ಮತದಾರರು ಎಚ್ಚೆತ್ತುಕೊಳ್ಳದಿದ್ದರೆ ದುಷ್ಟರು ಅಧಿಕಾರಕ್ಕೆ ಬರುತ್ತಾರೆ: ವಿಜಯಮ್ಮ

Date:

ದೇಶದ ಮತದಾರರು ಎಚ್ವೆತ್ತುಕೊಳ್ಳದಿದ್ದರೆ, ಮತ್ತೆಮತ್ತೆ ದುಷ್ಟರೇ ಅಧಿಕಾರಕ್ಕೆ ಬರುತ್ತಾರೆ. ಇನ್ನಾದರೂ ಮತದಾರರು ಎಚ್ಚೆತ್ತುಕೊಳ್ಳಬೇಕು. ನೊಂದಿರುವ ಕುಸ್ತಿಪಟುಗಳು ಐದು ದಿನ ಗಡುವು ಕೊಟ್ಟು ಮೌನ ಕಾಯ್ದುಕೊಂಡಿದ್ದಾರೆ. ಆದರೆ, ಆ ಗಡುವು ಮೀರಿದ ನಂತರ ಸಂತ್ರಸ್ತ ಹೆಣ್ಣುಮಕ್ಕಳು ಅವರ ಸ್ವರವನ್ನು ಕಳೆದುಕೊಳ್ಳದ ರೀತಿಯಲ್ಲಿ ನಾವು ಬೆಂಬಲ ಕೊಡಬೇಕು. ಶಕ್ತಿತುಂಬಿ ಮಹಿಳಾ ಕುಸ್ತಿಪಟುಗಳ ಹೋರಾಟವನ್ನು ಯಶಸ್ವಿ ಮಾಡಬೇಕು ಎಂದು ಹಿರಿಯ ಲೇಖಕಿ ವಿಜಯಮ್ಮ ಹೇಳಿದ್ದಾರೆ.

ದೆಹಲಿಯಲ್ಲಿ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಮಹಿಳಾ ಕುಸ್ತಿಪಟುಗಳು ಕಳೆದ ಒಂದು ತಿಂಗಳಿಂದ ಹೋರಾಟ ನಡೆಸುತ್ತಿದ್ದಾರೆ. ಅವರ ಹೋರಾಟವನ್ನು ಬೆಂಬಲಿಸಿ, ಬೆಂಗಳೂರಿನಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಪ್ರತಿಭಟನೆಯಲ್ಲಿ ವಿಜಯಮ್ಮ ಮಾತನಾಡಿದರು.

ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಸಿಐಟಿಯು ಮುಖಂಡ ಮಹಂತೇಶ್, “ದೆಹಲಿಯಲ್ಲಿ ರೈತರು ನಡೆಸಿದ ಐತಿಹಾಸಿಕ ಹೋರಾಟದ ಸಂದರ್ಭದಲ್ಲೇ ಪ್ರಧಾನಿ ನರೇಂದ್ರ ಮೋದಿ ಒಮ್ಮೆಯೂ ಮನ್ ಕಿ ಬಾತ್‌ನಲ್ಲಿ ಮಾತಾಡಿಲ್ಲ. ಇನ್ನು ಬೇಟಿ ಬಚಾವೋ ಬಗ್ಗೆ ಎಲ್ಲಿ ಮಾತಾಡುತ್ತಾರೆ. ಮಹಿಳಾ ಕುಸ್ತಿಪಟುಗಳು ತಮ್ಮ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಬ್ರಿಬ್ ಭೂಷಣ್ ಸಿಂಗ್‌ ಎಂಬಾತನನ್ನ ಬಂಧಿಸಿ, ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಆದರೆ, ತಮ್ಮ ಸಂಸದನನ್ನು ಅಧಿಕಾರದಿಂದ ಕೆಳಗಿಳಿಸಲು, ತನಿಖೆಗೆ ಒಳಪಡಿಸಲು ಪ್ರಧಾನಿಗೆ ನೈತಿಕತೆಯಿಲ್ಲ” ಎಂದು ಕಿಡಿಕಾರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಿಪಿಐಎಂ ಮುಖಂಡೆ ಕೆ.ಎಸ್ ವಿಮಲಾ ಮಾತನಾಡಿ, “ಕುಸ್ತಿಪಟುಗಳ ಬೀದಿ ಹೋರಾಟ ಕುರಿತು ಮಾಧ್ಯಮಗಳು ಪ್ರಶ್ನೆ ಮಾಡಿದಾಗ ಬಿಜೆಪಿಯ ಸಂಸದೆ ಮೀನಾಕ್ಷಿ ಲೇಖರ ಓಡಿ ಹೋಗುತ್ತಾರೆ. ಅಂದರೆ, ಸತ್ಯವನ್ನು ಎದುರಿಸುವ ತಾಕತ್ತು ಬಿಜೆಪಿಯ ಯಾವ ಮುಖಂಡರಿಗೂ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ. ಹಾಗಾಗಿ, ಪ್ರತಿಭಟನಾನಿರತ ಕುಸ್ತಿಪಟುಗಳ ಹೋರಾಟವನ್ನು ಹತ್ತಿಕ್ಕಲು ಬಿಜೆಪಿಯ ವಾಟ್ಸಪ್ ದುಷ್ಟಕೂಟ ಹಲವು ತಂತ್ರಗಳನ್ನ ಮಾಡುತ್ತಿದೆ” ಎಂದು ಆರೋಪಿಸಿದ್ದಾರೆ.

