ಬೀದರ್‌ | ಅಲೆಮಾರಿಗಳಿಗೆ ಮೂಲ ಸೌಕರ್ಯ ಕಲ್ಪಿಸಲು ಮಾನವ ಸರಪಳಿ ರಚಿಸಿ ಪ್ರತಿಭಟನೆ

Date:

ಕಳೆದ 25 ವರ್ಷಗಳಿಂದ ಬೀದರ್‌ ನಗರದ ನೌಬಾದ ಬಳಿ ಬೀದಿ ಬದಿ ಜೋಪಡಿಗಳಲ್ಲಿ ಬದುಕು ಸಾಗಿಸುತ್ತಿರುವ ನೂರಕ್ಕೂ ಅಧಿಕ ಕುಟುಂಬಗಳಿಗೆ ವಸತಿ ಸೌಲಭ್ಯ ಸೇರಿದಂತೆ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸುವಂತೆ ಎಂದು ಅಲೆಮಾರಿ ಜನಾಂಗ ಬೀದರನಲ್ಲಿ ಪ್ರತಿಭಟನೆ ನಡೆಸಿತು.

ಬೀದರ್‌ ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದ ಹತ್ತಿರ ಮಾನವ ಸರಪಳಿ ನಿರ್ಮಿಸಿ ವಿಭಿನ್ನವಾಗಿ ಮಾನವ ಹಕ್ಕುಗಳ ದಿನ ಆಚರಿಸಿ ಜಿಲ್ಲಾಡಳಿತ ವಿರುದ್ದ ಘೋಷಣೆ ಕೂಗಿದರು.

ಅಲೆಮಾರಿ ಜನಾಂಗ ಕಳೆದ ಆರೇಳು ವರ್ಷಗಳಿಂದ ಜಿಲ್ಲಾಡಳಿತ ನಿವೇಶನ ಕೊಡುವ ಭರವಸೆ ನೀಡುತ್ತಲೇ ಇದೆ. ಸಾಕಷ್ಟು ಬಾರಿ ಪ್ರತಿಭಟನೆ ನಡೆಸಿದರೂ ನಮ್ಮ ಮನವಿಗೆ ಕಿಮ್ಮಿತ್ತಿಲ್ಲ ಎನ್ನುವಂತಾಗಿದೆ. ಈಗಲಾದರೂ ಜಿಲ್ಲೆಯ ಇಬ್ಬರು ಸಚಿವರು ವಸತಿಗಾಗಿ ನಿವೇಶನ ಒದಗಿಸಬೇಕೆಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪ್ರತಿಭಟನೆ ನೇತ್ರತ್ವ ವಹಿಸಿದ ವಿಶ್ವಕ್ರಾಂತಿ ದಿವ್ಯಪೀಠದ ಅಧ್ಯಕ್ಷ ಓಂಪ್ರಕಾಶ ರೊಟ್ಟೆ ಮಾತನಾಡಿ, “ನೌಬಾದ ಚೌಳಿ ಬಳಿಯ ಆಟೋ ನಗರ ರಸ್ತೆ ಪಕ್ಕದಲ್ಲಿ ವಾಸಿಸುವ ಅಲೆಮಾರಿ ಜನಾಂಗಕ್ಕೆ ಕನಿಷ್ಠ ಮೂಲಭೂತ ಸೌಕರ್ಯ ಒದಗಿಸುವಲ್ಲಿ ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ. ಖಾಸಗಿ ಜಾಗದಲ್ಲಿ ತಾತ್ಕಾಲಿಕ ಗುಡಿಸಲು ನಿರ್ಮಿಸಿಕೊಂಡಿರುವ ಇವರು ಕತ್ತಲು, ಮಳೆ, ಚಳಿ, ಬಿಸಿಲು ಎನ್ನದೇ ಪುಟ್ಟ ಪುಟ್ಟ ಕಂದಮ್ಮಗಳಿಗೆ ಒಡಲಲ್ಲಿ ಇಟ್ಟುಕೊಂಡು ನರಕಯಾತನೆ ಅನುಭವಿಸುತ್ತಿದ್ದಾರೆ. ಆದರೂ ಜಿಲ್ಲಾಡಳಿವಾಗಲಿ, ಜನಪ್ರತಿನಿಧಿಗಳಾಗಲಿ ಇವರ ಸಂಕಟಕ್ಕೆ ಸ್ಪಂದಿಸಿ ಸಮಸ್ಯೆ ಬಗೆಹರಿಸಲು ಮುಂದಾಗದೇ ಇರುವುದು ನಾಗರಿಕ ಸಮಾಜ ತಲೆತಗ್ಗಿಸುವ ಸಂಗತಿಯಾಗಿದೆ” ಎಂದು ಕಳಕಳ ವ್ಯಕ್ತಪಡಿಸಿದರು.

