ಮಾವಿಗೆ ಬೆಂಬಲ ಬೆಲೆ ಘೋಷಿಸುವಂತೆ ಆಗ್ರಹ; ರಸ್ತೆ ಮೇಲೆ ಮಾವು ಸುರಿದು ಪ್ರತಿಭಟನೆ

Date:

ಮಾವು ಬೆಳೆಗಾರರನ್ನು ನಿರ್ಲಕ್ಷಿಸಿರುವ ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಯನ್ನು ಖಂಡಿಸಿ, ಪ್ರತಿ ಕೆಜಿ ಮಾವಿಗೆ 15 ರೂಪಾಯಿ ಬೆಂಬಲ ಬೆಲೆ ಘೋಷಿಸಬೇಕೆಂದು ಒತ್ತಾಯಿಸಿ ಸಿಪಿಐಎಂ ಪಕ್ಷದ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಪಕ್ಷದ ಕೋಲಾರ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಗರದ ಹೊಸ ಬಸ್ ನಿಲ್ದಾಣದ ಬಳಿ ರಸ್ತೆ ತಡೆ ಮೂಲಕ ಪ್ರತಿಭಟನೆ ನಡೆಸಿದ ಕಾರ್ಯಕರ್ತರು, ಮಾವಿನ ಹಣ್ಣುಗಳನ್ನು ರಸ್ತೆಗೆ ಸುರಿದು, ಸಾರ್ವಜನಿಕರಿಗೆ ಉಚಿತವಾಗಿ ಹಣ್ಣುಗಳನ್ನು ವಿತರಿಸಿ ಆಕ್ರೋಶ ಹೊರಹಾಕಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಪಿ.ಆರ್ ಸೂರ್ಯನಾರಾಯಣ ಮಾತನಾಡಿ, “ನಮ್ಮನ್ನು ಆಳುವ ಸರ್ಕಾರಗಳ ರೈತ ವಿರೋಧಿ ಧೋರಣೆಗಳಿಂದ ಮಾವು ಬೆಳೆಗಾರರು ಇವತ್ತು ಬೀದಿಗೆ ಬಂದಿದ್ದಾರೆ ಮಾವು ಬೆಳೆ ಕುಸಿತಕ್ಕೆ ಸಾಂದ್ರಿಕೃತ ಹಣ್ಣುಗಳ ರಸದ ಅಮದು ನೇರವಾದ ಕಾರಣವಾಗಿದೆ ಆಂಧ್ರಪ್ರದೇಶ ಮತ್ತು ತಮಿಳುನಾಡು ಜ್ಯೂಸ್ ಪ್ಯಾಕ್ಟರಿಗಳ ಮೇಲೆ ಅವಲಂಬನೆ ಆಗುವುದು ಬಿಟ್ಟು ನಮ್ಮದೇ ರಾಜ್ಯದಲ್ಲಿ ಜ್ಯೂಸ್ ಪ್ಯಾಕ್ಟರಿಗಳನ್ನು ಪ್ರಾರಂಭಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದು ಟನ್ ಮಾವಿಗೆ 15 ಸಾವಿರ ರೂ ಸಿಗುವಂತೆ ಬೆಂಬಲ ಬೆಲೆ ಘೋಷಣೆ ಮಾಡಿ ಸಹಕಾರಿ ರಂಗದ ಮೂಲಕ ಹಣ್ಣು-ತಿರುಳು ಕೈಗಾರಿಕೆಯನ್ನು ಸ್ಥಾಪಿಸಬೇಕು. ಶ್ರೀನಿವಾಸಪುರದಲ್ಲಿನ ಪ್ರಮುಖ ಮಾರುಕಟ್ಟೆ ಕೇಂದ್ರವು ಪ್ರಪಂಚದ ಪ್ರಸಿದ್ದ ಮಾವಿನ ನಗರವಾಗಿ ಹೆಸರು ಪಡೆದಿದೆ. ಹವಾಮಾನ ವೈಪರೀತ್ಯಗಳಿಂದ ಸಾಕಷ್ಟು ಬೆಳೆ ನಷ್ಟ ಆಗಿದ್ದರ ಜೊತೆಗೆ ರೈತರಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದೇ ಮಾವಿನ ಕಾಯಿಗಳನ್ನು ತೋಟದಲ್ಲೇ ಬಿಡುವಂತ ಪರಿಸ್ಥಿತಿ ಬಂದಿದೆ. ಕೂಡಲೇ ಸರ್ಕಾರಗಳು ಇತ್ತ ಗಮನ ಹರಿಸಬೇಕು” ಎಂದು ಒತ್ತಾಯಿಸಿದರು.