“ಹಿಂದೆ ದೆಹಲಿ ರೈತರ ಹೋರಾಟದ ಸಂದರ್ಭದಲ್ಲೂ ಇದೇ ರೀತಿಯ ಸುಳ್ಳು ಸುದ್ದಿಗಳನ್ನು ಹರಡುವುದರಲ್ಲಿ ಬಿಜೆಪಿಯ ಸೋಸಿಯಲ್ ಮೀಡಿಯಾ ತಂಡ ಸಕ್ರಿಯವಾಗಿತ್ತು. ಹಾಗಾಗಿ, ಬಿಜೆಪಿ-ಆರ್‌ಎಸ್ಎಸ್‌ನಲ್ಲಿ ಕೆಲಸ ಮಾಡುವಂತಹ ಯಾವುದೇ ಕಾರ್ಯಕರ್ತರು ಸುಳ್ಳು ಬಿತ್ತುವ ಕೆಲಸ ಮಾಡಿದಾಗ ಆಶ್ಚರ್ಯ ಆಗಲ್ಲ, ಅದೆಲ್ಲ ನಿರೀಕ್ಷಿತ ಹಾಗಾಗಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸುತ್ತೇವೆ” ಎಂದು ಅವರು ಎಚ್ಚರಿಕೆ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ?: ಕುಸ್ತಿಪಟುಗಳ ಬೆಂಬಲಕ್ಕೆ ನಿಂತ ಬಿಜೆಪಿ ಸಂಸದೆ

ಸಿಪಿಐ ಮುಖಂಡೆ ಜ್ಯೋತಿ ಅನಂತ ಸುಬ್ಬರಾವ್ ಹಾಗೂ ಕರ್ನಾಟಕ ಜನಶಕ್ತಿ ಮುಖಂಡರಾದ ಗೌರಿ ಮಾತನಾಡಿ, “ಇಡೀ ದೇಶಾದ್ಯಂತ ನಾಗರಿಕ ಸಮಾಜ ತಲೆ ತಗ್ಗಿಸುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಿಸುತ್ತಿದೆ. ದೆಹಲಿ ಕುಸ್ತಿಪಟುಗಳ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸೇರಿದಂತೆ ಉನ್ನಾವೋ, ಕತುವಾ, ಹತ್ರಾಸ್‌ನಲ್ಲಿ ಹೆಣ್ಣುಮಕ್ಕಳ ಮೇಲೆ ನಡೆದ ಅತ್ಯಾಚಾರ-ಕೊಲೆಯನ್ನು ಬಿಜೆಪಿಯ ಯಾವುದೇ ನಾಯಕರು ಖಂಡಿಸಿಲ್ಲ. ಅಲ್ಲದೆ, ಬಹುತೇಹ ಮಹಿಳಾ ಪೀಡಕರು, ಅತ್ಯಾಚಾರಿಗಳು ಬಿಜೆಪಿಯ ನಾಯಕರೇ… ಹಾಗಾಗಿ ಇವತ್ತು ದೇಶದಲ್ಲಿ ಬಿಜೆಪಿಯ ಶಾಸಕರು, ಸಂಸದರಿಂದ ಮಹಿಳೆಯರನ್ನು ರಕ್ಷಣೆ ಮಾಡಿಕೊಳ್ಳಬೇಕಿದೆ. ಬಿಜೆಪಿ,‌ಮೋದಿ ಹಠಾವೋ ಆದಾಗ ದೇಶದಲ್ಲಿ ನಿಜವಾಗಿ ಬೇಟಿ ಬಚಾವೋ ಆಗತ್ತೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಭಟನೆಯಲ್ಲಿ ಜೆಡಿಎಸ್‌ ಮುಖಂಡ ಶ್ರೀಕಂಠೇಗೌಡ, ಜನವಾದಿ ಮಹಿಳಾ ಸಂಘಟನೆಯ ದೇವಿ, ವಕೀಲೆ ಅಖಿಲಾ ವಿದ್ಯಾಸಂದ್ರ ಸೇರಿದಂತೆ ಹಲವರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...