ಮೈಸೂರು | ಕೇಂದ್ರ ಗ್ರಂಥಾಲಯಕ್ಕೆ ಮೂಲಭೂತ ಸೌಕರ್ಯ ಒದಗಿಸುವಂತೆ ಪ್ರತಿಭಟನೆ

Date:

ಎಐಡಿವೈಓ ಮತ್ತು ಸಾರ್ವಜನಿಕ ಗ್ರಂಥಾಲಯದ ಓದುಗರ ಬಳಗದಿಂದ ಗ್ರಂಥಾಲಯದ ಮೂಲಭೂತ ಸೌಕರ್ಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು.

ಮೈಸೂರಿನ ಕುವೆಂಪು ನಗರದಲ್ಲಿರುವ ಸರ್ಕಾರಿ ಸಾರ್ವಜನಿಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಪ್ರತಿದಿನ ನೂರಾರು ಜನ ವಿದ್ಯಾರ್ಥಿಗಳು ಮತ್ತು ನಾಗರಿಕರು ಓದುತ್ತಾರೆ. ಆದರೆ, ಈ ಗ್ರಂಥಾಲಯದಲ್ಲಿ ಮೂಲಭೂತ ಅವಶ್ಯಕತೆಗಳ ಕೊರತೆ ಎದ್ದು ಕಾಣುತ್ತಿದೆ. ಅವಶ್ಯಕತೆಗೆ ತಕ್ಕಂತೆ ಕುಡಿಯುವ ನೀರು, ಶೌಚಾಲಯದ ವ್ಯವಸ್ಥೆ ಮತ್ತು ನಿರ್ವಹಣೆ ಇಲ್ಲದಿರುವುದರಿಂದ ಓದುಗರು ದಿನನಿತ್ಯ ಕಷ್ಟಪಡುವಂತಾಗಿದೆ. ಸಮಾಜದಲ್ಲಿ ಓದುಗರ ಸಂಖ್ಯೆ ಕ್ರಮೇಣ ಕ್ಷೀಣಿಸುತ್ತಿರುವುದು ವಿಷಯವೇ. ಇದರ ಮಧ್ಯೆಯೂ ನೂರಾರು ಜನ ಗ್ರಂಥಾಲಯಕ್ಕೆ ಬಂದು ಓದುತ್ತಿರುವುದನ್ನು ಗುರುತಿಸಿ ಪ್ರೋತ್ಸಾಹಿಸುವ ಕೆಲಸವಾಗಬೇಕು.

