ಮೈಸೂರು | ಚರಂಡಿ ಸ್ವಚ್ಛತೆಗಾಗಿ ಆಗ್ರಹಿಸಿ ಪ್ರತಿಭಟನೆ

Date:

ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲೂಕಿನ ಹಿರೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಹಿರೇಹಳ್ಳಿ ‘ ಬಿ ‘ ಗ್ರಾಮದ ಚರಂಡಿ ಸ್ವಚ್ಛತೆಗೆ ಆಗ್ರಹಿಸಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಗ್ರಾಮಸ್ಥರಾದ ರಾಜೇಗೌಡ ಮಾತನಾಡಿ ” ಪ್ರತಿ ಬಾರಿಯೂ ಮಳೆ ಬಂದಾಗ ಚರಂಡಿಯ ನೀರು ಮನೆಯ ಒಳಗಡೆ ನುಗ್ಗುವುದರಿಂದ ವಾಸ ಮಾಡುವುದೇ ಬಹಳ ಕಷ್ಟವಾಗಿದೆ. ಸಾಕಷ್ಟು ಬಾರಿ ಗ್ರಾಮ ಪಂಚಾಯಿತಿಯ ಗಮನಕ್ಕೆ ತಂದರು ಸಹ ಯಾವುದೇ ಸಮಸ್ಯೆ ಬಗೆಹರಿದಿಲ್ಲ, ಚರಂಡಿಯೂ ಸಂಪೂರ್ಣವಾಗಿ ಮುಚ್ಚಿ ಹೋಗಿರುವುದರಿಂದ ಮಳೆ ನೀರು ಹರಿದು ಹೋಗಲು ಜಾಗವೇ ಇಲ್ಲದಾಗಿದೆ. ಈ ಕೂಡಲೇ ಸಮಸ್ಯೆಯನ್ನು ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಗಮನಹರಿಸಬೇಕು, ಸರಿಪಡಿಸಬೇಕು. ಸರಾಗವಾಗಿ ಚರಂಡಿಯಲ್ಲಿ ನೀರು ಹರಿಯುವಂತೆ ವ್ಯವಸ್ಥೆ ಕಲ್ಪಿಸಬೇಕು ” ಎಂದು ಮನವಿ ಮಾಡಿದರು.

ಸಿದ್ದೇಗೌಡ ಮಾತನಾಡಿ ” ಗ್ರಾಮ ಪಂಚಾಯಿತಿ ಗ್ರಾಮದ ಸ್ವಚ್ಛತೆ ಕಡೆಗೆ ಗಮನ ಹರಿಸದೆ ಸಮಸ್ಯೆ ಹೀಗೆ ಮುಂದುವರೆದರೆ ಚರಂಡಿಯ ಕಸವನ್ನು ತೆಗೆದುಕೊಂಡು ಹೋಗಿ ಪಂಚಾಯತಿ ಮುಂದೆ ಸುರಿದು ಧರಣಿ ಮಾಡಬೇಕಾಗುತ್ತದೆ. ಇದಕ್ಕೂ ಭಾಗದಿದ್ದರೆ ತಾಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿಯವರೆಗೂ ಹೋಗಿ ಧರಣಿ ಮಾಡಬೇಕಾಗುತ್ತದೆ ” ಎಂದು ಎಚ್ಚರಿಕೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಂಗರಾಜು ಮಾತನಾಡಿ ” ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಕೇವಲ ತೆರಿಗೆ ಸಂಗ್ರಹಿಸಲು ಜನಗಳ ಬಳಿ ಬರುತ್ತಾರೆ ಹೊರತು ಜನಗಳ ಕಷ್ಟವನ್ನು ಆಲಿಸಲು ಬರುತ್ತಿಲ್ಲ.’ ಸ್ವಚ್ಛ ಭಾರತ್ ‘ ಹೆಸರಿನಲ್ಲಿ ನೂರಾರು ಕೋಟಿ ಖರ್ಚು ಮಾಡುವ ಸರ್ಕಾರಗಳು ಕೇವಲ ಪ್ರಚಾರ, ಜಾಹೀರಾತುಗಳಿಗೆ ಮಾತ್ರ ಸೀಮಿತವಾಗಿವೆ. ಸ್ವಚ್ಛತೆ, ಗ್ರಾಮ ನೈರ್ಮಲ್ಯದ ಕುರಿತು ಯಾವುದೇ ಗಮನ ಹರಿಸುತ್ತಿಲ್ಲ. ಈ ಹಿಂದೆಯೂ ಸಹ ಹಲವು ಬಾರಿ ಗಮನಕ್ಕೆ ತಂದರು ಸಹ ನಿರ್ಲಕ್ಷ ವಹಿಸುತ್ತಿದ್ದಾರೆ. ಇದರಿಂದಾಗಿ ಪ್ರತಿನಿತ್ಯ ಚರಂಡಿಯ ಅನೈರ್ಮಲ್ಯದಿಂದಾಗಿ ಜ್ವರ ,ವಾಂತಿ, ಭೇದಿ ರೋಗರುಜಿನಗಳು ಹೆಚ್ಚುತ್ತಿದ್ದು. ಚರಂಡಿಯ ನಿಂತ ನೀರಲ್ಲಿ ಸೊಳ್ಳೆಗಳು ಸಹ ಹೆಚ್ಚಾಗಿದೆ ಇದರಿಂದಾಗಿ ಜನ ಜೀವನ ಬಹಳ ಸಂಕಷ್ಟಮಯವಾಗಿದೆ. ಹಾಗಾಗಿ, ಈ ಕೂಡಲೇ ಸಂಬಂಧಪಟ್ಟ ಇಲಾಖೆ ಗಮನಹರಿಸಬೇಕೆಂದು ಆಗ್ರಹಿಸಿದರು. “

ಈ ಸುದ್ದಿ ಓದಿದ್ದೀರಾ? ಮೈಸೂರು | ಭಯದ ಬದುಕಲ್ಲಿ ಕಾಡಂಚಿನ ವಾಸಿಗಳು

ಹಿರೇಹಳ್ಳಿ ‘ ಬಿ ‘ ಗ್ರಾಮದ ಗ್ರಾಮಸ್ಥರುಗಳಾದ ರಂಗರಾಜು, ಎಸ್.ಯು.ಸಿ.ಐ (ಸಿ) ಸಂಘಟನೆಯ ಸುನಿಲ್ ಟಿ. ಆರ್ , ರಾಜೇಗೌಡ, ಉಮೇಶ್, ಸಿದ್ದೇಗೌಡ, ಶಿವನಂಜು, ನಾಗೇಶ, ಎಂ. ಹೆಚ್. ಗೌಡ, ಮಲ್ಲಿಗಮ್ಮ, ರಾಜಮ್ಮ, ಶಿವಮ್ಮ, ಗೌರಮ್ಮ, ತಾಯಮ್ಮ, ಗೀತಾ, ಮಲ್ಲಿಗಮ್ಮ, ಚಲುವಮ್ಮ, ನಾಗರಾಜೇಗೌಡ, ಜಯರಾಮ್, ಮಾದೇವ ಸೇರಿದಂತೆ ಇನ್ನಿತರರು ಪ್ರತಿಭಟನೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...