ಒತ್ತುವರಿ ತೆರವು ಅಧಿಕಾರಿಗಳ ಪರ ಹಾಗೂ ವಿರುದ್ಧ ಪ್ರತಿಭಟನೆ

Date:

ಚಿಂತಾಮಣಿ:ರಸ್ತೆಗೆ ಅಡ್ಡಲಾಗಿ ನಿರ್ಮಿಸಿರುವ ಶೌಚಾಲಯವನ್ನು ಸ್ಥಳಾಂತರ ಗೊಳಿಸುವಂತೆ ಪಂಚಾಯಿತಿಯಿಂದ ನೋಟಿಸ್ ನೀಡಿದ್ದರು ನೋಟಿಸ್ ಗೆ ಕ್ಯಾರೆ ಎನ್ನದ ಒತ್ತುವರಿದಾರರು ಅಧಿಕಾರಿಗಳೇ ಖುದ್ದಾಗಿ ತೆರವು ಕಾರ್ಯಾಚರಣೆ ಮಾಡಿದ ಹಿನ್ನೆಲೆಯಲ್ಲಿ ಒತ್ತುವರಿದಾರರು ಚಿಂತಾಮಣಿ ನಗರದ ತಾಲೂಕು ಪಂಚಾಯಿತಿ ಮುಂಭಾಗ ಅಹೋರಾತ್ರಿ ಪ್ರತಿಭಟನೆ ನಡೆಸಿದರು.

ಮಂಗಳವಾರ ಬೆಳಗ್ಗೆಯಿಂದ ಚಿಂತಾಮಣಿ ತಾಲ್ಲೂಕಿನ ಕುರುಬರು ಗ್ರಾಮ ಪಂಚಾಯತಿ ವ್ಯಾಪ್ತಿಯ ಸೀಕಲ್ಲು ಗ್ರಾಮದವರಾದ ನರಸಿಂಹಪ್ಪ ರವರ ಕುಟುಂಬದವರು ತಾಲೂಕು ಪಂಚಾಯಿತಿ ಆವರಣದ ಬಳಿ ಅಂಬೇಡ್ಕರ್ ರವರ ಭಾವಚಿತ್ರವನ್ನು ಇಟ್ಟು ಪ್ರತಿಭಟನೆಗೆ ಮುಂದಾಗಿ ಮಾತನಾಡಿದವರು ಏಕಾಏಕಿ ಅಧಿಕಾರಿಗಳು ನಾವು ಕಟ್ಟಿಕೊಂಡಿರುವ ಮನೆ ಹಾಗೂ ಶೌಚಾಲಯವನ್ನು ತೆರುವುಗೊಳಿಸಿದ್ದಾರೆ ಇದರಿಂದ ನಮಗೆ ಅನ್ಯಾಯವಾಗಿದೆ ಅನ್ಯಾಯ ದೊರಕಿಸಿ ಕೊಡಬೇಕೆಂದು ಪ್ರತಿಭಟನೆ ನಡೆಸುತ್ತಿದ್ದೇವೆ ಎಂದು ಹೇಳಿದರು.

ಇನ್ನೂ ಬುಧವಾರದ ಬೆಳಗ್ಗೆ ಅದೇ ತಾಲ್ಲೂಕು ಪಂಚಾಯಿತಿ ಎದುರುಗಡೆ ಸದರಿ ಗ್ರಾಮದ ಶಿವಣ್ಣ ರವರ ನೇತೃತ್ವದಲ್ಲಿ ಹಲವು ಮಂದಿ ಅಧಿಕಾರಿಗಳ ಪರವಾಗಿ ನಿಂತು ಪ್ರತಿಭಟನೆ ಮಾಡಿದ ಅವರುಗಳು ಸಹ ಮಾತನಾಡಿ ಅಧಿಕಾರಿಗಳ ಮೇಲೆ ಸುಳ್ಳು ಆರೋಪ ಮಾಡಿ ನರಸಿಂಹಪ್ಪ ರವರ ಕುಟುಂಬದವರು ಪ್ರತಿಭಟನೆ ನಡೆಸುತ್ತಿರುವುದು ಸರಿಯಲ್ಲ!ಅಧಿಕಾರಿಗಳು ಕಾನೂನು ಬದ್ಧವಾಗಿ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಶೌಚಾಲಯವನ್ನು ತೆರವು ಗೊಳಿಸಿರುವುದು ಸರಿಯಾಗಿದೆ!ವಿನಾಕಾರಣ ಅಧಿಕಾರಿಗಳಿಗೆ ಈ ರೀತಿ ಪ್ರತಿಭಟನೆ ಮಾಡಿ ತೊಂದರೆ ನೀಡುವುದು ಸರಿ ಇಲ್ಲ ಎಂದು ದೂರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನೂ ಇದನ್ನು ಕುರಿತು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಆನಂದ್ ರವರಿಗೆ ದೂರವಾಣಿ ಮುಖಾಂತರ ಸಂಪರ್ಕಿಸಿ ಮಾತನಾಡಿದಾಗ ನರಸಿಂಹಪ್ಪ ರವರ ಕುಟುಂಬದವರು ರಸ್ತೆಗೆ ಅಡ್ಡಲಾಗಿ ಶೌಚಾಲಯವನ್ನು ನಿರ್ಮಿಸಿದ್ದರು.ಒತ್ತುವರಿದಾರರಿಗೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನೋಟಿಸ್ ನೀಡಿ ಶೌಚಾಲಯವನ್ನು ತೆರವುಗೊಳಿಸಿ ಸಾರ್ವಜನಿಕರಿಗೆ ಓಡಾಡಲು ರಸ್ತೆ ಅನುಕೂಲ ಮಾಡಿಕೊಡಲಾಗಿದೆ ಎಂದು ವಿವರಿಸಿದರು.

ಇದನ್ನು ಓದಿದ್ದೀರಾ..? ಅರಣ್ಯ ಅಧಿಕಾರಿಗಳ ಕಿರುಕುಳ ಇತ್ಯರ್ಥಕ್ಕೆ ರೈತರಿಂದ ಪ್ರತಿಭಟನೆ

ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಮುನಿಸ್ವಾಮಿ, ಮಂಜುನಾಥ್,ಗೋವಿಂದಪ್ಪ,ದೇವರಾಜ್,ಆನಂದಮ್ಮ, ನಂದಿನಿ,ಶಿಲ್ಪ,ಪ್ರಭ,ಸೀತಮ್ಮ,ಮಾಲತಿ,ಕವಿತಮ್ಮ,ಇದ್ದರು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...