ಶಿವಮೊಗ್ಗ | 2ಎ ಮೀಸಲಾತಿ ಹೋರಾಟ ವಿರೋಧಿಸಿ ಡಿ.18ರಂದು ಬೃಹತ್ ಪ್ರತಿಭಟನೆ

Date:

ಮೇಲ್ವರ್ಗದ ಜಾತಿ ಸಮುದಾಯಗಳು 2ಎ ಮೀಸಲಾತಿಗಾಗಿ ಹೋರಾಟಕ್ಕಿಳಿದಿರುವುದು ಅಸಂವಿಧಾನಿಕ ಹಾಗೂ ಅಪ್ರಸ್ತುತವಾದುದು ಎಂದು ಅಭಿಪ್ರಾಯ ವ್ಯಕ್ತಪಡಿಸಿರುವ ಅಹಿಂದ ಸಂಘಟನೆಗಳು, ಡಿ.18ರಂದು ಶಿವಮೊಗ್ಗ ನಗರದಲ್ಲಿ ಬೃಹತ್‌ ಪ್ರತಿಭಟನೆಗೆ ಸಜ್ಜಾಗಿವೆ.

ನಗರದಲ್ಲಿ ಗುರುವಾರ ಹಿಂದುಳಿದ ಜನ ಜಾಗೃತಿ ವೇದಿಕೆ ಆಯೋಜಿಸಿದ್ದ ಸಭೆಯಲ್ಲಿ ಪ್ರತಿಭಟನೆಯ ತೀರ್ಮಾನವನ್ನು ಕೈಗೊಂಡಿರುವ ಅಹಿಂದ ಸಂಘಟನೆಗಳ ಪ್ರಮುಖರು, 2ಎ ಮೀಸಲಾತಿ ಹೋರಾಟವನ್ನು “ಸಂವಿಧಾನ ವಿರೋಧಿ ಹೋರಾಟ” ಎಂದು ಕಿಡಿಕಾರಿದ್ದಾರೆ.

ಶತಶತಮಾನಗಳಿಂದ ಶೋಷಣೆಗೊಳಗಾಗಿ ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಹಿಂದುಳಿದಿರುವ ಜಾತಿಗಳಿಗೆ ಸಂವಿಧಾನದಲ್ಲಿ ಉಲ್ಲೇಖಿಸಲಾದ ಮಾನದಂಡಗಳಡಿ ನಿಗಧಿಪಡಿಸುವ ಮೀಸಲಾತಿಯನ್ನು ಧಕ್ಕಿಸಿಕೊಳ್ಳಲು ಮೇಲ್ವರ್ಗಗಳು ಹವಣಿಸುತ್ತಿರುವುದು ಸರಿಯಾದ ಕ್ರಮವಲ್ಲ ಎಂದು ಖಂಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದೇ ವೇಳೆ ಮಾತನಾಡಿದ ಹಿಂದುಳಿದ ಜನ ಜಾಗೃತಿ ವೇದಿಕೆ ಗೌರವ ಅಧ್ಯಕ್ಷ ಪ್ರೊ.ಹೆಚ್.ರಾಚಪ್ಪ, ಮೀಸಲಾತಿ ಸಂವಿಧಾನದ ಕೊಡುಗೆ. ಪ್ರಧಾನಮಂತ್ರಿ ಅಥವಾ ಮುಖ್ಯಮಂತ್ರಿಗಳಿಗೆ ಒತ್ತಾಯ ಮಾಡಿದಾಕ್ಷಣ ಅದು ಮಂಜೂರಾಗುವುದಿಲ್ಲ. ಸಂವಿಧಾನದ ಮಾನದಂಡದಡಿ ಕಾನೂನಾತ್ಮಕವಾಗಿ ರಚಿಸಲ್ಪಡುವ ಹಿಂದುಳಿದ ವರ್ಗಗಳ ಆಯೋಗದ ದೀರ್ಘ ಅಧ್ಯಯನದ ನಂತರ ಸಲ್ಲಿಸಲ್ಪಡುವ ವರದಿ ಆಧಾರದ ಮೇಲೆ ಪರಿಗಣಿಸಬಹುದಾದ ಸುದೀರ್ಘ ಪ್ರಕ್ರಿಯೆ ಅದು ಎಂದು ವಿವರಿಸಿದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪೋಕ್ಸೊ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ನ್ಯಾಯಾಂಗದ ನಿರಾಸಕ್ತಿ; ಸದನದ ಚರ್ಚೆ ಸ್ವಾಗತಾರ್ಹ

ಸಭೆಯಲ್ಲಿ ಹಿಂದುಳಿದ ಜನ ಜಾಗೃತಿ ವೇದಿಕೆ ಅಧ್ಯಕ್ಷ ತೀ.ನ. ಶ್ರೀನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ‘ಅಹಿಂದ’ ರಾಜ್ಯ ಜಂಟಿ ಸಂಚಾಲಕ ಮೊಹಮ್ಮದ್ ಸನಾವುಲ್ಲಾ, ಕಾಂತರಾಜ, ಹಿಂದುಳಿದ ವರ್ಗಗಳ ಆಯೋಗದ ಮಾಜಿ ಸದಸ್ಯ ಎನ್.ಪಿ. ಧರ್ಮರಾಜ್, ಸುರೇಶ್ ಬಾಬು, ಗೋಪಾಲಗೌಡ ಟ್ರಸ್ಟ್ ನ ಕಲ್ಲೂರು ಮೇಘರಾಜ್, ಪ್ರೊ.ಕಲ್ಲನ, ಜನತಾ ದಳ ಮುಖಂಡರಾದ ಎಸ್.ವಿ.ರಾಜಮ್ಮ, ಮುಸ್ಲಿಂ ಮುಖಂಡ ಅಫ್ರೀದಿ, ಕ್ರೈಸ್ತ ಸಮಾಜದ ಭಾಸ್ಕರ್ ಬಾಬು, ಸಿಂಪಿ ಸಮಾಜದ ರಘುನಾಥ್, ವಾಲ್ಮೀಕಿ ಸಮಾಜದ ರಾಜಣ್ಣ, ಸಂಚಾಲಕ ಆರ್.ಟಿ.ನಟರಾಜ್, ಸಂಘಟನಾ ಕಾರ್ಯದರ್ಶಿ ಚನ್ನವೀರಪ್ಪ ಗಾಮನಗಟ್ಟಿ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...