ತಿಪಟೂರು ಪೊಲೀಸ್ ಉಪಾಧೀಕ್ಷಕರ ವಿರುದ್ದ ಭೀಮ್ ಆರ್ಮಿ ಸಂಘಟನೆಯಿಂದ ಪ್ರತಿಭಟನೆ

Date:

ತಿಪಟೂರು ನಗರದ ದೊಡ್ಡಯ್ಯನಪಾಳ್ಯ ಗ್ರಾಮದ ದಲಿತ ಮಹಿಳೆ ಮೇಲೆ ದೌರ್ಜನ್ಯವಾಗಿದ್ದು ನೊಂದವರ ಪರ ಕೆಲಸ ಮಾಡಬೇಕಾದ ಪೊಲೀಸ್ ಇಲಾಖೆ, ದೌರ್ಜನ್ಯ ನಡೆಸಿದ ವ್ಯಕ್ತಿಗಳ ಪರ ಶಾಮಿಲಾಗಿ ದಲಿತ ಮಹಿಳೆಗೆ ಅನ್ಯಾಯ ಮಾಡಲಾಗಿದೆ, ತಿಪಟೂರು ಪೊಲೀಸ್ ಉಪ ಅಧೀಕ್ಷಕರು ಜಾತಿ ನಿಂದನೆ ಪ್ರಕರಣದಲ್ಲಿ ನ್ಯಾಯಸಮ್ಮತ ತನಿಖೆ ನಡೆಸಿಲ್ಲ. ಪ್ರಕರಣದ ಮರುತನಿಖೆ ನಡೆಸಬೇಕು, ನೊಂದ ಕುಟುಂಬಕ್ಕೆ ನ್ಯಾಯದೊರಕಿಸಿಕೊಡಬೇಕು ಎಂದು ಒತ್ತಾಯಿಸಿ ಕರ್ನಾಟಕ ಭೀಮ್ ಆರ್ಮಿಯಿಂದ ತಿಪಟೂರು ಆಡಳಿತ ಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಮೂಲಕ ರಾಜ್ಯಪಾಲರು ಹಾಗೂ ಗೃಹಸಚಿವರಿಗೆ ಮನವಿ ಪತ್ರ ಸಲ್ಲಿಸಲಾಯಿತು.

ಪ್ರತಿಭಟನಾ ನಿರತರನ್ನು ಉದ್ದೇಶಿಸಿ ಕರ್ನಾಟಕ ಭೀಮ್ ಆರ್ಮಿ ರಾಜ್ಯಾಧ್ಯಕ್ಷ ಮತೀನ್ ಕುಮಾರ್ ಮಾತನಾಡಿ ತಿಪಟೂರು ನಗರದ ದೊಡ್ಡಯ್ಯನಪಾಳ್ಯ ಗ್ರಾಮದ ಮಂಜುಳಮ್ಮ ಕೋಂ ಬಸವರಾಜು ಎಂಬುವವರಿಂದ ಹಣಕಾಸಿನ ಸಹಾಯಪಡೆದ ಅದೇ ಗ್ರಾಮದ ರಾಜೇಶ್ ಬಿನ್ ಜಯರಾಮಯ್ಯ ಎಂಬುವವರು ದಲಿತ ಮಹಿಳೆ ಮಂಜುಳಮ್ಮನ ಮೇಲೆ ಜಾತಿದೌರ್ಜನ್ಯ ನಡೆಸಿ,ಕೊಲೆ ಬೆದರಿಕೆ ಹಾಕಿದರು,ನೊಂದ ಮಹಿಳೆ ತಿಪಟೂರು ನಗರಪೊಲೀಸ್ ಠಾಣೆಗೆ ದೂರು ನೀಡಿದರೆ, ಪ್ರಕರಣದ ತನಿಖೆನಡೆಸಿ ಪ್ರಕರಣ ದಾಖಲಿಸದೇ,ದೌರ್ಜನ್ಯ ನಡೆಸಿದ ರಾಜೇಶ್ ಪರವಾಗಿ ವಕಾಲತ್ತು ವಹಿಸಿದ ಪೊಲೀಸರು, ಪ್ರಕರಣ ದಾಖಲಿಸದೆ, ವಾಪಾಸ್ ಕಳಿಸಿದ್ದಾರೆ ಎಂದು ಪ್ರತಿಭಟನೆ ನಿರತರು ಆರೋಪಿಸಿದ್ದಾರೆ.

