ಆನ್ಲೈನ್ ನಲ್ಲಿ ಹಾಲು ಖರೀದಿ ವಿರೋಧಿ ಪ್ರಾಂತ ರೈತ ಸಂಘದಿಂದ ಪ್ರತಿಭಟನೆ

Date:

ಕೋಲಾರ: ಆನ್ಲೈನ್ ನಲ್ಲಿ ಒಂದು ರೂ ಹಾಲು ಮಾರಾಟ ಮತ್ತು ಇತರೆ ಕೃಷಿ ಉತ್ಪನ್ನಗಳ ಮಾರಾಟ ವಿರೋಧಿಸಿ ಹಾಗೂ 2002ರ ಸ್ಪರ್ಧಾ ಕಾಯ್ದೆಯಂತೆ ಭಾರತ ಸ್ಪರ್ಧಾ ಆಯೋಗವು ಕಾನೂನು ಬಾಹಿರ ಅನ್ಯಾಯದ ಸ್ಪರ್ಧೆಯನ್ನು ನಿಯಂತ್ರಿಸುವ ಕ್ರಮಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತೆಗೆದುಕೊಳ್ಳಲು ಒತ್ತಾಯಿಸಿ ಕರ್ನಾಟಕ ಪ್ರಾಂತ ರೈತ ಸಂಘ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಬುಧವಾರ ನಗರದ ತಹಶಿಲ್ದಾರ್ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಟಿ.ಯಶವಂತ್ ಮಾತನಾಡಿ ಕೋಟ್ಯಾಂತರ ಸಂಖ್ಯೆಯಲ್ಲಿ ರೈತರು, ಕೃಷಿ ಕೂಲಿಕಾರರು, ಮಹಿಳೆಯರು, ದಲಿತರು ಕೃಷಿಯ ಉಪಕಸಬಾಗಿ ಭಾರತದಲ್ಲಿ ಹೈನುಗಾರಿಕೆಯಲ್ಲಿ ತೊಡಗಿದ್ದಾರೆ. ಇದಲ್ಲದೆ ಕರ್ನಾಟಕದ ಕೆಎಂಎಫ್ ಅಡಿಯಲ್ಲಿ ಸುಮಾರು 25 ಲಕ್ಷಕ್ಕೂ ಹೆಚ್ಚು ಹಾಲು ಉತ್ಪಾದಕರು ಸಹಕಾರಿ ತತ್ವದ ಅಡಿಯಲ್ಲಿ ಹೈನುಗಾರಿಕೆಯಿಂದ ಜೀವನ ರೂಪಿಸಿಕೊಂಡಿದ್ದಾರೆ. ಪ್ರಾಥಮಿಕ ಸಹಕಾರಿ ಸಂಘಗಳು ಹಾಗು ಒಕ್ಕೂಟಗಳಲ್ಲಿ ಮತ್ತಿತರೆ ಡೈರಿ ಉತ್ಪನ್ನಗಳ ಉದ್ದಿಮೆಗಳಲ್ಲಿ ಲಕ್ಷಾಂತರ ಜನಕ್ಕೆ ಈ ಕ್ಷೇತ್ರ ಉದ್ಯೋಗ ಸೃಷ್ಟಿ ಮಾಡಿದೆ ಇದನ್ನು ನಾಶ ಮಾಡಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿದರು

