ಧಾರವಾಡ | ಬಿಆರ್‌ಟಿಎಸ್ ರಸ್ತೆಯಲ್ಲಿ ಖಾಸಗಿ ವಾಹನಗಳಿಗೂ ಅವಕಾಶ ಕಲ್ಪಿಸಿ: ಸಂಘಟನೆಗಳಿಂದ ಪ್ರತಿಭಟನೆ

Date:

ಹುಬ್ಬಳ್ಳಿ-ಧಾರವಾಡ ಮಹಾನಗರಗಳ ಮಾರ್ಗಮದ್ಯೆ ಸಂಚರಿಸುವ ಚಿಗರಿ ಬಸ್ ಅರ್ಥಾತ್ ಬಿಆರ್‌ಟಿಎಸ್ ಯೋಜನೆಯು ಕೆಲವರಿಗೆ ಅನುಕೂಲವಾದರೆ ಇನ್ನು ಕೆಲವು ಅನಾನುಕೂಲವೆಂಬ ಧ್ವನಿಗಳು ಎಂದಿನಿಂದಲೂ ಕೇಳಿ ಬರುತ್ತಿವೆ.

ಬಿಆರ್‌ಟಿಎಸ್ ಯೋಜನೆಯ ಅವೈಜ್ಞಾನಿಕತೆ ವಿರೋಧಿಸಿ ಧಾರವಾಡ ಧ್ವನಿ ಎಂಬ ಪಕ್ಷಾತೀತ ಹೋರಾಟ ಸಂಘಟನೆಯೊಂದು ಬಿಗರಿ ಬಸ್ ಸಂಚರಿಸುವ ರಸ್ತೆಯಲ್ಲಿ, ಕೆಲ ಪ್ರದೇಶಗಳಲ್ಲಿ ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಸೋಮವಾರ ಧಾರವಾಡದ ನವಲೂರು ಬ್ರಿಡ್ಜ್ ನಿಂದ ಹೊರಟು ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ಮಾಡುವ ಮೂಲಕ ಒತ್ತಾಯ ಮಾಡಿದೆ.

ಹುಬ್ಬಳ್ಳಿ-ಧಾರವಾಡ ಮಹಾನಗರ ದಿನದಿಂದ‌ ದಿನಕ್ಕೆ ಬೆಳೆಯುತ್ತಿದೆ. ಅದರೊಂದಿಗೆ ವಾಹನಗಳ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈ ಅವಳಿನಗರಗಳ ಮಾರ್ಗಮಧ್ಯದಲ್ಲಿ ಪ್ರತಿದಿನ ಸಾವಿರಾರು ವಾಹನಗಳು ಸಂಚರಿಸುತ್ತಿವೆ. ಬಿಆರ್‌ಟಿಎಸ್ ಯೋಜನೆ ಜಾರಿಯಾದ ನಂತರ ಬಿಗರಿ ಬಸ್‌ಗಳು ಸಂಚರಿಸಲು ಪ್ರತ್ಯೇಕ ರಸ್ತೆಯ ವ್ಯವಸ್ಥೆಯು ಇದೆ. ಚಿಗರಿ ಬಸ್ ಹೊರತುಪಡಿಸಿ ಖಾಸಗಿ ವಾಹನಗಳ ಸಂಚಾರಕ್ಕೆ ಈ ಪ್ರತ್ಯೇಕ ರಸ್ತೆಯಲ್ಲಿ ಅನುಮತಿ ನೀಡಿಲ್ಲ. ಹೀಗಾಗಿ ಖಾಸಗಿ ವಾಹನಗಳು ಚಿಗರಿ ರಸ್ತೆಯನ್ನು ಬಿಟ್ಟು ನಿಗದಿತ ರಸ್ತೆಯಲ್ಲಿ ಮಾತ್ರ ಸಂಚರಿಸಬೇಕಿದೆ. ಇದರ ಪರಿಣಾಮವಾಗಿ ಹುಬ್ಬಳ್ಳಿ ಧಾರವಾಡ ಮಾರ್ಗಮಧ್ಯದಲ್ಲಿ ಅಪಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ ಎಂದು ಪ್ರತಿಭಟನಾಕಾರರು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಸ್ 10