“2017ರಲ್ಲಿ ಅಲೆಮಾರಿಗಳ ನಿವೇಶನಕ್ಕಾಗಿ ಅಂದಿನ ಸಚಿವರಾದ ರಹೀಂ ಖಾನ್ ಅವರ ನೇತ್ರತ್ವದ ಸಭೆಯಲ್ಲಿ ಎರಡು ಎಕರೆ ಜಾಗ ಗುರುತಿಸಿ ಠರಾವು ಪಾಸು ಮಾಡಲಾಗಿತ್ತು. ಆದರೆ 6 ವರ್ಷ ಕಳೆದರೂ ಅಧಿಕಾರಿಗಳ, ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದಾಗಿ ಅಲೆಮಾರಿಗಳಿಗೆ ನಿವೇಶನ ದಕ್ಕಲಿಲ್ಲ.ಈಗಲಾದರೂ ಜಿಲ್ಲೆಯ ಇಬ್ಬರು ಸಚಿವರು ಇದನ್ನು ಗಂಭೀರವಾಗಿ ಪರಿಗಣಿಸಿ ಜಿಲ್ಲಾ ಉಸ್ತುವಾರಿ ಸಚಿವರ ತವರು ಕ್ಷೇತ್ರದ ಖಾನಾಪುರದಲ್ಲಿ ಬಹಳಷ್ಟು ಖಾಲಿ ಸ್ಥಳಾವಕಾಶವಿದ್ದು, ಅಲ್ಲಿ ವಸತಿ ವಂಚಿತರಾದ ಜನಾಂಗಕ್ಕೆ ನಿವೇಶನ ಗುರುತಿಸಿ ಇವರ ಮಕ್ಕಳಿಗೆ ವಸತಿ ಶಾಲೆ ಹಾಗೂ ಆರೋಗ್ಯ ಕೇಂದ್ರ ತೆರೆದು ಮೂಲಭೂತ ಸೌಲಭ್ಯ ಕಲ್ಪಿಸಿಕೊಡಲು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದರು.

“ಕೆಲ ದಿನಗಳ ಹಿಂದೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅಲೆಮಾರಿ ಜನಾಂಗದವರಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಿ ಸರ್ಕಾರದ ಯೋಜನೆಗಳ ಕುರಿತು ಮಾಹಿತಿ ನೀಡುವಂತೆ ಸೂಚಿಸಿದರು. ಆದರೂ ಅಲೆಮಾರಿಗಳಿಗೆ ನಿವೇಶನ ಸೇರಿದಂತೆ ಯಾವುದೇ ಮೂಲಭೂತ ಸೌಕರ್ಯ ಒದಗಿಸಲು ಅಧಿಕಾರಿಗಳು ಇಚ್ಚಾಶಕ್ತಿ ತೋರಲಿಲ್ಲ. ಇನ್ನಾದರೂ ಜಿಲ್ಲಾಡಳಿತ ಎಚ್ಚೆತುಕೊಂಡು ಅಲೆಮಾರಿಗಳಿಗೆ ಅಗತ್ಯ ಸೌಲಭ್ಯ ಸೂರು ಕಲ್ಪಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಅಭಿವೃದ್ಧಿಯಲ್ಲಿ ಎಸ್. ನಿಜಲಿಂಗಪ್ಪನವರ ಕೊಡುಗೆ ಅಪಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ಸಂದರ್ಭದಲ್ಲಿ ನ್ಯಾಯವಾದಿ ಜೈರಾಜ ಬುಕ್ಕಾ, ಕರ್ನಾಟಕ ಯುವ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವಿಲ್ಸನ್ ದೊಡ್ಮನಿ, ಉಪಾಧ್ಯಕ್ಷ ಪ್ರಶಾಂತ್ ಹಿರೇಮನಿ, ಯುವ ಘಟಕ ಜಿಲ್ಲಾಧ್ಯಕ್ಷ ಗುರುದಾಸ, ಉಪಾಧ್ಯಕ್ಷ ಸ್ಯಾಮ್ಸನ್ ರೈತ ಘಟಕ ಅಧ್ಯಕ್ಷ ಪರಮೇಶ್ ರಾಜಗಿರಿ, ಸದಸ್ಯರು ರಜನಿಕಾಂತ್ ಹಪ್ಪಳಕರ, ಸಂಜು ಕುಮಾರ್, ಪ್ರಶಾಂತ ಹೀರೆಮನಿ ಹಾಗೂ ಅಲೆಮಾರಿ ಜನಾಂಗದ ಮುಖಂಡರಾದ ದುರ್ಗಪ್ಪಾ, ಶ್ಯಾಮ, ರಾಮಲೂ, ಪೀರು, ಸುಶಿಲಮ್ಮಾ , ಶಾಂತಮ್ಮ ಸೇರಿದಂತೆ ಮಹಿಳೆಯರು, ಮಕ್ಕಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...