“ಕೇಂದ್ರ ಸರ್ಕಾರ ನಮ್ಮ ದೇಶದ ರೈತರ ರಕ್ಷಣೆಗೆ ನಿಲ್ಲಬೇಕು. ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಮದಾಗುತ್ತಿರುವ ಹಣ್ಣಿನ ರಸ ಸಾಂದ್ರೀಕರಣ ನಿಲ್ಲಿಸಬೇಕು ಮತ್ತು ಮಾರುಕಟ್ಟೆಗೆ ಅವಕಾಶ ನೀಡದೇ ಹೆಚ್ಚಿನ ಸುಂಕ ವಿಧಿಸಬೇಕು. ಡಾ. ಸ್ವಾಮಿನಾಥನ್ ಶಿಫಾರಸ್ಸಿನ ಮೇಲೆ ಮಾವಿಗೂ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಇಲ್ಲದೇ ಹೋದರೆ ಮುಂದೆ ಭಾರತ ಕಮ್ಯೂನಿಸ್ಟ್ ಮಾರ್ಕ್ಸ್‌ವಾದಿ ಪಕ್ಷದಿಂದ ರಾಜ್ಯಾದ್ಯಂತ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ದ ಪ್ರತಿಭಟನೆ ನಡೆಸಬೇಕಾಗುತ್ತದೆ” ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ಕೋಲಾರ | ವೇಮಗಲ್‌ನಲ್ಲಿ ಇಂದಿರಾ ಕ್ಯಾಂಟಿನ್ ಆರಂಭ

ಸಿಪಿಐಎಂ ಪಕ್ಷದ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯೆ ವಿ.ಗೀತಾ ಮಾತನಾಡಿ, “ಮಾವಿನ ಹಣ್ಣುಗಳಿಗೆ ಬೆಂಬಲ ಬೆಲೆ ಘೋಷಣೆಗೆ ಜಿಲ್ಲೆಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ಒತ್ತಡ ಹೇರಬೇಕು. ಜಿಲ್ಲೆಯಲ್ಲಿ ಕೃಷಿ ಆಧಾರಿತ ಹಾಗೂ ಹಣ್ಣುಗಳ ರಸ ತೆಗೆಯುವ ಕಾರ್ಖಾನೆಗಳು ಸ್ಥಾಪನೆ ಆಗಬೇಕು. ವಿದೇಶಗಳಿಂದ ನಮ್ಮ ದೇಶಕ್ಕೆ ಆಮದಾಗುವ ಸಾಂದ್ರೀಕೃತ ಹಣ್ಣುಗಳ ರಸಗಳನ್ನು ನಿಲ್ಲಿಸಬೇಕು. ರೈತರ ಧ್ವನಿಯಾಗದ ಶಾಸಕರು ಸಂಸದರ ವಿರುದ್ದ ಪ್ರತಿಭಟನೆಗೆ ಮುಂದಾಗಬೇಕೆಂದು” ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಸಿಪಿಐಎಂ ಪಕ್ಷದ ಕಾರ್ಯದರ್ಶಿ ಮಂಡಳಿ ಸದಸ್ಯರಾದ ಗಾಂಧಿನಗರ ನಾರಾಯಣಸ್ವಾಮಿ, ಟಿ.ಎಂ. ವೆಂಕಟೇಶ್, ಪಾತಕೋಟೆ ನವೀನ್ ಕುಮಾರ್, ತಂಗರಾಜ್ ಜಿಲ್ಲಾ ಸಮಿತಿ ಸದಸ್ಯರಾದ ವಿಜಯಕೃಷ್ಣ, ಅಪ್ಪಯ್ಯಣ್ಣ, ಜಯಲಕ್ಷ್ಮಿ ಪಿ.ಶ್ರೀನಿವಾಸ್ ಮತ್ತು ಸಿಪಿಎಂ ಪಕ್ಷದ ಕಾರ್ಯಕರ್ತರು ಮುಖಂಡರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...