ಅಲೆಮಾರಿ ಸಮುದಾಯಗಳಿಗೆ 3% ಮೀಸಲಾತಿ ಕಲ್ಪಿಸಿ ; ಮಹಾಸಭಾ ಮನವಿ

Date:

ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯಗಳನ್ನು ಒಳಮೀಸಲಾತಿಗೆ ಒಳಪಡಿಸಬೇಕೆಂದು ಒತ್ತಾಯಿಸಿ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾ ನ್ಯಾಯಮೂರ್ತಿ ಹೆಚ್.ಎನ್.ನಾಗಮೋಹನ್ ದಾಸ್ ಅವರಿಗೆ ಮನವಿ ಮಾಡಿದೆ.

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಕರ್ನಾಟಕ ರಾಜ್ಯ ಅಲೆಮಾರಿ ಬುಡಕಟ್ಟು ಮಹಾಸಭಾದ ರಾಜ್ಯಾಧ್ಯಕ್ಷ ಬಿ.ಎಲ್.ಹನುಮಂತಪ್ಪ, “ಇಂದಿಗೂ ಶಿಕ್ಷಣ, ಆರೋಗ್ಯ, ವಸತಿ ಮತ್ತು ಯಾವುದೇ ಸರ್ಕಾರಿ ಸೌಲಭ್ಯಗಳನ್ನು ಪಡೆಯದೆ ಟೆಂಟು, ಗುಡಾರ, ಗುಡಿಸಲುಗಳಲ್ಲಿ ಅಲೆಮಾರಿಗಳು ವಾಸಿಸುತ್ತಿದ್ದಾರೆ. ಇಂದಿನವರೆಗೂ ಕೂಡ ಅಲೆಮಾರಿ ಸಮುದಾಯಕ್ಕೆ ಸರ್ಕಾರ ಯಾವುದೇ ರೀತಿಯ ಸವಲತ್ತು ನೀಡಿಲ್ಲ. ಸದ್ಯಕ್ಕೆ ಕರ್ನಾಟಕ ಪರಿಶಿಷ್ಟ ಜಾತಿಯಲ್ಲಿನ ಪಟ್ಟಿಯಲ್ಲಿರುವ ನೂರು ಸಮುದಾಯಗಳಲ್ಲಿ 49 ಸಮುದಾಯಗಳು ಅಲೆಮಾರಿಗಳಾಗಿದ್ದಾರೆ. ಪರಿಶಿಷ್ಟ ಜಾತಿಯಲ್ಲಿರುವ ನೂರೊಂದು ಸಮುದಾಯಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಬಗ್ಗೆ ಈಗಾಗಲೇ ಸರ್ಕಾರ ಮುಂದಾಗಿದೆ. ಹಾಗಾಗಿ, ಸಮೀಕ್ಷೆ ಮಾಡಿ ಒಳಮೀಸಲಾತಿಯಲ್ಲಿರುವ ಜಾತಿಗಳ ವರ್ಗಿಕರಣ ಮಾಡಿ ಸರ್ಕಾರಕ್ಕೆ ಸಲಹೆ ನೀಡುವಾಗ ಪರಿಶಿಷ್ಟ ಜಾತಿಯಲ್ಲಿನ ಅಲೆಮಾರಿ ಸಮುದಾಯಗಳನ್ನ ಪರಿಗಣನೆಗೆ ತೆಗೆದುಕೊಳ್ಳಿ” ಎಂದು ಮನವಿ ಮಾಡಿದ್ದಾರೆ.

“ಕೇಂದ್ರ ಸರ್ಕಾರ ಅಲೆಮಾರಿಗಳ ಕುರಿತಂತೆ 2008ರಲ್ಲಿ ನೇಮಿಸಿದ್ದ ಬಾಲಕೃಷ್ಣ ರೇಣುಕೆ ರಾಷ್ಟ್ರೀಯ ಆಯೋಗಗಳ ಪ್ರಕಾರ ಕರ್ನಾಟಕದಲ್ಲಿ 10% ಅಲೆಮಾರಿ ಸಮುದಾಯಗಳಿರುವುದು ದಾಖಲಾಗಿದೆ. ಹಾಗಾಗಿ, ಅಲೆಮಾರಿ-ಅರೆ ಅಲೆಮಾರಿ ಸಮುದಾಯಗಳ ಅಧಿಕೃತ ದತ್ತಾಂಶ, ದ್ವಿತೀಯ ಮೂಲದ ಮಾಹಿತಿ ಮತ್ತು ಕುಲಶಾಸ್ತ್ರೀಯ ಅಧ್ಯಯನದ ಕನಿಷ್ಠ ಮಾಹಿತಿ ಅಲೆಮಾರಿ ಸಮುದಾಯಗಳದ್ದು ಮಾತ್ರ ಇದೆ. ಎಸ್‌.ಸಿ, ಎಸ್.ಟಿ ಹಿಂದುಳಿದ ವರ್ಗಗಳಿಗೆ ಸೇರಿದ ಅಲೆಮಾರಿಗಳ ಅಸ್ಮಿತೆಗಾಗಿ ‘ಅಲೆಮಾರಿ ಬುಡಕಟ್ಟು ಆಯೋಗ’ವನ್ನು ರಚನೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದೇವೆ. ಸರ್ಕಾರ ಕೂಡ ನಮ್ಮ ಮನವಿಗೆ ಓಗೊಟ್ಟು ಇಡೀ ಅಲೆಮಾರಿಗಳನ್ನು ಒಂದೇ ಸೂರಿನಡಿ ತರುವ ಪ್ರಯತ್ನದಲ್ಲಿದೆ. ಈ ಕಾರಣಕ್ಕೆ ನಾವು 7% ಮೀಸಲಾತಿ ಕೇಳಿದ್ದೇವೆ. ಹಾಗೇನಾದರೂ ಎಸ್‌.ಸಿ ಅಲೆಮಾರಿಗಳನ್ನು ಮಾತ್ರ ತಾವು ಪರಿಗಣಿಸುವುದಾದರೆ ಕನಿಷ್ಠ 3% ಮೀಸಲಾತಿ ನೀಡಬೇಕು” ಎಂದು ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಲೆಮಾರಿ

