ರಾಜ್ಯದಲ್ಲಿ ಸಂಪೂರ್ಣ ಒಳಮೀಸಲಾತಿ ಜಾರಿ ಮಾಡುವಂತೆ ಹಾಗೂ ರಾಜ್ಯಪಾಲರು ಒಳಮೀಸಲಾತಿ ವಿಧೇಯಕಕ್ಕೆ ಅಂಕಿತ ಹಾಕುವಂತೆ ಒತ್ತಾಯಿಸಿ ಮಾದಿಗ ಸಮುದಾಯದ ಸಂಘಟನೆಗಳು ಪ್ರತಿಭಟನೆ ನಡೆಸಿದರು.
ಮಂಡ್ಯ ನಗರದ ಸಂಜಯ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪಾದಯಾತ್ರೆ ನಡೆಸಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ. ಮಹದೇವಪ್ಪ ವಿರುದ್ಧ ಘೋಷಣೆ ಕೂಗಿದರು, ಒಳಮೀಸಲಾತಿ ಜಾರಿ ಮಾಡದೆ ಅನ್ಯಾಯ ಮಾಡುತ್ತಿದ್ದಾರೆಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಕರ್ನಾಟಕ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ರಾಜ್ಯ ಉಪಾಧ್ಯಕ್ಷರಾದ ಎನ್.ಆರ್. ಚಂದ್ರಶೇಖರ್ ಮಾತನಾಡಿ, ಸಂವಿಧಾನದ ಆಶಯದಂತೆ ಪರಿಶಿಷ್ಟರು ಮೀಸಲಾತಿ ಹಂಚಿಕೊಳ್ಳಲು ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಕೂಡಲೇ ಅಂಕಿತ ಹಾಕಬೇಕು ಎಂದು ಒತ್ತಾಯಿಸಿದರು.
ರಾಜ್ಯ ಸರ್ಕಾರ ಈಗಾಗಲೇ ಆದೇಶ ಮಾಡಿರುವಂತೆ ಜಿಲ್ಲಾಡಳಿತ ಹಾಗೂ ತಹಶೀಲ್ದಾರ್ ಗಳು ಪರಿಶಿಷ್ಟ ಜಾತಿ ಮಾದಿಗ ಜನಾಂಗಕ್ಕೆ ಪ್ರವರ್ಗ-ಎ ಮಾದಿಗ ಎಂದೇ ಜಾತಿ ದೃಡೀಕರಣ ಪತ್ರ ನೀಡಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಏಪ್ರಿಲ್.28ರಂದು ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಬ್ಯಾರಿ ಸಾಹಿತ್ಯ ಸಮ್ಮೇಳನ
ಪ್ರತಿಭಟನೆಯಲ್ಲಿ ಮಾದಿಗ ಒಳಮೀಸಲಾತಿ ಹೋರಾಟ ಸಮಿತಿ ಜಿಲ್ಲಾ ಅಧ್ಯಕ್ಷ ಸಿ.ಕೆ. ಪಾಪಯ್ಯ, ಮಾದರ ಮಹಾಸಭಾದ ಜಿಲ್ಲಾಧ್ಯಕ್ಷ ಕಾಂತರಾಜು, ಮುಖಂಡರಾದ ಬಿ. ಕೃಷ್ಣ, ಹೆಚ್.ಎಂ. ಪುಟ್ಟರಾಜು, ಜಿಪಂ ಮಾಜಿ ಅಧ್ಯಕ್ಷ ಕುಮಾರ್, ಚಾಮನಹಳ್ಳಿ ಮಂಜು, ಬಾಳೆಹೊನ್ನಿಗೆ ಕುಮಾರ್, ಕನ್ನಲಿ ಕೆಂಪಯ್ಯ, ಗೋವಿಂದಯ್ಯ, ಶಂಭುನಳ್ಳಿ ರವಿಕುಮಾರ್, ಚಿಕ್ಕಲಿಂಗಯ್ಯ, ಬಿಜಿ ಪುರ, ಮಂಜು, ಪುಟ್ಟರಾಜು ಕಡಬ, ರಂಜಿತ್, ಸ್ವಾಮಿ ಎಲೆಚಾಕನಹಳ್ಳಿ, ಎಂ. ಪಿ. ಚಂದ್ರಶೇಖರ್, ಹುಲಿವಾನ ಅಂಬುಜಿ, ಬಸರಾಳು ಶ್ರೀನಿವಾಸ್, ಹಂಪಾಪುರ ಶಿವಭೋರ, ಪ್ರಸನ್ನ, ಸಿ.ಬಿ. ಬೋರಯ್ಯ, ರಾಚಯ್ಯ, ಮಲ್ಲೇಶ್, ಚಂದ್ರು, ಸುರೇಶ್, ಉಮೇಶ್ ಹಾಗೂ ಶಿವಕುಮಾರ್ ಸೇರಿದಂತೆ ಹಲವರು ಇದ್ದರು.





