ಯಾದಗಿರಿ | ಮಹಿಳಾ ಕುಸ್ತಿಪಟುಗಳ ಮೇಲಿನ ದೌರ್ಜನ್ಯ ವಿರೋಧಿಸಿ ಪ್ರತಿಭಟನೆ

Date:

  • ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯಕ್ಕೆ ಆಗ್ರಹಿಸಿ ದೆಹಲಿಯಲ್ಲಿ ಹೋರಾಟ
  • ಬಿಜೆಪಿ ಸಂಸದ ಬ್ರಿಜ್ ಭೂಷಣ್‌ನನ್ನು ಬಂಧಿಸಿ ಕಾನೂನು ಕ್ರಮಕ್ಕೆ ಆಗ್ರಹ

ಲೈಂಗಿಕ ದೌರ್ಜನ್ಯದ ವಿರುದ್ಧ ನ್ಯಾಯಕ್ಕಾಗಿ ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ಮಹಿಳಾ ಕುಸ್ತಿ ಪಟುಗಳು ಸೇರಿದಂತೆ ಹಲವರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ ಖಂಡಿಸಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆಯ ಕಾರ್ಯಕರ್ತರು ಯಾದಗಿರಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಆರೋಪಿ ಸ್ಥಾನದಲ್ಲಿರುವ ಬಿಜೆಪಿ ಸಂಸದ ಮತ್ತು ಕುಸ್ತಿ ಫೇಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ ಚರಣ್ ಸಿಂಗ್‌ನನ್ನು ಕೂಡಲೇ ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

‘ಬೇಟಿ ಬಚಾವೋ ಬೇಟಿ ಪಡಾವೋ’ ಎಂದು ಹೇಳುವ ಪ್ರಧಾನಿ, ದಿಲ್ಲಿಯಲ್ಲೇ ಹಲವು ತಿಂಗಳಿನಿಂದ ಹೋರಾಟ ನಿರತ ಮಹಿಳಾ ಕುಸ್ತಿ ಪಟುಗಳ ಅಹವಾಲು ಕೇಳದೆ, ತಮ್ಮ ಸಂಸದ ಹಾಗೂ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ರಕ್ಷಣೆಗೆ ನಿಂತಿರುವುದು ಖಂಡನೀಯ ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಇಂದು ಎಲ್ಲ ಕ್ಷೇತ್ರವನ್ನು ವ್ಯಾಪಿಸಿಕೊಂಡಿದೆ. ದೇಶಕ್ಕೆ ಪದಕ ಗೆದ್ದು ದೇಶದ ಹಿರಿಮೆ ಹೆಚ್ಚಿಸಿರುವ ಹೆಮ್ಮೆಯ ಮಹಿಳಾ ಕುಸ್ತಿ ಪಟುಗಳಿಗೆ ಈ ಗತಿಯಾದರೆ ಇನ್ನು ಸಾಮಾನ್ಯ ಮಹಿಳೆಯರ ಪರಿಸ್ಥಿತಿ ಏನು? ತಮ್ಮ ಬೇಡಿಕೆ ಈಡೇರಿಕೆಗೆ ಕಟಿಬದ್ಧವಾಗಿ ಹೋರಾಟ ಮಾಡುತ್ತಿರುವ ಕೆಚ್ಚೆದೆಯ ಮಹಿಳೆಯ ಜೊತೆ ಇಡೀ ದೇಶವೇ ಬೆಂಬಲ ನೀಡಿದ್ದು, ಸರ್ಕಾರ ಎಚ್ಚೆತ್ತು ಆರೋಪಿ ಮಲೆ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಅಶ್ವತ್ಥ ನಾರಾಯಣ ವಿರುದ್ಧದ ಎಫ್‌ಐಆರ್‌ಗೆ ನಾಲ್ಕು ವಾರ ತಡೆ ನೀಡಿದ ಹೈಕೋರ್ಟ್‌

ಮಹಿಳಾ ಕುಸ್ತಿ ಪಟುಗಳ ಮೇಲೆ ಸರ್ಕಾರ ನಡೆಸಿದ ಪೊಲೀಸ್ ದೌರ್ಜನ್ಯ ಅತ್ಯಂತ ಖಂಡನೀಯ, ಪದಕ ಗೆದ್ದಾಗ ಶುಭಕೋರಿ ಪ್ರಚಾರ ಗಿಟ್ಟಿಸಿಕೊಂಡ ಮಾನ್ಯ ಪ್ರಧಾನ ಮಂತ್ರಿಗಳು ಇಂದು ಪ್ರಜಾಪ್ರಭುತ್ವದ ಹೆಬ್ಬಾಗಿಲು ಎಂದು ಹೇಳಿ ಹೊಸ ಸಂಸತ್ ಭವನ ಉದ್ಘಾಟಿಸುವಲ್ಲಿ ಇರುವ ಉತ್ಸಾಹ ಕುಸ್ತಿ ಪಟುಗಳ ಬೇಡಿಕೆಗಳನ್ನು ಆಲಿಸುವಲ್ಲಿ ಇರದೇ ಇರುವುದು ವಿಷಾದನೀಯ ಆದ್ದರಿಂದ ಕೇಂದ್ರ ಸರ್ಕಾರ ಈ ಕೂಡಲೇ ಕುಸ್ತಿಪಟುಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಮುಖಂಡರಾದ ರಾಹುಲ್ ಕೊಲ್ಲೂರಕರ್, ಕಾಶೀನಾಥ್ ನಾಟೀಕಾರ, ದೂ ಸಾಬಣ್ಣ ಕೆ, ಭೀಮಾಶಂಕರ, ಮರೆಪ್ಪ ಗುರುಸುಣಗಿ, ಹಣಮಂತನಾಯಕ, ಮಲ್ಲಿಕಾರ್ಜುನ ಕುಮನೂರ, ಮಲ್ಲಪ್ಪ ವಗ್ಗನೋರಿ, ಹಾಸ, ಸದಸ್ಯರಾದ ಸಾಯಬಣ್ಣ ನಾಟೀಕಾರ, ಹಂಪಯ್ಯ ಶೇಂಗಿನೋರ, ಮೌನೇಶ ನಾಟೀಕಾರ, ಭೀಮಪ್ಪ ಗೌಂಡಿ ಕ್ಯಾತ್ನಾಳ, ಎಸ್ ಎಚ್ ಹಂಚಿನಾಳ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...