ಅವೈಜ್ಞಾನಿಕ ಕಸ ವಿಲೇವಾರಿ ವಿರುದ್ಧ ಪ್ರತಿಭಟನೆ; ಬೆಂಗಳೂರಿನಲ್ಲಿ ಮತ್ತೆ ತ್ಯಾಜ್ಯ ಸಮಸ್ಯೆ ಉಂಟಾಗುತ್ತಾ?

Date:

ಬೆಂಗಳೂರು ನಗರದಲ್ಲಿ ಮತ್ತೆ ತ್ಯಾಜ್ಯ ವಿಲೇವಾರಿ ಸಮಸ್ಯೆ ಎದುರಾಗುವ ಸಾಧ್ಯತೆ ಕಂಡುಬಂದಿದೆ. ಕಣ್ಣೂರು, ಮಿಟ್ಟಗಾನಹಳ್ಳಿ ಕಲ್ಲು ಕ್ವಾರಿಯಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕಸ ಸುರಿಯುವುದನ್ನು ಗ್ರಾಮಸ್ಥರು ವಿರೋಧಿಸಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆ ಕಾರಣದಿಂದಾಗಿ ಸುಮಾರು 400ಕ್ಕೂ ಅಧಿಕ ಕಸ ವಿಲೇವಾರಿ ಲಾರಿಗಳು ಕಸ ವಿಲೇವಾರಿ ಮಾಡಲಾಗಿದೆ ಅಲ್ಲಿಯೇ ಬಾಕಿಯಾಗಿದೆ.

ರಾಜ್ಯದ ಇತರೆ ಜಿಲ್ಲೆಗಳು ಮಾತ್ರವಲ್ಲದೆ ಇತರೆ ರಾಜ್ಯಗಳಿಂದ ಉದ್ಯೋಗ, ಶಿಕ್ಷಣಕ್ಕಾಗಿ ಅದೆಷ್ಟೋ ಮಂದಿ ಬೆಂಗಳೂರಿಗೆ ಆಗಮಿಸುತ್ತಾರೆ. ರಾಜ್ಯ ರಾಜಧಾನಿಯಲ್ಲಿ ವಾತಾವರಣ, ಜೀವನಶೈಲಿಗೆ ಒಗ್ಗಿಹೋದ ಬಳಿಕ ಇಲ್ಲೇ ತಂಗುತ್ತಾರೆ. ಇವೆಲ್ಲವುದರ ನಡುವೆ ಸಾಮಾನ್ಯವಾಗಿಯೇ ಬೆಂಗಳೂರಿನಲ್ಲಿ ವಾಹನದಟ್ಟಣೆ ಹೆಚ್ಚಾಗುತ್ತದೆ. ಜೊತೆಗೆ ಕುಡಿಯುವ ನೀರು ವ್ಯವಸ್ಥೆ, ಕಸ ವಿಲೇವಾರಿಯೂ ಆಡಳಿತಕ್ಕೆ ಒಂದು ಸವಾಲು. ಅದರಲ್ಲೂ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುವುದರ ವಿರುದ್ಧ ನಿರಂತರವಾಗಿ ಆಕ್ರೋಶ ವ್ಯಕ್ತವಾಗುತ್ತಲೇ ಇದೆ.

ಇದನ್ನು ಓದಿದ್ದೀರಾ? ಮಂಗಳೂರು | ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳಲ್ಲಿ ಆರೋಗ್ಯ ಸಮಸ್ಯೆ; ಪಾಲಿಕೆ, ಜಿಲ್ಲಾಡಳಿತಕ್ಕಿಲ್ಲ ಕಾಳಜಿ!

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಸ ವಿಲೇವಾರಿ ಮಾಡುವಾಗ ಸ್ಥಳೀಯ ಜನರಿಗೆ ನಿರಂತರವಾಗಿ ದುರ್ವಾಸನೆ ಬರುವ ಸಮಸ್ಯೆ ಸಾಮಾನ್ಯವಾಗಿಯೇ ಇರುತ್ತದೆ. ಅದರೊಂದಿಗೆ ನೀರು ಕೂಡಾ ಕಲುಷಿತಗೊಳುತ್ತಿದೆ ಎಂದು ಕಣ್ಣೂರು, ಮಿಟ್ಟಗಾನಹಳ್ಳಿಯ ಗ್ರಾಮಸ್ಥರು ಹೇಳಿದ್ದಾರೆ. ಈ ರೀತಿ ಅವೈಜ್ಞಾನಿಕವಾಗಿ ಕಸ ವಿಲೇವಾರಿ ಮಾಡುವುದರ ವಿರುದ್ಧ ಧ್ವನಿ ಎತ್ತಿದ್ದಾರೆ. ಇದರಿಂದಾಗಿ ತಮಗಾಗುವ ಆರೋಗ್ಯ ಸಮಸ್ಯೆ ಬಗ್ಗೆ ಮಾತನಾಡಿದ್ದಾರೆ.

