ಕಲಬುರಗಿ | ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ : ಆ.27ರಂದು ʼರಾಜಭವನ ಚಲೋʼ

Date:

ಸಿಎಂ ಸಿದ್ದರಾಮಯ್ಯ ವಿರುದ್ಧ ನೀಡಿದ ಪ್ರಾಸಿಕ್ಯೂಷನ್‌ ಅನುಮತಿ ಹಿಂಪಡೆಯಬೇಕು, ಪ್ರಜಾಪ್ರಭುತ್ವ ಒಕ್ಕೂಟದ ವ್ಯವಸ್ಥೆ ಮತ್ತು ರಾಜ್ಯ ಸರ್ಕಾರದ ಸಾರ್ವಭೌಮತೆಯನ್ನು ಸಂರಕ್ಷಿಸಬೇಕು, ಕನ್ನಡ ನಾಡಿನ ಘನತೆ ಕಾಪಾಡಬೇಕೆಂದು ಆಗ್ರಹಿಸಿ ಆ.27 ರಂದು ʼರಾಜಭವನ ಚಲೋʼ ಬೃಹತ್ ಪ್ರತಿಭಟನೆ ಆಯೋಜಿಸಲಾಗಿದೆ.

ಸಂವಿಧಾನ ಮತ್ತು ಒಕ್ಕೂಟ ತತ್ವದ ವಿರೋಧಿಯಾದ ರಾಜ್ಯಪಾಲರನ್ನು ಮೋದಿ ಸರ್ಕಾರ ಕೂಡಲೆ ವಾಪಸ್ಸು ಕರೆಸಿಕೊಳ್ಳಬೇಕು. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಕೆಲಸವನ್ನು ಈ ತಕ್ಷಣವೇ ನಿಲ್ಲಿಸಬೇಕು ಎಂದು ಕರ್ನಾಟಕ ರಾಜ್ಯ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಸಂಚಾಲಕ ಅನಂತ ನಾಯಕ್ ಹಾಗೂ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ರಾಜ್ಯ ಕಾರ್ಯದರ್ಶಿ ಮಹಾಂತೇಶ ಕೌಲಗಿ ಅವರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ʼರಾಜ್ಯಪಾಲ ಥಾವತ್‌ ಚಂದ್‌ ಗೆಹಲೋತ್ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೊಡುವಾಗ ಸಂವಿಧಾನದ ಮೂಲ ತತ್ವಗಳನ್ನು ಹಾಗೂ ಪ್ರಜಾಪ್ರಭುತ್ವದ ಆಶಯಗಳನ್ನು ಸಂಪೂರ್ಣವಾಗಿ ಗಾಳಿಗೆ ತೂರಿದ್ದಾರೆ. ಬಿಜೆಪಿ-ಜೆಡಿಎಸ್ ಪಕ್ಷಗಳ ತಾಳಕ್ಕೆ ಕುಣಿಯುತ್ತಿರುವುದಷ್ಟೆ ಅಲ್ಲ, ಪಕ್ಷಪಾತಿ ಧೋರಣೆಯನ್ನು ತಾಳಿದ್ದಾರೆ. ಜನರಿಂದ ಆಯ್ಕೆಯಾದ ಸರ್ಕಾರದ ಮುಖ್ಯಸ್ಥರಾದ ಸಿಎಂ ವಿರುದ್ಧ ನಡೆಯುತ್ತಿರುವ ಪಿತೂರಿಯ ಭಾಗವಾಗಿದ್ದಾರೆʼ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ʼಕರ್ನಾಟಕ ಲೋಕಾಯುಕ್ತ, ಎಸ್‍ಐಟಿ ಮುಂತಾದ ತನಿಖಾ ಸಂಸ್ಥೆಗಳು ಪ್ರಾಥಮಿಕ ತನಿಖೆಯಲ್ಲಿ ತಪ್ಪಿತಸ್ಥರೆಂದು ಸಾಬೀತಾದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಯವರ ಗಣಿ ಹಗರಣ, ಮಾಜಿ ಸಚಿವರಾದ ಶಶಿಕಲಾ ಜೊಲ್ಲೆಯವರ ಮೊಟ್ಟೆ ಹಗರಣ, ಜನಾರ್ಧನ ರೆಡ್ಡಿಯವರ ಆಸ್ತಿ ಗಳಿಕೆ, ನಿರಾಣಿಯವರ ಭ್ರಷ್ಟಾಚಾರಗಳ ಕುರಿತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುವಂತೆ ರಾಜಭವನಕ್ಕೆ ಕೋರಿಕೆ ಸಲ್ಲಿಸಿ ವರ್ಷಗಳಾದರೂ ಇದೇ ರಾಜ್ಯಪಾಲರು ಮನವಿಗಳನ್ನು ಕಸದ ಬುಟ್ಟಿಗೆ ಎಸೆದು ಪಕ್ಷಪಾತ ಮಾಡಿದ್ದಾರೆ. ಇದುವರೆಗೂ ಒಬ್ಬರ ಮೇಲೂ ವಿಚಾರಣೆಗೆ ಅನುಮತಿ ನೀಡಿಲ್ಲʼ ಎಂದು ದೂರಿದರು.

ರಾಜಭವನ ಚಲೋ ಪ್ರತಿಭಟನೆಯಲ್ಲಿ ನಾಡಿನ ಪ್ರಜ್ಞಾವಂತರು, ಪ್ರಗತಿಪರರು, ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಿದ್ದರಾಮಯ್ಯನವರ ಸರ್ಕಾರದ ಆತ್ಮಾವಲೋಕನಕ್ಕಿದು ಸಕಾಲ

ಪತ್ರಿಕಾಗೋಷ್ಠಿಯಲ್ಲಿ ಮಾನವ ಬಂಧುತ್ವ ವೇದಿಕೆ ವಿಭಾಗೀಯ ಸಂಚಾಲಕ ಸುನೀಲ ಮಾರುತಿ ಮಾನಪಡೆ, ಜಿಲ್ಲಾ ಅಧ್ಯಕ್ಷ ನಾಗೇಂದ್ರ ಜವಳಿ, ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟದ ರಾಜ್ಯ ಮುಖಂಡ ಆದರ್ಶ ಯಲ್ಲಪ್ಪ, ಜಿಲ್ಲಾ ಸಂಚಾಲಕ ಅರ್ಜುನ ಗೊಬ್ಬರ, ಅಲೆಮಾರಿ ಸಂಘಟನೆಗಳ ಒಕ್ಕೂಟದ ಬಿ.ಹೆಚ್.ಮಂಜುನಾಥ, ವಿದ್ಯಾರ್ಥಿ ಬಂಧುತ್ವ ವೇದಿಕೆಯ ದಿನೇಶ ದೊಡ್ಡಮನಿ, ಪರಿಶಿಷ್ಟ ಪಂಗಡ ಮುಖಂಡ ಶಿವರಾಜ ಸುಬೇದಾರ, ಅಲ್ಪಸಂಖ್ಯಾತ ಮುಖಂಡ ಮಹಿಬೂಬ್ ಶಾಹ್ ದರವೇಶಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...