ಕೊಡಗು | ಬಡ ವರ್ಗಕ್ಕೆ ನಿವೇಶನ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Date:

ಕೊಡಗು ಜಿಲ್ಲೆ, ಮಡಿಕೇರಿಯಲ್ಲಿ ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ನೇತೃತ್ವದಲ್ಲಿ ಬಡ ವರ್ಗದ ಜನರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಜಾಥಾ ನಡೆಸಿದರು.

ಕೊಡಗಿನಲ್ಲಿರುವ ಆದಿವಾಸಿ, ಬುಡಕಟ್ಟು, ದಲಿತ, ಶೋಷಿತ ಬಡ ವರ್ಗದ ಕುಟುಂಬಗಳಿಗೆ ನಿವೇಶನವಿಲ್ಲಾ ಹಾಗೇ ಭೂಮಿ ಸಹ ಇಲ್ಲ. ಜಿಲ್ಲಾಡಳಿತ, ಸರ್ಕಾರ, ಜನ ಪ್ರತಿನಿಧಿಗಳು ಮತದ ಸರಕಾಗಿ ಕಂಡರೆ ವಿನಃ ಬಡ ವರ್ಗಕ್ಕೆ ನ್ಯಾಯ ಸಲ್ಲಿಸುವುಲ್ಲಿ ವಿಫಲರಾಗಿದ್ದಾರೆ.

ಅದರಲ್ಲೂ, ಇಲ್ಲಿಯೇ ಹುಟ್ಟಿ ಬೆಳೆದು, ನೆಲ ಮೂಲದವರಾಗಿ ಇರಲು ಜಾಗವಿಲ್ಲ, ಸೂರಿಲ್ಲ, ಸತ್ತರೆ ಹೂಣಲು ಜಾಗವಿಲ್ಲ ಎನ್ನುವುದು ನಿಜಕ್ಕೂ ದೌರ್ಭಾಗ್ಯ. ಸರ್ಕಾರಗಳು, ಸ್ಥಳೀಯ ಆಡಳಿತ ಮನುಷ್ಯರಂತೆಯು ಕಾಣದೆ ಹೀನವಾಗಿ ನಡೆಸಿಕೊಳ್ಳುತ್ತಿರುವುದು ವಿಷಾಧನಿಯ ಸಂಗತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡವರಿಗೆ ನಿಜವಾಗಿ ಸಲ್ಲಬೇಕಿದ್ದ ಸವಲತ್ತುಗಳು ಇದುವರೆಗೂ ದೊರೆಯದಿರುವುದು ದುರಂತ. ಸಂವಿಧಾನ ಎಲ್ಲರಿಗೂ ಬದುಕುವ, ತಮ್ಮ ತಮ್ಮ ಹಕ್ಕುಗಳನ್ನು ಪಡೆಯುವ, ಮೂಲಭೂತ ಸೌಕರ್ಯ ಪಡೆಯುವ ಹಕ್ಕುಳ್ಳವರಾಗಿದ್ದರು ಸಹ. ರಾಜಕೀಯ ಮೇಲಾಟಗಳಿಂದ ಬಡ ಜನತೆ ನಲುಗಿ ಹೋಗಿದ್ದಾರೆ.

ಕೊಡಗಿನಲ್ಲಿ ಎಷ್ಟೇ ಹೋರಾಟ, ಪ್ರತಿಭಟನೆ ನಡೆಸಿದರು ಅಧಿಕಾರಿಗಳಿಗೆ ಕಿವಿ ಕೇಳಿಸಲ್ಲ, ಸರ್ಕಾರಗಳು ಕುರುಡಾಗಿವೆ. ಬಡ ವರ್ಗಕ್ಕೆ ಕನಿಷ್ಠ ನಿವೇಶನ, ಸೂರು ಕಲ್ಪಿಸಲಾಗದೆ. ಜಾಣ ಕುರುಡರಾಗಿ ವರ್ತನೆ ತೋರುತ್ತಾ, ನಿರ್ಲಕ್ಷ್ಯದಿಂದ ಕಾಣುತ್ತಿರುವುದು ನಾಗರೀಕ ಸಮಾಜ ತಲೆ ತಗ್ಗಿಸುವಂತದ್ದು.