ಮಂಗಳವಾರವೇ ಸ್ಥಳೀಯರು ಪ್ರತಿಭಟನೆ ಆರಂಭಿಸಿದ್ದು ಇದೀಗ ಮೂರನೇ ದಿನಕ್ಕೆ ಕಾಲಿಟ್ಟಿದೆ. ಮೂರು ದಿನಗಳಿಂದ ಸುಮಾರು 400ಕ್ಕೂ ಅಧಿಕ ಕಸ ತುಂಬಿದ ಲಾರಿಗಳು ಕಣ್ಣೂರು, ಮಿಟ್ಟಗಾನಹಳ್ಳಿ ಪ್ರದೇಶದಲ್ಲಿಯೇ ಬಾಕಿಯಾಗಿದೆ. ಈ ನಡುವೆ ನಗರದಲ್ಲಿ ಮನೆಗಳಿಂದ ಸಂಗ್ರಹಿಸಿದ ತ್ಯಾಜ್ಯಗಳು ಆಟೋಗಳಲ್ಲೇ ಬಾಕಿಯಾಗಿದೆ. ಕಸ ವಿಲೇವಾರಿ ಮಾಡಲು ತ್ಯಾಜ್ಯ ತುಂಬಿ ಹೊರಟ ಲಾರಿಗಳು ವಾಪಸ್ ಬಾರದ ಕಾರಣದಿಂದಾಗಿ ಈಗ ಆಟೋಗಳಲ್ಲೇ ಕಸ ಉಳಿದು ದುರ್ವಾಸನೆ ಬೀರುತ್ತಿದೆ.

ಇದನ್ನು ಓದಿದ್ದೀರಾ? ರಾಯಚೂರು | ಕಸ ವಿಲೇವಾರಿ ಘಟಕದಿಂದ ಗ್ರಾಮಸ್ಥರಿಗೆ ಸಮಸ್ಯೆ; ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬಸನಗೌಡ ಬಾದರ್ಲಿ

ಈ ಪ್ರತಿಭಟನೆಯ ಮಧ್ಯೆಯೂ ಬೆಳಗಿನ ಜಾವ ಯಾರೂ ಇಲ್ಲದ ಸಂದರ್ಭ ನೋಡಿಕೊಂಡು 30 ಲಾರಿಗಳು ಕಸ ವಿಲೇವಾರಿ ಮಾಡಿದ್ದವು ಎನ್ನಲಾಗಿದೆ. ಆದರೆ ಮಾಹಿತಿ ತಿಳಿಯುತ್ತಿದ್ದಂತೆ ಗ್ರಾಮಸ್ಥರು ಲಾರಿಗಳನ್ನು ತಡೆದಿದ್ದಾರೆ. ರಸ್ತೆಯಲ್ಲಿ ಮಣ್ಣು ಸುರಿದಿದ್ದಾರೆ. ಇದರಿಂದಾಗಿ ಸದ್ಯ ಎಲ್ಲಾ ವಾಹನಗಳು ಅಲ್ಲಿಯೇ ಬಾಕಿಯಾಗಿದೆ.

ಸ್ಥಳೀಯರ ಆರೋಪ, ಅಧಿಕಾರಿಗಳ ಪ್ರತಿಕ್ರಿಯೆ

“ಅವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಲಾಗುತ್ತಿದೆ. ಹೆಚ್ಚಾಗಿ ದ್ರವತ್ಯಾಜ್ಞ (ಲಿಚೆಟ್) ಹೊರಬರುತ್ತಿದೆ. ಇದು ಕೆರೆ, ಬಾವಿ, ಕೊಳವೆ ಬಾವಿಗಳ ನೀರನ್ನು ಕಲುಷಿತಗೊಳಿಸುತ್ತಿದೆ. ನಾವು ಬಳಸುವ ನೀರು ಕಲ್ಮಶವಾಗಿರುವ ಕಾರಣದಿಂದಾಗಿ ನಮಗೆ ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ” ಎಂದು ಸ್ಥಳೀಯ ಹೋರಾಟಗಾರರು ಆರೋಪಿಸಿದ್ದಾರೆ.

ಆದರೆ ಅಧಿಕಾರಿಗಳು ಅವೈಜ್ಞಾನಿಕ ಕಸ ವಿಲೇವಾರಿ ಆರೋಪವನ್ನು ಅಲ್ಲಗಳೆದಿದ್ದಾರೆ. ಕೆರೆಗಳು ಕಲುಷಿತವಾಗುತ್ತಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಆದರೆ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ವರದಿಯ ಪ್ರಕಾರ ದ್ರವತ್ಯಾಜ್ಯ ಕೆರೆಗಳಿಗೆ ಸೇರುತ್ತಿಲ್ಲ. ನಾವು ವೈಜ್ಞಾನಿಕವಾಗಿಯೇ ಕಸ ವಿಲೇವಾರಿ ಮಾಡುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇಕ್ಕಟ್ಟಿನಲ್ಲಿ ಸಿಲುಕಿದ ಕಾರ್ಮಿಕರು

