ಧರ್ಮಸ್ಥಳ ಧರ್ಮಾಧಿಕಾರಿ ಪರ ಪ್ರತಿಭಟನೆ; ಸೌಜನ್ಯ ಕುಟುಂಬದ ಮೇಲೆ ಹಲ್ಲೆಗೆ ಯತ್ನ

Date:

ಸೌಜನ್ಯ ಪ್ರಕರಣದಲ್ಲಿ ಧರ್ಮಸ್ಥಳ ಟ್ರಸ್ಟ್‌ ವಿರುದ್ಧ ಅವಹೇಳನ ಮಾಡಲಾಗುತ್ತಿದೆ ಎಂದು ಆರೋಪಿ, ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಪರವಾಗಿ ಧರ್ಮಸ್ಥಳದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿವೆ. ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ ಕುಸುಮಾವತಿ ‘ಜಸ್ಟಿಸ್‌ ಫಾರ್ ಸೌಜನ್ಯ’ ಎಂಬ ಪ್ಲೆಕಾರ್ಡ್‌ ಹಿಡಿದು ಕಾಣಿಸಿಕೊಂಡಿದ್ದಾರೆ. ಅವರು ಮತ್ತು ಸೌಜನ್ಯ ಸಹೋದರ ಸುಭಾಷ್‌ ಚಂದ್ರ ಮೇಲೆ ಪ್ರತಿಭಟನಾನಿರತನೊಬ್ಬ ಹಲ್ಲೆ ಮಾಡಲು ಯತ್ನಿಸಿದ್ದಾನೆ.

ಹನ್ನೊಂದು ವರ್ಷಗಳ ಹಿಂದೆ ನಡೆದ ಸೌಜನ್ಯ ಪ್ರಕರಣದ ಹೋರಾಟ ಮತ್ತೆ ಮುನ್ನೆಲೆಗೆ ಬಂದಿದೆ. ಮೂವರು ಜೈನ್‌ಗಳು ಸೌಜನ್ಯಳನ್ನು ಅತ್ಯಾಚಾರಗೈದು ಕೊಲೆ ಮಾಡಿದ್ದಾರೆಂದು ಸೌಜನ್ಯ ಕುಟುಂಬ ಮೊದಲಿನಿಂದಲೂ ಆರೋಪಿಸುತ್ತಾ ಬಂದಿದೆ. ಇದೀಗ, ರಾಜ್ಯಾದ್ಯಂತ ಹೋರಾಟ ನಡೆಯುತ್ತಿರುವ ಬೆನ್ನಲ್ಲೇ, ಧರ್ಮಸ್ಥಳದ ಅವಹೇಳನವಾಗುತ್ತಿದೆಯೆಂದು ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗಡೆ ಆರೋಪಿಸಿದ್ದಾರೆ. ಅವರ ಬೆಂಬಲಿಗರು ಶುಕ್ರವಾರ ಪ್ರತಿಭಟನೆ ನಡೆಸಿದ್ದಾರೆ.

ಪ್ರತಿಭಟನೆಯಲ್ಲಿ ಸೌಜನ್ಯ ತಾಯಿ, ‘ತನ್ನ ಮಗಳಿಗೆ ನ್ಯಾಯ ಬೇಕು’ ಎಂದು ವೇದಿಕೆ ಮುಂಭಾಗದಲ್ಲಿ ಘೋಷಣೆ ಕೂಗಿದ್ದಾರೆ. ಈ ವೇಳೆ, ಧರ್ಮಾಧಿಕಾರಿ ಬೆಂಬಲಿಗನೊಬ್ಬ ಪೊಲೀಸರ ಮುಂದೆಯೇ ಸುಭಾಷ್‌ ಚಂದ್ರ ಅವರ ಶರ್ಟ್‌ ಕುತ್ತಿಗೆ ಪಟ್ಟಿ ಹಿಡಿದು ಎಳೆದಾಡಲು ಯತ್ನಿಸಿದ್ದಲ್ಲದೆ, ಬೆರಳು ತೋರಿಸಿ ಬೆದರಿಕೆ ಒಡ್ಡಿದ್ದಾನೆ. ಇದೇ ವ್ಯಕ್ತಿ ಬೆಂಗಳೂರಿನಲ್ಲಿ ಸೌಜನ್ಯ ಪರ ನಡೆದ ಪ್ರತಿಭಟನೆಯಲ್ಲಿ ಸೌಜನ್ಯ ಸೋದರಮಾವ ವಿಠಲ್‌ ಮೇಲೂ ಹಲ್ಲೆಗೆ ಯತ್ನಿಸಿದ್ದ ಎಂದು ಆರೋಪಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
Dharmastala

