ಗುರಮಿಠಕಲ್ | ಪಿಎಸ್‌ಐ ಪರಶುರಾಮ್ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ದಸಂಸ ಪ್ರತಿಭಟನೆ

Date:

ಯಾದಗಿರಿ ನಗರ ಪೊಲೀಸ್ ಠಾಣೆಯ ಪಿ.ಎಸ್.ಐ ಪರಶುರಾಮ ಅವರ ಸಾವಿಗೆ ಕಾರಣರಾದ ಶಾಸಕ ಚನ್ನಾರೆಡ್ಡಿ ಪಾಟೀಲ್ ಮತ್ತು ಅವರ ಪುತ್ರನನ್ನು ಕೂಡಲೇ ಬಂಧಿಸಬೇಕು ಹಾಗ ಪಿಎಸ್‌ಐ ಕುಟುಂಬಕ್ಕೆ ಸರಕಾರವು ಪರಿಹಾರ ನೀಡುವಂತೆ ದಲಿತ ಸಂಘರ್ಷ ಸಮಿತಿಯ ಗುರಮಿಠಕಲ್ ಘಟಕ ಆಗ್ರಹಿಸಿದೆ.

ಈ ಬಗ್ಗೆ ಗುರಮಿಠಕಲ್‌ನಲ್ಲಿ ಪ್ರತಿಭಟನೆ ನಡೆಸಿದ ದಸಂಸ ಮುಖಂಡರು, ತಹಶೀಲ್ದಾರರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ದಸಂಸ ಸಂಚಾಲಕ ಲಾಲಪ್ಪ ತಲಾರಿ, “ತುಂಬಾ ಕಡು ಬಡತನದ ಕುಟುಂಬದಲ್ಲಿ ಜನಿಸಿ ಉನ್ನತ ಪೋಲಿಸ್ ಇಲಾಖೆಯಲ್ಲಿ ಪಿ.ಎಸ್.ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಪರಶುರಾಮ ಅವರು ಠಾಣೆಯಲ್ಲಿ ಕಾರ್ಯನಿರ್ವಹಿಸಲು ಇನ್ನೂ ಮೂರು ತಿಂಗಳು ಅವಕಾಶವಿತ್ತು. ವರ್ಗಾವಣೆಗೆ ಅವಧಿ ಇದ್ದರೂ ಕೂಡ ಅವರಿಗೆ ಆ ಠಾಣೆಯಿಂದ ಬೇರೆ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಯಾದಗಿರಿಯಲ್ಲೇ ಕೆಲಸ ಮಾಡಬೇಕಾದರೆ ಶಾಸಕರ ಕುಟುಂಬ 30 ಲಕ್ಷ ರೂಪಾಯಿಗಳು ನೀಡಬೇಕು ಎಂದು ನಿರಂತರವಾಗಿ ಪಿ.ಎಸ್.ಐ ಪರುಶುರಾಮ ಅವರಿಗೆ ಕಿರುಕುಳ ನೀಡುತ್ತಿದ್ದರು. ಇದರಿಂದಾಗಿ ಅವರಿಗೆ ಮಾನಸಿಕ ಒತ್ತಡ ಹೆಚ್ಚಾಗಿ ಹೃದಯಾಘಾತದಿಂದ ನಿಧನರಾಗಿದ್ದಾರೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂಬಂಧ ಯಾದಗಿರಿ ಠಾಣೆಯಲ್ಲಿ ಎಫ್.ಐ.ಆರ್ ದಾಖಲೆಯಾಗಿದೆ. ಆದರೂ ಕೂಡ ಶಾಸಕ ಮತ್ತು ಶಾಸಕನ ಪುತ್ರರನ್ನು ಇಲ್ಲಿಯವರೆಗೆ ಬಂಧನ ಮಾಡಿಲ್ಲ. ಪಿ.ಎಸ್.ಐ ಸಾವಿಗೆ ಕಾರಣರಾದ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಸರಕಾರದಿಂದ ಅವರ ಪತ್ನಿಗೆ ಉದ್ಯೋಗ ನೀಡಬೇಕು. ಶಾಸಕ ಸ್ಥಾನಕ್ಕೆ ಚನ್ನಾರೆಡ್ಡಿ ಪಾಟೀಲ್ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.

ಒಂದು ವೇಳೆ ವಿಳಂಬ ನೀತಿ ಅನುಸರಿಸಿದ್ದಲ್ಲಿ ಮುಂಬರುವ ದಿನಗಳಲ್ಲಿ ದಲಿತ ಸಂಘರ್ಷ ಸಮಿತಿ ಮತ್ತು ಸರ್ವ ಸಂಘಟನೆಗಳ ವತಿಯಿಂದ ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ದಸಂಸ ಎಚ್ಚರಿಕೆ ನೀಡಿದೆ.

ಪ್ರತಿಭಟನೆಯಲ್ಲಿ ಮಲ್ಲಿಕಾರ್ಜುನ ಸೈದಾಪೋಳ್, ಭೀಮಶಪ್ಪ ಕೆಳಮನಿ, ಶ್ರೀಕಾಂತ ತಲಾರಿ, ಹನುಮಂತು ಶನಿವಾರ, ಕೃಷ್ಣಪ್ಪ ಸೈದಾಪೋಳ್, ಮುಖಂಡರಾದ ವೀರಪ್ಪ ಪ್ಯಾಟಿ, ಮಾಣಿಕಪ್ಪ ಮುಕಿಡಿ, ಗುರುನಾಥ ತಲಾರಿ, ಹನಮಂತ ಮುಕಿಡಿ, ಭೀಮು ಗುಡುಸೆ, ರವಿ ರಾಠೋಡ್, ಗುರು ಕುಂಬಾರ, ಶರಣಪ್ಪ ಲಿಕ್ಕಿ, ರಾಕೇಶ್ ಸೈದಾಪೋಳ್, ಅಶೋಕ್ ಲಿಕ್ಕಿ, ಭೀಮಶೆಪ್ಪ ದಂತಪುರ್, ಕೃಷ್ಣ ದಾಸರಿ, ಸಾಯಿಬಣ್ಣ ಬೇಗರಿ ಇನ್ನಿತರರು ಉಪಸ್ಥಿತರಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...