ಇತ್ತೀಚಿನ ದಿನಗಳಲ್ಲಿ ಅಮೆಜಾನ್, ವಾಲ್‌ಮಾರ್ಟ್, ಪ್ಲಿಪ್ ಕಾರ್ಡ್ ಸೇರಿದಂತೆ ಹಲವು ಖಾಸಗಿ ಕಂಪನಿಗಳು ಆನ್‌ಲೈನ್ ಜಾಲದಲ್ಲಿ ಉತ್ಪಾದನಾ ವೆಚ್ಚಕ್ಕಿಂತ ಅತ್ಯಂತ ಕಡಿಮೆ ಬೆಲೆಗೆ ಕಾನೂನುಬಾಹಿರವಾಗಿ ಅನ್ಯಾಯದ ಸ್ಪರ್ಧೆಯಲ್ಲಿ ಪೈಪೋಟಿ ಗಿಳಿದು ನಂದಿನಿ ಬ್ರಾಂಡಿನ ಹಾಲನ್ನು ಒಂದು ರೂಗೆ ಒಂದು ಲೀಟರ್ ನಂತೆ ಹಾಲು ಮಾರಾಟ ಮಾಡುತ್ತಿರುವುದು ಕರ್ನಾಟಕದ ಲಕ್ಷಾಂತರ ಹೈನುಗಾರರನ್ನು ತೀವ ಆತಂಕಕ್ಕೆ ಗುರಿ ಮಾಡುತ್ತಿದೆ ಖಾಸಗಿ ಕಂಪನಿಗಳ ಈ ಅನ್ಯಾಯದ ಸ್ಪರ್ಧೆಯಲ್ಲಿ ಪೈಪೋಟಿದಾರರನ್ನು ದುರ್ಬಲಗೊಳಿಸುವುದು ಮಾತ್ರವಲ್ಲದೆ ಮುಂದೆ ಲಾಭದ ದೃಷ್ಟಿಯಿಂದ ಸಣ್ಣ ಮತ್ತು ಮಧ್ಯಮ ವರ್ಗದ ಗ್ರಾಹಕರ ಮೇಲಿನ ಮಾರುಕಟ್ಟೆ ಹಿಡಿತ ಸಾಧಿಸುವ ಮತ್ತು ಸರ್ಕಾರಿ ಸಹಕಾರಿ ಡೈರಿ ಉದ್ಯಮೆಯನ್ನು, ಹಾಲು ಉತ್ಪಾದಕರನ್ನು ನಾಶಗೊಳಿಸುವ ದುರುದ್ದೇಶವನ್ನು ಹೊಂದಿದೆ. ಇವುಗಳಿಗೆಲ್ಲಾ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೂಪಿಸಿರುವ ರೈತ ವಿರೋಧಿ ಕಾರ್ಪೊರೇಟ್ ಬೆಂಬಲಿತ ಖಾಸಗೀಕರಣದ ಆರ್ಥಿಕ ನೀತಿಗಳಾಗಿವೆ ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಪಿ.ಆರ್ ಸೂರ್ಯನಾರಾಯಣ ಮಾತನಾಡಿ ನೀತಿಗಳು, ಹಾಲು ಉತ್ಪಾದಕರ ಉತ್ಪಾದನಾ ವೆಚ್ಚವನ್ನು ವ್ಯಾಪಕವಾಗಿ ಹೆಚ್ಚಿಸಿದೆ ಮತ್ತು ಖಾಸಗಿ ಸಂಸ್ಥೆಗಳಿಗೆ ದೊಡ್ಡ ದೊಡ್ಡ ಫಾರಂಗಳಲ್ಲಿ ಹಾಲು ಉತ್ಪಾದಿಸಲು, ಖರೀದಿಸಲು ಮತ್ತು ಸ್ಪರ್ಧಾತ್ಮಕವಾಗಿ ಮಾರಾಟ ಮಾಡಲು ಅವಕಾಶನ ನೀಡಲಾಗಿದೆ. ಇದಕ್ಕಾಗಿ ಹಾಲು ಮತ್ತು ಹಾಲು ಉತ್ಪನ್ನಗಳ ಆದೇಶವನ್ನು ತಿದ್ದುಪಡಿ ಮಾಡಲಾಗಿದೆ ಮತ್ತು ಜಾನುವಾರು ಹತ್ಯೆ ನಿಷೇದ ತಿದ್ದುಪಡಿ ಕಾಯ್ದೆ ಮೂಲಕ ನಿರುಪಯುಕ್ತ ಜಾನುವಾರುಗಳನ್ನು ಮಾರಾಟ ಮಾಡಲು ಹೈನುಗಾರರಿಗಿದ್ದ ಅವಕಾಶಗಳನ್ನು ಮುಚ್ಚಲಾಗಿದೆ. ಇದೆಲ್ಲವೂ ಹಾಲು ಉತ್ಪಾದಕರ ಮೇಲಿನ ಹೊರೆ ಹೆಚ್ಚಿಸಿ ಉತ್ಪಾದನೆಯಿಂದ ಲಕ್ಷಾಂತರ ಬಡವರು ಹಿಂದೆ ಸರಿಯುವಂತೆ ಮಾಡಿದೆ ಎಂದರು

ಹಾಲಿಗೆ ಉತ್ಪಾದನಾ ವೆಚ್ಚವೂ ಬರುತ್ತಿಲ್ಲವಾದ್ದರಿಂದ ಹೈನುಗಾರರ ರಕ್ಷಣೆಗೆ ರಾಜ್ಯ ಸರಕಾರವೇ ಪ್ರತಿ ಲೀಟರ್ ಹಾಲಿಗೆ 5 ರೂ ನೆರವು ನೀಡುವಂತಾಗಿದೆ. ಪರಿಸ್ಥಿತಿ ಹೀಗಿರುವಾಗಲೆ ಭಾರತದ ಹೈನುಗಾರಿಕೆ ಮೇಲೆ ಮತ್ತೊಂದು ಬಲವಾದ ಹೊಡೆತ ನೀಡಿ ನಾಶ ಮಾಡಲು ಕೇಂದ್ರ ಸರಕಾರ ಅಮೆರಿಕ ಗ್ರೇಟರ್ ಬ್ರಿಟನ್, ನ್ಯೂಜಿಲ್ಯಾಂಡ್ ಮತ್ತಿತರ ರಾಷ್ಟ್ರಗಳು ಭಾರತದೊಂದಿಗೆ ತೆರಿಗೆ ರಹಿತ ವಾಣಿಜ್ಯ ಒಪ್ಪಂದಗಳನ್ನು ಮಾಡಿಕೊಂಡಿದೆ. ಈ ಮೂಲಕ, ಅಪಾರ ಸಹಾಯದನ ಮತ್ತು ಹೆಚ್ಚು ಇಳುವರಿ ಹೊಂದಿದ ವಿದೇಶಿ ಹಾಲು ಮತ್ತು ಹಾಲಿನ ಉತ್ಪನ್ನಗಳು ಭಾರತದ ಮಾರುಕಟ್ಟೆಯನ್ನು ಪ್ರವೇಶಿಸುವಂತಾಗಿದೆ ಎಂದರು