ಮಾಧ್ಯಮದವರೊಂದಿಗೆ ಮಾತನಾಡಿದ ಸೌಜನ್ಯ ತಾಯಿ ಕುಸುಮಾವತಿ, “ಇಲ್ಲಿ ನೆರೆದಿರುವವರು ಸೌಜನ್ಯಳಿಗೆ ನ್ಯಾಯ ದೊರೆಯಬೇಕೆಂದು ಹೋರಾಟ ಮಾಡುತ್ತಿಲ್ಲ. ಇದು ಸೌಜನ್ಯ ಪರ ಹೋರಾಟವಲ್ಲ. ಇಲ್ಲಿ ಯಾರೂ ಸೌಜನ್ಯ ಪರ ಪ್ಲೆಕಾರ್ಡ್‌ ಹಿಡಿದಿಲ್ಲ. ಘೋಷಣೆ ಕೂಗಿಲ್ಲ. ಸೌಜನ್ಯ ಪ್ರಕರಣ ದೇಶದ ಗಮನ ಸೆಳೆಯುತ್ತಿದೆ. ಧರ್ಮಸ್ಥಳದಲ್ಲಿ ನಡೆಯುತ್ತಿರುವ ಅನ್ಯಾಯಗಳು ಜಗತ್ತಿಗೆ ಗೊತ್ತಾಗುತ್ತದೆ ಎಂಬ ಕಾರಣಕ್ಕೆ ನಮ್ಮ ಹೋರಾಟವನ್ನು ಹತ್ತಿಕ್ಕುವ ಉದ್ದೇಶದಿಂದ ಈ ಹೋರಾಟ ನಡೆಸುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಸೌಜನ್ಯ ಪರ ಹೋರಾಟಗಾರರು ಧರ್ಮಾಧಿಕಾರಿಯ ಹೆಸರು ಹೇಳುತ್ತಿಲ್ಲ. ಧರ್ಮಸ್ಥಳದಲ್ಲಿ ನಡೆದ ಘಟನೆಗೆ ಧರ್ಮಸ್ಥಳದ ಹೆಸರು ಹೇಳದೆ, ಇನ್ಯಾವ ಹೆಸರು ಹೇಳಬೇಕು. ನಾವು ಧರ್ಮಸ್ಥಳದವರೇ, ಧರ್ಮಸ್ಥಳದಲ್ಲಿಯೇ ಹುಟ್ಟಿ-ಬೆಳೆದ ಹೆಣ್ಣುಮಗುವನ್ನು ಅತ್ಯಾಚಾರಗೈದು, ಕೊಲೆ ಮಾಡಿದ್ದಾರೆ. ನಮಗೆ ನ್ಯಾಯ ಬೇಕು. ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಇಲ್ಲಿ ನೆರೆದಿರುವವರು ನಮ್ಮ ಹೋರಾಟಕ್ಕೆ ಬೆಂಬಲ ನೀಡಬೇಕೆಂದಷ್ಟೇ ನಾವು ಕೇಳುತ್ತಿದ್ದೇವೆ” ಎಂದು ಹೇಳಿದ್ದಾರೆ.

“ನನ್ನ ಮಗಳಿಗೆ ಅನ್ಯಾಯ ಆಗಿದೆ. ನಾನು ನ್ಯಾಯ ಕೇಳುವುದು ತಪ್ಪೇ. ನಾವು ಶಂಕಿಸಿರುವ ಮೂವರ ವಿರುದ್ಧ ತನಿಖೆ ಮಾಡಲಿ. ಸರ್ಕಾರ ಎಸ್‌ಐಟಿ ರಚಿಸಿ, ಪ್ರಕರರಣವನ್ನು ಮರುತನಿಖೆ ಮಾಡಬೇಕು. ಅಪರಾಧಿಗಳಿಗೆ ಶಿಕ್ಷೆಯಾಗಬೇಕು. ಆಗ ಧರ್ಮಸ್ಥಳದಲ್ಲಿ ನನ್ನ ಮಗಳ ಮೇಲಾದ ಕೃತ್ಯ, ಮತ್ತೊಬ್ಬ ಹೆಣ್ಣು ಮಗಳ ಮೇಲಾಗದಂತೆ ತಡೆಯಬಹುದು. ಧರ್ಮಸ್ಥಳದ ಹೆಸರು ಹಾಳಾಗದಂತೆಯೂ ತಡೆಯಬಹುದು” ಎಂದು ಕುಸುಮಾವತಿ ಹೇಳಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸೌಜನ್ಯ ಸಹೋದರ ಸುಭಾಷ್‌ ಚಂದ್ರ, “ಸೌಜನ್ಯಳನ್ನು ಹಂತಕರು ಕೊಂದು 11 ವರ್ಷಗಳಾಗಿವೆ. ಇಂದಿಗೂ ನ್ಯಾಯ ಸಿಕ್ಕಿಲ್ಲ. ನಮ್ಮ ಕುಟುಂಬಕ್ಕೂ ಅನ್ಯಾಯ ಆಗಿದೆ. ನ್ಯಾಯ ಕೇಳಲು ಹೋದರೆ, ನಮ್ಮ ಮೇಲೆಯೇ ಹಲ್ಲೆ ಮಾಡುತ್ತಿದ್ದಾರೆ. ನಾವೇನು ತಪ್ಪು ಮಾಡಿದ್ದೇವೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...