ಪಂಜಾಬ್ ಮತ್ತು ಹರಿಯಾಣ ಗಡಿಭಾಗವಾದ ಶಂಭು ಮತ್ತು ಖಾನೌರಿ ಭಾಗಗಳಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಅಶ್ರುವಾಯು ಶೆಲ್ಗಳನ್ನು ಸಿಡಿಸಿದ್ದು, ರೈತರೊಬ್ಬರು ಸಾವನ್ನಪ್ಪಿದ್ದಾರೆ. ಘಟನೆಯನ್ನು ಖಂಡಿಸಿರುವ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು, ಮೃತ ರೈತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ್ದಾರೆ.
ಕಲಬುರಗಿಯಲ್ಲಿ ಸಂಸದರ ಕಾರ್ಯಾಲಯದ ಮುಂದೆ ಪ್ರತಿಭಟನೆ ನಡೆಸಿದ ಕಾರ್ಯಕರ್ತರು ಸಂಸದ ಡಾ. ಉಮೇಶ್ ಜಾಧವ್ ಅವರ ಮುಖಾಂತರ ಪ್ರಧಾನ ಮಂತ್ರಿಗಳಿಗೆ ಹಕ್ಕೊತ್ತಾಯ ಸಲ್ಲಿಸಿದರು.
ಚುನಾವಣಾ ಬಾಂಡ್ಗಳ ಮೂಲಕ ಭ್ರಷ್ಟಾಚಾರವನ್ನು ಕಾನೂನುಬದ್ಧಗೊಳಿಸಿ ಸಾವಿರಾರು ಕೋಟಿ ರೂಪಾಯಿಗಳನ್ನು ಪಕ್ಷದ ನಿಧಿಯಾಗಿ ಸಂಗ್ರಹಿಸುತ್ತಿರುವ ಮೋದಿ ಸರ್ಕಾರವನ್ನು ಪ್ರತಿಭಟನಾಕಾರರು ಉಗ್ರವಾಗಿ ಖಂಡಿಸಿ, ರೈತರ ಬೇಡಿಕೆಗಳು ಇಡೆರಿಸಲು ಕೇಂದ್ರ ಸರ್ಕಾರ ಮುಂದಾಗಬೇಕು ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮುಸ್ಲಿಮರ ತುಷ್ಟೀಕರಣ, ಬಿಜೆಪಿ ಮತ್ತು ಗೋದಿ ಮೀಡಿಯಾ
ಪ್ರತಿಭಟನೆಯಲ್ಲಿ ಎಸ್ಕೆಎಂ ಜಿಲ್ಲಾ ಸಂಚಾಲಕ ಶರಣಬಸಪ್ಪ ಮಮಶೆಟ್ಟಿ, ಎಐಕೆಎಸ್ ಕಾರ್ಯದರ್ಶಿ ಭೀಮಾಶಂಕರ ಮಾಡಿಯಾಳ, ಡಿಎಸ್ಎಸ್ ರಾಜ್ಯ ಸಂಚಾಲಕ ಎಸ್.ಆರ್.ಕೊಲ್ಲೂರ್, ರೈತ ಸಂಘದ ಜಿಲ್ಲಾಧ್ಯಕ್ಷ ಅಧ್ಯಕ್ಷ ನಾಗೇಂದ್ರಪ್ಪ ಥಂಬೆ ಸೇರಿದಂತೆ ಪ್ರಮುಖರಾದ ಪದ್ಮಿನಿ ಕಿರಣಗಿ, ಎಂ.ಬಿ.ಸಜ್ಜನ್, ಮೇಘರಾಜ ಕಠಾರೆ, ಜಾವೇದ್ ಹುಸೇನ್, ನಾಗಯ್ಯ ಸ್ವಾಮಿ, ಸುಧಾಮ ಧನ್ನಿ, ಸಾಜೀದ್ ದಿಗ್ಗಾಂವಕರ್ ಇದ್ದರು.