ಕರ್ನಾಟಕದಲ್ಲಿ ಹೈನುಗಾರಿಕೆ ಉಳಿವಿಗಾಗಿ ಲೀಟರ್ ಹಾಲಿಗೆ 50 ರೂ ನೀಡಬೇಕೆನ್ನುವ ಒತ್ತಾಯದಲ್ಲೂ ಅದನ್ನು ಈಡೇರಿಸಲು ಸಾಧ್ಯವಾಗದ ಕನಿಷ್ಠ ಉತ್ಪಾದನಾ ವೆಚ್ಚವನ್ನು ನೀಡಲು ಆಗದ ಮತ್ತು ಸಂಗ್ರಹಿಸಿದ ಹಾಲನ್ನು ಪೂರ್ಣವಾಗಿ ಮಾರಾಟ ಮಾಡಲು ಪ್ರಯಾಸ ಪಡುತ್ತಿರುವ ಇಂತಹ ತೀವು ಪರಿಸ್ಥಿತಿಯಲ್ಲಿ ಸಹಕಾರಿ ಹಾಲು ಒಕ್ಕೂಟವನ್ನು ತೀವ್ರ ಬಿಕ್ಕಟ್ಟಿಗೆ ದೂಡುವ ಇಂತಹ ವಾಲ್ ಮಾರ್ಟ್, ಅಮೆಜಾನ್, ಫ್ರಿಪ್ ಕಾರ್ಟ್ ಮಾರಾಟದ ಕುತಂತ್ರಗಳನ್ನು ತಕ್ಷಣ ನಿಲ್ಲಿಸಬೇಕೆಂದು ಹಾಗೂ ಕಾನೂನುಬಾಹಿರ ಅನ್ಯಾಯದ ಸ್ಪರ್ಧೆಯನ್ನು ಮಾಡುವ ಇಂತಹ ಸಂಸ್ಥೆಗಳ ಮೇಲೆ ನಿಯಂತ್ರಣ ಮಾಡಲು 2002ರ ಸ್ಪರ್ಧೆ ಕಾಯ್ದೆಯಲ್ಲಿ ಭಾರತ ಸ್ಪರ್ಧೆ ಆಯೋಗ ಕ್ರಮಗಳನ್ನು ತೆಗೆದುಕೊಳ್ಳಲಿ ಕರ್ನಾಟಕ ಪ್ರಾಂತ ರೈತ ಸಂಘ ಒತ್ತಾಯ ಮಾಡಿದರು.

ಇದನ್ನು ಓದಿದ್ದೀರಾ..? ಮಸೀದಿ ದರ್ಶನ ಕಾರ್ಯಕ್ರಮದ ಮೂಲಕ ಧರ್ಮ ಸೌಹಾರ್ದ ಸಂದೇಶ

ಪ್ರತಿಭಟನೆಯ ನೇತೃತ್ವವನ್ನು ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟೆ ನವೀನ್ ಕುಮಾರ್ ಜಿಲ್ಲಾ ಮುಖಂಡರಾದ ಗಂಗಮ್ಮ, ವಿ.ನಾರಾಯಣರೆಡ್ಡಿ, ಹೊಲ್ಲಂಬಳ್ಳಿ ವೆಂಕಟೇಶಪ್ಪ, ಮಾಲೂರು ವೆಂಕಟಪ್ಪ, ಸಿಂಗಪುರ್ ನಾರಾಯಣಸ್ವಾಮಿ, ಕೃಷ್ಣಪ್ಪ, ಬಂಗಾರಪೇಟೆ ಪಿ.ಶ್ರೀನಿವಾಸ್, ಸಿಆರ್ ಮೂರ್ತಿ, ರಂಗನಾಥ್, ಹೂಹಳ್ಳಿ ಸೋಮಶೇಖರಗೌಡ, ಜಿ.ಮಂಜುಳಾ, ರಾಜೇಂದ್ರ ಪ್ರಸಾದ್, ಅಪ್ಪಯಣ್ಣ, ಚಿನ್ನಕ್ಕ ವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...