಟು ಅಭಿವೃದ್ಧಿ ಹೊಂದಲಿದೆ ಹಿಂದುಳಿದ ಜಿಲ್ಲೆಗೆ ಪ್ರವಾಸೋಧ್ಯಮದ ಮೂಲಕ ಚೇತರಿಕೆ ಸಿಗಲಿದೆ ಎಂಬ ಆಶಯ ವ್ಯಕ್ತಪಡಿಸಿದರು.

ಸಿಂಗನಲ್ಲೂರಿನಲ್ಲಿ ವಸ್ತು ಸಂಗ್ರಹಾಲಯ ಮಾಡುವುದರಿಂದ ಅಣ್ಣಾವ್ರ ಕುಟುಂಬದ ಪರಿಚಯ ಪ್ರವಾಸಿಗರಿಗೆ ತಿಳಿಯುವ ನಿಟ್ಟಿನಲ್ಲಿ, ವ್ಯವಸ್ಥಿತವಾಗಿ ನಿರ್ಮಾಣ ಮಾಡುವ ಮೂಲಕ ಕುಟುಂಬದ ಮೂರು ತಲೆಮಾರುಗಳ ಪರಿಚಯ ಮಾಡಲು ಸಹಕಾರಿಯಾಗಲಿದೆ ಎಂದು ಸಾಹಿತಿಗಳು, ಚಿಂತಕರು, ಸ್ಥಳೀಯ ಮುಖಂಡರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಮುಂಗಾರಿನ ಮೊದಲ ಉಳುಮೆ ‘ ಹೊನ್ನಾರು ‘

ಕಲಾ ಕೂಟದ ಚಂದ್ರಶೇಖರ್, ಪತ್ರಕರ್ತ ಅಂಶಿ ಪ್ರಸನ್ನ ಕುಮಾರ್, ದತ್ತೇಶ್ ಕುಮಾರ್, ಎಂ ಕೈಲಾಶ್ ಮೂರ್ತಿ, ನಂಜೇಗೌಡ, ಡಾ ಪ್ರೇಮ, ಹರೀಶ್, ಕಂದವೇಲು, ಮಹೇಶ್ ಚಿಕ್ಕಲ್ಲೂರು, ಪ್ರಾಂಶುಪಾಲೆ ಚಂದ್ರಮ್ಮ, ಡಾ ಆರ್ ನಾಗಭೂಷಣ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...