ಸಾರ್ವಜನಿಕ ರಸ್ತೆಗೆ ಹೋಲಿಸಿದರೆ ಚಿಗರಿ ಬಸ್ ಸಂಚರಿಸುವ ರಸ್ತಯು ಪ್ರತಿದಿನ ಶೇ. 95 ರಷ್ಟು ಖಾಲಿಯಾಗಿಯೇ ಇರುತ್ತದೆ. ಸಾರ್ವಜನಿಕ ರಸ್ತೆಯಲ್ಲಿ ದಿನಂಪ್ರತಿ ವಾಹನಗಳಿಂದ ಜನರು ಕಿಕ್ಕಿರಿದಿರುತ್ತಾರೆ. ಹೀಗಾಗಿ ಬಿಆರ್‌ಟಿಎಸ್ ರಸ್ತೆಯಲ್ಲಿ ಧಾರವಾಡದ ಜ್ಯುಬಿಲಿ ವೃತ್ತದಿಂದ ನವಲೂರಿನವರೆಗೆ, ಉಣಕಲ್‌ನಿಂದ ಹುಬ್ಬಳ್ಳಿ ರಾಣಿ ಚೆನ್ನಮ್ಮ ವೃತ್ತದವರೆಗೂ ಬೈಕ್, ಆಟೊ, ಕಾರು ಮತ್ತು ಲಘು ವಾಹನಗಳು ಸಂಚರಿಸಲು ಅನುಮತಿ ನೀಡಬೇಕು ಎಂದು ಧಾರವಾಡ ಧ್ವನಿ ಸಂಘಟನೆ ಸದಸ್ಯರು ಬಿಆರ್ ಟಿಎಸ್ ರಸ್ತೆಯಲ್ಲಿಯೇ ಪಾದಯಾತ್ರೆ ಮೂಲಕ ಘೋಷಣೆಯನ್ನು ಕೂಗಿದರು.

ಪಾದಯಾತ್ರೆ ನಡೆದಿದ್ದ ಸಂದರ್ಭದಲ್ಲಿ ಚಿಗರಿ ಬಸ್‌ ಮಧ್ಯೆ ಬಂದಿದ್ದಕ್ಕೆ ಆಕ್ರೋಶಗೊಂಡ ಹೋರಾಟಗಾರರು ಚಿಗರಿ ಬಸ್‌ಗೆ ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿ, ಚಿಗರಿ ಬಸ್‌ಗೆ ಪೂಜೆ ಮಾಡಿ ತೆಂಗಿನಕಾಯಿ ಒಡೆದು ಆಕ್ರೋಶ ವ್ಯಕ್ತಪಡಿಸಿದರು.

‘ಯಾಲಕ್ಕಿ ಶೆಟ್ಟರ್ ಕಾಲೊನಿ ಬ್ಯಾರಿಕೇಡ್‌ಗಳನ್ನು ತೆರವುಗೊಳಿಸಿ’ ಭಿತ್ತಿಫಲಕಗಳನ್ನು ಕೈಯಲ್ಲಿ ಹಿಡಿದು ಬಿಆರ್ ಟಿಎಸ್ ಯೋಜನೆಯ ವಿರುದ್ಧ ಘೋಷಣೆ ಕೂಗಿದರು. ಒಟ್ಟಾರೆ ಬಿಆರ್‌ಟಿಎಸ್ ಯೋಜನೆಯಲ್ಲಿನ ಲೋಪದೋಷಗಳನ್ನು ಸರಿಪಡಿಸಿ ಸಮಸ್ಯೆ ಬಗೆಹರಿಸಬೇಕು ಸಮಸ್ಯೆಗಳಿಗೆ ಪರಿಹಾರ ಒದಗಿಸಲು ಒಂದು ಸಮಿತಿ ರಚಿಸಬೇಕು. ಆ ಸಮಿತಿಯಲ್ಲಿ ಸಾರ್ವಜನಿಕರನ್ನೂ ಸೇರಿಸಿ ಶೀಘ್ರ ಮತ್ತು ಸುರಕ್ಷಿತ ಪ್ರಯಾಣಕ್ಕೆ ಅನುವು ಮಾಡಿಕೊಡಬೇಕು ಎಂದು ಹೋರಾಟಗಾರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಧಾರವಾಡ ಧ್ವನಿ ಸಂಘಟನೆ, ಕರ್ನಾಟಕ ದಲಿತ ವಿಮೋಚನಾ ಸಮಿತಿ, ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸುರಕ್ಷತಾ ಸಂಘ ಹಾಗೂ ಜನತಾ ಶಿಕ್ಷಣ ಸಮಿತಿ, ಜೆಎಸ್‌ಎಸ್ ಸಂಸ್ಥೆ ಈ ಪಾದಯಾತ್ರೆಗೆ ಬೆಂಬಲ ನೀಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...