ಬೀದರ್‌ | ಬಿಎಸ್‌ಎಸ್‌ಕೆ ಕಾರ್ಮಿಕರು, ಕಾರಂಜಾ ಮುಳಗಡೆ ಸಂತ್ರಸ್ತರಿಂದ ಪ್ರತಿಭಟನೆ

Date:

ಬೀದರ ಸಹಕಾರ ಸಕ್ಕರೆ ಕಾರ್ಖಾನೆ ಕಾರ್ಮಿಕರು ಹಾಗೂ ಕಾರಂಜಾ ಸಂತ್ರಸ್ತರು ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕನ್ನಡ ರಾಜೋತ್ಸವ ದಿನಾಚರಣೆದಂದು ಬೀದರ್‌ ನಗರದಲ್ಲಿ ಜಂಟಿಯಾಗಿ ಪ್ರತಿಭಟನಾ ಮೆರವಣಿಗೆ ನಡೆಸಿದರು.

ದಲಿತ ರಕ್ಷಣಾ ಹೋರಾಟ ಸಮಿತಿ ಹಾಗೂ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ನೇತ್ರತ್ವದಲ್ಲಿ ನಗರದ ಡಾ.ಬಿ.ಆರ್.‌ಅಂಬೇಡ್ಕರ್‌ ವೃತ್ತದಿಂದ ನೆಹರೂ ಕ್ರೀಡಾಂಗಣದವರೆಗೆ‌ ಪ್ರತಿಭಟನಾ ಮೆರವಣಿಗೆ ನಡೆಸಿದರು. ಬಳಿಕ ಕರ್ನಾಟಕ ರಾಜೋತ್ಸವ ಧ್ವಜಾರೋಹಣ ಕಾರ್ಯಕ್ರಮ ಮುಗಿಸಿದ ಬಳಿಕ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದರು.

ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಬೀದರ ಸಹಕಾರ ಸಕ್ಕರೆ ಕಾರ್ಖಾನೆಯ ಕಾರ್ಮಿಕರ ವೇತನ ಮತ್ತು ಕಾರಂಜಾ ಮುಳುಗಡೆ ಸಂತ್ರಸ್ತರ ವೈಜ್ಞಾನಿಕ ಪರಿಹಾರಕ್ಕಾಗಿ ನಿರಂತರವಾಗಿ ಹೋರಾಟ ನಡೆಸುವ ಮೂಲಕ ಜಿಲ್ಲಾಡಳಿತಕ್ಕೆ ಹಲವು ಬಾರಿ ಮನವಿ ಸಲ್ಲಿಸಿದರೂ ಇಲ್ಲಿಯವರೆಗೆ ಯಾವುದೇ ರೀತಿಯ ಸ್ಪಂದನೆ ಸಿಗುತ್ತಿಲ್ಲ. ಜಿಲ್ಲೆಯ ರೈತರ, ಕಾರ್ಮಿಕರ ಬೇಡಿಕೆ ಈಡೇರಿಸುವಲ್ಲಿ ಜಿಲ್ಲೆಯ ಜನಪ್ರತಿನಿಧಿಗಳು, ಅಧಿಕಾರಿಗಳು ವಿಫಲರಾಗಿದ್ದಾರೆʼ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರಂಜಾ ಜಲಾಶಯದಲ್ಲಿ ಭೂಮಿ, ಮನೆ ಕಳೆದುಕೊಂಡ ಸಂತ್ರಸ್ತರಿಗೆ ವೈಜ್ಞಾನಿಕ ಪರಿಹಾರ ನೀಡಬೇಕೆಂದು ಆಗ್ರಹಿಸಿ ಕಳೆದ ಎರಡೂವರೆ ವರ್ಷದಿಂದ ನಗರದಲ್ಲಿ ಅಹೋರಾತ್ರಿ ಧರಣಿ ಸತ್ಯಾಗ್ರಹ‌ ನಡೆಸಲಾಗುತ್ತಿದೆ. ಚುನಾಯಿತ ಜನಪ್ರತಿನಿಧಿಗಳು ಇಲ್ಲಿಯವರೆಗೆ ಕೇವಲ ಆಶ್ವಾಸನೆ ನೀಡುತ್ತಲೇ ಬಂದಿದ್ದಾರೆ, ಹೊರತು ಪರಿಹಾರಕ್ಕಾಗಿ ಸರ್ಕಾರ ಯಾವುದೇ ರೀತಿಯ ಕ್ರಮ ಕೈಗೊಳ್ಳುತ್ತಿಲ್ಲ. ಇದರಿಂದ ಭೂಮಿ ಕಳೆದುಕೊಂಡ ರೈತರ ಬದುಕು ಅತಂತ್ರವಾಗಿದ್ದು, ನಗರಗಳಿಗೆ ವಲಸೆ ಹೋಗುತ್ತಿದ್ದಾರೆ’ ಎಂದರು.

ʼಕಾರಂಜಾ ಮುಳುಗಡೆ ಸಂತ್ರಸ್ತರ ಹಿತರಕ್ಷಣಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಪಾಟೀಲ ಮಾತನಾಡಿ, ‘ಕಳೆದ ಲೋಕಸಭಾ ಚುನಾವಣೆಯ ಮುಂಚೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನದ ವೇಳೆ ಕಾರಂಜಾ ಮುಳುಗಡೆ ಸಂತ್ರಸ್ತರ ಜೊತೆಗೆ ಸಭೆ ಕರೆದು ಬೇಡಿಕೆ ಕುರಿತು ಸಮಾಲೋಚನೆ ನಡೆಸಿ ಬೇಡಿಕೆ ಈಡೇರಿಸುವ ಕುರಿತು ಉನ್ನತ ಮಟ್ಟದ ಸಭೆ ಕರೆಯುವ ಬಗ್ಗೆ ಭರವಸೆ ನೀಡಿದರು. ಆದರೆ, ಇಲ್ಲಿಯವರೆಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲʼ ಎಂದು ಆಕ್ರೋಶ ವ್ಯಕ್ತಪಡಿಸಿದರು.

