ದಕ್ಷಿಣ ಕನ್ನಡ | ಕೆರೆಗೆ ಇಳಿದು ಮೇಲೆ ಹತ್ತಲಾಗದ ಕಾಡಾನೆಗಳ ರಕ್ಷಣೆ

Date:

  • ಎರಡು ಮರಿ ಆನೆಗಳು ಸೇರಿ ನಾಲ್ಕು ಆನೆಗಳ ರಕ್ಷಣೆ
  • ರಾತ್ರಿ ವೇಳೆ ಕೆರೆಗೆ ಇಳಿದು ಅಲ್ಲಿಯೇ ಸಿಲುಕಿಕೊಂಡಿದ್ದ ಆನೆಗಳು

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಅಜ್ಜಾವರದಲ್ಲಿ ರೈತರೊಬ್ಬರ ಕೆರೆಯಲ್ಲಿ ಸಿಲುಕಿದ್ದ ನಾಲ್ಕು ಕಾಡಾನೆಗಳನ್ನು ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಗೂ ಸ್ಥಳೀಯರು ಗುರುವಾರ ರಕ್ಷಣೆ ಮಾಡಿದ್ದಾರೆ.

ಅಜ್ಜಾವರಕ್ಕೆ ಬಂದ ಕಾಡಾನೆಗಳ ಹಿಂಡೊಂದು ಸಂತೋಷ್ ಎಂಬುವರ ತೋಟದೊಳಗೆ ನುಗ್ಗಿವೆ. ಆನೆಗಳ ಹಿಂಡಿನಲ್ಲಿದ್ದ ಎರಡು ದೊಡ್ಡ ಆನೆಗಳು ಮತ್ತು ಎರಡು ಮರಿ ಆನೆಗಳು ತೋಟದಲ್ಲಿದ್ದ ಕೆರೆಗೆ ಇಳಿದಿದ್ದು, ಮೇಲೆ ಬರಲಾಗದೆ ಅಲ್ಲೇ ಸಿಲುಕಿಕೊಂಡಿದ್ದವು.

ಅರಣ್ಯ ಅಧಿಕಾರಿಗೆ ಸ್ಥಳಕ್ಕೆ ಧಾವಿಸಿ, ಕೆರೆಯ ಅಂಚಿನ ಒಂದು ಬದಿಯಲ್ಲಿ ಮಣ್ಣು ಅಗೆದು ದಾರಿ ಮಾಡಿಕೊಟ್ಟು ಕಾಡಾನೆಗಳಿಗೆ ನಡೆದಾಡಲು ಸಹಕಾರಿಯಾಗುವಂತೆ ಮರಳು, ಕಲ್ಲುಗಳನ್ನು ಸುರಿಸಿದ್ದಾರೆ. ಬಳಿಕ, ಆ ದಾರಿಯ ಮೂಲಕ ಮೂರು ಕಾಡಾನೆ ಮೇಲೆ ಬಂದರೆ, ಮರಿ ಆನೆಗೆ ಕಷ್ಟವಾಗಿತ್ತು. ಅವುಗಳನ್ನು ಬಳ್ಳಿ ಸಹಾಯದಿಂದ ದೂಡಿ ಮೇಲಕ್ಕೆ ತರಲಾಗಿದೆ. ಮೇಲೆ ಬಂದ ಕಾಡಾನೆಗಳು ಕಾಡಿನತ್ತ ತೆರಳಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ದೇವೇಗೌಡರ ʼಮಾನಸ ಪುತ್ರʼ ವೈ ಎಸ್‌ ವಿ ದತ್ತ ಮರಳಿ ಜೆಡಿಎಸ್‌ ಗೂಡಿಗೆ

ನಾಲ್ಕೂ ಆನೆಗಳನ್ನು ಸುರಕ್ಷಿತವಾಗಿ ಕಾಡಿಗೆ ತಲುಪಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಪಅರಣ್ಯ ಸಂರಕ್ಷಾಣಾಧಿಕಾರಿ ದಿನೇಶ್ ಕುಮಾರ್ ತಿಳಿಸಿದ್ದಾರೆ.

ಸುಳ್ಯ ವಲಯ ಅರಣ್ಯಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ಅರಣ್ಯಾಧಿಕಾರಿಗಳ, ಸಿಬ್ಬಂದಿಗಳ ಜತೆಗೆ ಸ್ಥಳೀಯರು ಕಾರ್ಯಾಚರಣೆ ಯಲ್ಲಿ ಸಹಕರಿಸಿದ್ದರು. ಘಟನೆ ವೀಕ್ಷಿಸಲು ಭಾರೀ ಸಂಖ್ಯೆಯಲ್ಲಿ ಜನ ಸೇರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...