ರಾಜ್ಯಾಧ್ಯಕ್ಷ ಮಾರಾಸಂದ್ರ ಮುನಿಯಪ್ಪ ಮಾತನಾಡಿ ” ಕೊಡಗಿನಲ್ಲಿ ಬಡ ಜನರಿಗೆ ನಿರಂತರವಾಗಿ ಅನ್ಯಾಯವಾಗಿದ್ದು ಇದುವರೆಗೆ
ಒಂದೇ ಒಂದು ಸವಲತ್ತು ಸಿಗಲಿಲ್ಲ. ಎಲ್ಲಾ ಅವಕಾಶಗಳಿಂದ ವಂಚಿತರಾಗಿದ್ದು ನಿವೇಶನಕ್ಕಾಗಿ, ಸೂರಿಗಾಗಿ ನಿರಂತರ ಪ್ರತಿಭಟನೆ ಮಾಡಬೇಕಾದ ಪರಿಸ್ಥಿತಿ. ಸರ್ಕಾರಗಳು ಜನಪರ ಯೋಜನೆ ತರುವಾಗ ಬಡವರಿಗೆ ಭೂಮಿ ಭಾಗ್ಯ, ವಸತಿ, ನಿವೇಶನದಂತ ಅತ್ಯಗತ್ಯ ಸವಲತ್ತು ಕಲ್ಪಿಸುವಲ್ಲಿ ವಿಫಲವಾಗಿವೆ. ಸರ್ಕಾರಗಳು ಕೇಂದ್ರ ಆಗಲಿ, ರಾಜ್ಯ ಸರ್ಕಾರ ಆಗಲಿ ಎಲ್ಲರಿಗೂ ಸೂರು ಕಲ್ಪಿಸುವ ಗುರಿ ಹೊಂದಿದ್ದರು ಕೊಡಗಿನಲ್ಲಿ ಮಾತ್ರ ಈಡೇರಲಿಲ್ಲ.

ಜನಪ್ರತಿನಿದಿಗಳು ಮತ ಪಡೆದರು ಹೊರತು ಬಡ ಜನರ ಹಿತ ಕಾಪಾಡಲಿಲ್ಲ. ಜನರ ಕಷ್ಟಕ್ಕೆ ಸ್ಪಂದಿಸದೆ ಕೊಡಗಿನಲ್ಲಿ ವ್ಯಾಪಕವಾಗಿ ಬಡ ಕುಟುಂಬಗಳು ನಿವೇಶನ ಇರದೆ ಲೈನ್ ಮನೆ ಜೀತ ಮಾಡುತ್ತಿವೆ. ಅಲ್ಲಲ್ಲಿ ಪ್ಲಾಸ್ಟಿಕ್ ಹೊದಿಕೆಯಲ್ಲಿ ಜೀವನ ನಡೆಸುತ್ತಿವೆ ” ಎಂದು ವಿಷಾಧ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಬರಹದಲ್ಲಿ ವಾಸ್ತವ ತೆರೆದಿಟ್ಟವರು ಪೂರ್ಣಚಂದ್ರ ತೇಜಸ್ವಿ : ಡಾ. ತ್ರಿವೇಣಿ ಅಭಿಮತ

ಪಕ್ಷದ ಮುಖಂಡರಾದ ಎಂ ಗೋಪಿನಾಥ್, ವೆಂಕಟ ಗಿರಿಯಯ್ಯ, ಕೆ ಮೊಣ್ಣಪ್ಪ, ಮಹೇಶ್, ಕಿರಣ್ ಜಗದೀಶ್,ರಂಜಿತ್, ಪುನೀತ್ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...