ಸ್ಥಳೀಯರ ಪ್ರತಿಭಟನೆ ಮತ್ತು ಅಧಿಕಾರಿಗಳ ಸಮರ್ಥನೆಯ ನಡುವೆ ಇದೀಗ ಇಕ್ಕಟ್ಟಿನಲ್ಲಿ ಸಿಲುಕಿರುವುದು ಕಸ ವಿಲೇವಾರಿ ಕಾಂಪ್ಯಾಕ್ಟರ್‌ಗಳ ಚಾಲಕರು. ಮಂಗಳವಾರ ಬೆಳಿಗ್ಗೆಯಿಂದ ಚಾಲಕರು ಅಲ್ಲಿಯೇ ಬಾಕಿಯಾಗಿದ್ದಾರೆ. ಲಾರಿಯನ್ನು ಬಿಟ್ಟು ಹೋಗಲೂ ಆಗದೆ, ಅಲ್ಲೇ ಇರಲೂ ಆಗದೆ ಚಾಲಕರು ಇಕ್ಕಟ್ಟಿನಲ್ಲಿ ಸಿಲುಕಿದ್ದಾರೆ.

ಇದನ್ನು ಓದಿದ್ದೀರಾ? ಕೊಡಗು | ಕಸ ವಿಲೇವಾರಿ ಘಟಕದಿಂದ ವಿದ್ಯಾರ್ಥಿಗಳ ಆರೋಗ್ಯದ ಮೇಲೆ ಪರಿಣಾಮ; ಎಚ್ಚೆತ್ತುಕೊಳ್ಳದ ಸ್ಥಳೀಯ ಆಡಳಿತ

ಕಸ ವಿಲೇವಾರಿ ಮಾಡುವ ಸ್ಥಳ ನಿರ್ಜನ ಪ್ರದೇಶವಾಗಿರುವ ಕಾರಣ ಚಾಲಕರಿಗೆ ಸರಿಯಾಗಿ ಊಟ, ನೀರು ಕೂಡಾ ಲಭಿಸುತ್ತಿಲ್ಲ. ಏನು ಬೇಕಾದರೂ ಸುಮಾರು ಎರಡು ಕಿಲೋ ಮೀಟರ್ ನಡೆದು ಹೋಗಬೇಕು. ಕಾಂಪ್ಯಾಕ್ಟರ್‌ಗಳನ್ನು ಒಳಕ್ಕೆ ಬರಲೂ ಬಿಡುತ್ತಿಲ್ಲ, ಹೊರಕ್ಕೆ ಹೋಗಲೂ ಬಿಡುತ್ತಿಲ್ಲ ಎಂದು ಚಾಲಕರು ಹೇಳಿದ್ದಾರೆ.

ಬೆಂಗಳೂರು ಮಾತ್ರವಲ್ಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಸ ವಿಲೇವಾರಿ ದೊಡ್ಡ ಸಮಸ್ಯೆಯಾಗಿಯೇ ಉಳಿದಿದೆ. ಅದರಲ್ಲೂ ಕಸ ವಿಲೇವಾರಿಯನ್ನು ನಿರ್ವಹಿಸುವ ಸಂಸ್ಥೆಯ ಅವೈಜ್ಞಾನಿಕ ವಿಧಾನದಿಂದಾಗಿ ಸ್ಥಳೀಯ ಜನರು ಅಲ್ಲಲ್ಲಿ ಪ್ರತಿಭಟನೆ ನಡೆಸುತ್ತಲೇ ಇದ್ದಾರೆ. ಕೆಲವೆಡೆ ದುರ್ವಾಸನೆಯಷ್ಟೇ ಸಮಸ್ಯೆಯಾದರೆ, ಇನ್ನೂ ಕೆಲವೆಡೆ ನೀರು ಮಾಲಿನ್ಯಗೊಳುವುದು, ಅಶುದ್ಧ ಗಾಳಿಯ ಸಮಸ್ಯೆ ಕಾಡುತ್ತಿದೆ. ತ್ಯಾಜ್ಯ ವಿಲೇವಾರಿ ಪ್ರದೇಶದ ಸುತ್ತ ವಾಸಿಸುವ ಜನರಿಗೆ ಸಾಮಾನ್ಯವಾಗಿಯೇ ಆರೋಗ್ಯ ಸಮಸ್ಯೆ ಎದುರಾಗುತ್ತಿದೆ. ಈ ಪ್ರತಿಭಟನೆ ಒಂದು ಇತ್ಯರ್ಥಕ್ಕೆ ಬರುವವರೆಗೂ ನಗರದಲ್ಲಿ ಕಸ ವಿಲೇವಾರಿ ಸಮಸ್ಯೆ ಉಂಟಾಗುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...