ʼಬಿಎಸ್ಎಸ್‌ಕೆ ಕಾರ್ಮಿಕ ಸಂಘದ ಅರ್ಜುನ ತಮಗಿಕರ್ ಮಾತನಾಡಿ, ‘ಜಿಲ್ಲೆಯ ರೈತರ ಜೀವನಾಡಿಯಾಗಿದ್ದ ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ (ಬಿಎಸ್ಎಸ್ಕೆ) 2016ರಿಂದ ಸ್ಥಗಿತಗೊಂಡಿದೆ. ಇದರಿಂದ ಕೆಲಸ ಕಳೆದುಕೊಂಡ ಕಾರ್ಮಿಕರ ಬದುಕು ಬೀದಿಗೆ ಬಂದಿದೆ. ಅಲ್ಲದೇ ಕಾರ್ಮಿಕರಿಗೆ ನ್ಯಾಯಯುತವಾಗಿ ಸಿಗಬೇಕಾದ 32.99 ಕೋಟಿ ರೂ. ವೇತನ ಸಹ ಇಲ್ಲಿಯವರೆಗೆ ನೀಡಲಿಲ್ಲ. ಇದರಿಂದ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೂಡಲೇ ಒಂದು ತಿಂಗಳೊಳಗೆ ಬಾಕಿ ವೇತನ ಬಿಡುಗಡೆ ಮಾಡಬೇಕು.ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಜಂಟಿಯಾಗಿ ಉಗ್ರ ಹೋರಾಟ ರೂಪಿಸಲಾಗುವುದುʼ ಎಂದು ಎಚ್ಚರಿಕೆ ನೀಡಿದರು.

ಬೀದರ್ ಸಹಕಾರ ಸಕ್ಕರೆ ಕಾರ್ಖಾನೆ ಕಾರ್ಮಿಕರ ವೇತನ ಹಾಗೂ ಕಾರಂಜಾ ಮುಳುಗಡೆ ಸಂತ್ರಸ್ತರು ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನಾ ಮೆರವಣಿಗೆ ಮುಖಾಂತರ ನೆಹರೂ ಕ್ರೀಡಾಂಗಣದ‌ ಬಳಿ ಆಗಮಿಸಿ ನ್ಯಾಯಕ್ಕಾಗಿ ಘೋಷಣೆ ಕೂಗಿದರು. ಇದೇ ವೇಳೆ ನೆಹರೂ ಕ್ಕರೀಡಾಂಗಣದಲ್ಲಿ ನಡೆದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಂಸದ ಸಾಗರ್ ಖಂಡ್ರೆ ಅವರು ರೈತರು ಪ್ರತಿಭಟನೆ ನಡೆಸುತ್ತಿರುವುದು ಕಂಡರೂ ರೈತರ ಬಳಿ ಆಗಮಿಸದೆ ಕಾರಿನಲ್ಲಿ ತೆರಳಿದ್ದರು. ಸಂಸದರ ಈ ನಡೆಯನ್ನು ಪ್ರತಿಭಟನಾ ನಿರತ ರೈತರು, ಕಾರ್ಮಿಕರು ಖಂಡನೆ ವ್ಯಕ್ತಪಡಿಸಿದ ಘಟನೆ ಜರುಗಿತು.

ಈ ಸುದ್ದಿ ಓದಿದ್ದೀರಾ? ‘ವಕ್ಫ್‌ ಆಸ್ತಿ ಅಲ್ಲಾಹನದ್ದು, ಮರಳಿ ಪಡೆಯಲು ಕಾಂಪ್ರಮೈಸ್‌ ಬೇಡ’ ಎಂದಿದ್ದ ಬೊಮ್ಮಾಯಿ; ಇಲ್ಲಿದೆ ದಾಖಲೆ

ಪ್ರತಿಭಟನೆಯಲ್ಲಿ ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಸಂಸ್ಥಾಪಕ ಅಧ್ಯಕ್ಷ ಸ್ವಾಮಿದಾಸ ಕೆಂಪೆನೊರ್, ದಲಿತ ರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಪ್ರಕಾಶ ಹಳ್ಳಿಖೇಡ್, ಜಿಲ್ಲಾಧ್ಯಕ್ಷ ಸಂಜು ಉಜನಿ, ಕಲ್ಯಾಣ ಕರ್ನಾಟಕ ನಿರ್ಮಾಣ ಸೇನೆ ಉಪಾಧ್ಯಕ್ಷ ಸಂಗಮೇಶ ಏಣಕೂರ ಸೇರಿದಂತೆ ಮಲ್ಲಿಕಾರ್ಜುನ ಭಂಡಾರಿ, ಶಿವರಾಜ್ ನೆಲವಾಳಕರ್, ಜೇಮ್ಸ್ ಇಸ್ಲಾಂಪುರ, ಸಂಜಯ ಪಾಟೀಲ, ಸಂಜೀವಕುಮಾರ ಅಲ್ಲೂರೆ, ಸೂರ್ಯಕಾಂತ ಬಲ್ಲೂರೆ ಸೇರಿದಂತೆ ಕಾರಂಜಾ ಮುಳುಗಡೆ ಸಂತ್ರಸ್ತರು, ಬಿಎಸ್‌ಎಸ್ಕೆ ಕಾರ್ಮಿಕರು ಪಾಲ್ಗೊಂಡಿದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...