ಸಾರ್ವಜನಿಕರ ಹಣದಲ್ಲಿ ಸರ್ಕಾರಿ ಗ್ರಂಥಾಲಯ ತೆರೆದ ಮೇಲೆ ಅದಕ್ಕೆ ಬೇಕಾಗುವ ಮೂಲಭೂತ ಅವಶ್ಯಕತೆಗಳನ್ನು ಪೂರೈಸುವುದು ಇಲಾಖೆಯದ್ದೇ ಕರ್ತವ್ಯ ಮತ್ತು ಜವಾಬ್ದಾರಿ. ಹಾಗಾಗಿ, ಜ್ಞಾನಾರ್ಜನೆಗಾಗಿ ಬರುವ ಓದುಗರಿಗೆ ಉತ್ತಮ ವಾತಾವರಣ ನಿರ್ಮಿಸಲು ಮತ್ತು ಮೂಲಭೂತ ಸೌಕರ್ಯಗಳನ್ನು ಒದಗಿಸಲು ಈ ಕೂಡಲೇ ಕ್ರಮ ಕೈಗೊಳ್ಳಬೇಕಾಗಿ ಒಕ್ಕೊರಲಿನಿಂದ ಒತ್ತಾಯಿಸುತ್ತೇವೆ ಎಂದು ಎಐಡಿವೈಓ ಜಿಲ್ಲಾ ಅಧ್ಯಕ್ಷ ಟಿ. ಆರ್. ಸುನಿಲ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಂಥಾಲಯದ ಓದುಗರಾದ ಶಿವಾನಂದ ಮಾತನಾಡಿ, ‘ಈ ಹಿಂದೆ ವಾಟರ್ ಪ್ಯೂರಿಫೈಯರ್‌ನ್ನು ನಮ್ಮ ಹಣದಲ್ಲೇ ರಿಪೇರಿ ಮಾಡಿಸಿದ್ದೆವು. ಅದು ಮತ್ತೆ ದುರಸ್ತಿಗೆ ಬಂದಿದೆ. ಗ್ರಂಥಾಲಯದ ಹೊರಾಂಗಣದಲ್ಲಂತೂ ಕಳೆ ಬೆಳೆದು ಕಸದ ತೊಟ್ಟಿಯಂತಾಗಿದೆ. ಅಲ್ಲಿ ಕುಳಿತು ಊಟ ಮಾಡಲು ಕೂಡ ಒಂದು ವ್ಯವಸ್ಥೆ ಇಲ್ಲ. ಈ ಸಮಸ್ಯೆಗಳನ್ನು ಪರಿಹರಿಸಬೇಕು’. ‘ನಮ್ಮಿಂದ ಸಂಗ್ರಹಿಸುವ ತೆರಿಗೆಯಲ್ಲಿ ಗ್ರಂಥಾಲಯ ಸೆಸ್ ಅನ್ನು ತೆಗೆದುಕೊಳ್ಳಲಾಗುತ್ತದೆ . ಸರಿಯಾದ ಸಂದರ್ಭಕ್ಕೆ ಲೈಬ್ರರಿಗಳ ಅಭಿವೃದ್ಧಿಗೆ ಬಿಡುಗಡೆ ಮಾಡಿದರೆ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ’ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ?ಟಿ ನರಸೀಪುರ | ಭತ್ತ ಖರೀದಿ ಕೇಂದ್ರ ತೆರೆಯುವಂತೆ ಆಗ್ರಹಿಸಿದ ರೈತ ಸಂಘ

ಗ್ರಂಥಪಾಲಕರಿಗೆ ಮತ್ತು ಉಪನಿರ್ದೇಶಕರಿಗೆ ಮನವಿ ಸಲ್ಲಿಸಲಾಯಿತು. ಉಪ ನಿರ್ದೇಶಕರಾದ ಬಿ ಮಂಜುನಾಥ್ ಮನವಿ ಸ್ವೀಕರಿಸಿ, ಎರಡು ವಾರದೊಳಗೆ ಹೊಸ ನೀರಿನ ಘಟಕವನ್ನು ಸ್ಥಾಪಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುತ್ತೇವೆ. ಶೌಚಾಲಯಗಳ ದುರಸ್ತಿ ಹಾಗೂ ಹೊರಾಂಗಣದಲ್ಲಿ ಬೆಳೆದಿರುವ ಗಿಡ ಗಂಟಿಗಳನ್ನು ಸ್ವಚ್ಛಗೊಳಿಸಲು ಕೂಡಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.

ವಿಶೇಷ ಸುದ್ದಿ ಓದಿದ್ದೀರಾ? ಶ್ರೀರಂಗಪಟ್ಟಣ | ಪುರಾತತ್ವ ಇಲಾಖೆಯ ನಿರ್ಲಕ್ಷ್ಯ; ಕೋಟೆ ಪ್ರದೇಶದಲ್ಲಿ ನಿಯಮ ಉಲ್ಲಂಘನೆಯ ಆರೋಪ

ಪ್ರತಿಭಟನೆಯಲ್ಲಿ ಎಸ್. ಸುಮ, ಜಿಲ್ಲಾ ಕಾರ್ಯದರ್ಶಿ ನೀತುಶ್ರೀ, ಪೂರ್ಣಿಮಾ, ರಣಜಿತ್, ಓದುಗರಾದ ಅನುಪ್, ಮೌನೇಶ್, ರವಿ, ವೀರೇಶ್, ಮೇಘ, ಮಾಲ, ಮಮತಾ ಸೇರಿದಂತೆ ಇನ್ನಿತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...