ದೌರ್ಜನ್ಯದಿಂದ ನೊಂದಮಹಿಳೆ ತುಮಕೂರು ಜಿಲ್ಲಾಪೊಲೀಸ್ ವರೀಷ್ಠಾಧಿಕಾರಿಗಳಿಗೆ ದೂರು ನೀಡಿ ಎಸ್ಪಿ ಯವರ ಸೂಚನೆ ಮೇರೆಗೆ ಅಟ್ರಾಸಿಟಿ ಕೇಸ್ ದಾಖಲಿಸಲಾಗಿತ್ತು, ಆದರೆ ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ ತಿಪಟೂರು ಪೊಲೀಸ್ ಉಪ ಅಧೀಕ್ಷಕರು ,ದಲಿತರ ಮೇಲೆ ದೌರ್ಜನ್ಯ ನಡೆಸಿದ ರಾಜೇಶ್ ಪ್ರಭಾವಕ್ಕೆ ಒಳಗಾಗಿ ಪರಿಶಿಷ್ಠ ದೌರ್ಜನ್ಯ ಪ್ರಕರಣ ನ್ಯಾಯಸಮ್ಮತವಾಗಿ ನಡೆಸದೆ ಅನ್ಯಾಯ ಮಾಡಿದ್ದಾರೆ,ಪ್ರಕರಣದ ಸಾಕ್ಷಿಗಳನ್ನ ಬೆದರಿಸಿ ತಮ್ಮ ಇಚ್ಚೆಯಂತೆ ಹೇಳಿಕೆ ಪಡೆದಿದ್ದಾರೆ, ತಿಪಟೂರು ಡಿವೈಎಸ್ಪಿ ಹಾಗೂ ಅವರ ಕಚೇರಿ ಸಿಬ್ಬಂದಿ ದಲಿತ ವಿರೋಧಿಗಳಾಗಿ ವರ್ತಿಸುತ್ತಿದ್ದು,ಇವರಿಂದ ದಲಿತರು ನ್ಯಾಯ ನಿರೀಕ್ಷೆ ಮಾಡುವುದು,ಕಷ್ಟವಾಗಿದ್ದು, ಡಿವೈಎಸ್ಪಿ ಯವರು ಸಲ್ಲಿಸಿರುವ ದೋಷಾರೋಪಪಟ್ಟಿ ರದ್ದುಗೊಳ್ಳಿ ಬೇರೆ ಅಧಿಕಾರಿಗಳಿಂದ ಪ್ರಕರಣದ ಮರುತನಿಖೆ ನಡೆಸಬೇಕು, ನೊಂದ ದಲಿತ ಮಹಿಳೆ ಮಂಜುಳಮ್ಮ ಕುಟುಂಬಕ್ಕೆ ಸೂಕ್ತ ರಕ್ಷಣೆ ಹಾಗೂ ನ್ಯಾಯದೊರಕಿಸಿಕೊಡಬೇಕು ಎಂದು ಒತ್ತಾಯಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆಯಲ್ಲಿ ಕರ್ನಾಟಕ ಭೀಮ್ ಆರ್ಮಿ,ಮುಖಂಡರಾದ ಪ್ರದೀಪ್,ಕಾನೂನು ಸಲಹೆಗಾರ ರಾಜೀವ್ ಶಾಂಬು,ದರ್ಶನ್ ಪಂಡಿತ್ ಸಿಂಹ, ಭೀಮ್ ಆರ್ಮಿ ಯುವ ಮುಖಂಡ ಮೋಹನ್ ಬಾಬು,ಹರೀಶ್ ಯಗಚೀಕಟ್ಟೆ .ನಾಗ್ತೀಹಳ್ಳಿ ಶಶಿಕುಮಾರ್ .ಕವಿತ ,ಮಂಜುಳ, ಬಸವರಾಜು,ಮುಂತ್ತಾದವರು ಉಪಸ್ಥಿತರಿದರು.

ವರದಿ – ಮಿಥುನ್ ತಿಪಟೂರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...