“ಪರಿಶಿಷ್ಟ ಜಾತಿಯಲ್ಲಿರುವ ಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಪಟ್ಟಿ ಕಲ್ಪಸಿ ಕನಿಷ್ಠ 3% ಮೀಸಲಾತಿಯನ್ನ ಕಲ್ಪಿಸಬೇಕು. ಅತ್ಯಂತ ಕೆಳದರ್ಜೆಯಲ್ಲಿರುವ ಅತಿಸೂಕ್ಷ್ಮ ಜಾತಿಗಳಾದ ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯಗಳಿಗೆ ಈವರೆಗೆ ಯಾವುದೇ ಸೌಲಭ್ಯ ದೊರಕಿಲ್ಲ. ಸದ್ಯ ಸಮುದಾಯಗಳ ಸ್ಥಿತಿಗತಿಯನ್ನ ಗಮನಿಸಿ, ಸಮುದಾಯದ ಶ್ರೇಯೋಭಿವೃದ್ಧಿಗೆ ನ್ಯಾಯ ಒದಗಿಸಬೇಕು. 49 ಜಾತಿಗಳಿಗೆ ಮೀಸಲಾತಿ ಬೇಕು ಎಂದು ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರಿಗೆ ಮನವಿ ಮಾಡಿದ್ದೇವೆ. ಅಲೆಮಾರಿ ಸಮುದಾಯಗಳು ಬಹಳ ಕಷ್ಟದಲ್ಲಿವೆ. ಸ್ವಾತಂತ್ರ್ಯ ಬಂದು 75 ವರ್ಷವಾದರೂ ಕೂಡ ಈ ಸಮುದಾಯಗಳಿಗೆ ಏನೂ ಸಿಗುತ್ತಿಲ್ಲ. ಮುಂದಿನ ದಿನಗಳಲ್ಲಿ ಮುಖ್ಯಮಂತ್ರಿಗಳಿಗೂ ಕೂಡ ಮನವಿ ನೀಡುತ್ತೇವೆ. 49 ಎಸ್‌.ಸಿ ಸಮುದಾಯಗಳಿಗೆ ಇಲ್ಲಿಯವರೆಗೂ ಭೂಮಿ, ನಿವೇಶನ ಇಲ್ಲ. ಸರ್ಕಾರದ ಯಾವುದೇ ಟಿಎಸ್‌ಪಿ, ಎಸ್‌ಪಿ ಲೋನ್ ಸಿಗುತ್ತಿಲ್ಲ. ಎಲ್ಲ ಬಲಿಷ್ಠ ಸಮುದಾಯಗಳ ಪಾಲಾಗುತ್ತಿದೆ. ಅನುದಾನ ಬಲಾಡ್ಯ ಜಾತಿಗಳ ಪಾಲಾಗುತ್ತಿದೆ. ಮೀಸಲಾತಿ ನೀಡಿದರೇ, ಈ ಜನಾಂಗಕ್ಕೆ ಅನುಕೂಲವಾಗುತ್ತದೆ. ಹೊಸ ಜನಗಣತಿ ಬಿಡುಗಡೆ ಮಾಡಿ ಎಲ್ಲ ವರದಿಗಳನ್ನ ಆಧರಿಸಿ ಮೀಸಲಾತಿ ನೀಡಬೇಕು. ಕಳೆದ ನಾಲ್ಕು ವರ್ಷಗಳಿಂದ ಒಳಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ. ಕಳೆದ 75ವ ವರ್ಷದಿಂದ ಮೀಸಲಾತಿಗಾಗಿ ಕಾದಿದ್ದೇವೆ” ಎಂದು ಹೇಳಿದ್ದಾರೆ.

ಅಲೆಮಾರಿ ಬುಡಕಟ್ಟು ಮಹಾಸಭಾದ ರಾಜ್ಯ ಪ್ರಧಾನ ಕಾರ್ಯದರ್ಶಿ ನಾಗರಾಜು ಈ ದಿನ.ಕಾಮ್‌ ಜತೆಗೆ ಮಾತನಾಡಿ, “ಒಳಮೀಸಲಾತಿ ಏಕ ಸದಸ್ಯ ವಿಚಾರಣಾ ಆಯೋಗದ ಅಧ್ಯಕ್ಷ ನ್ಯಾಯಮೂರ್ತಿ ನಾಗಮೋಹನದಾಸ್ ಅವರಿಗೆ ಅಲೆಮಾರಿ ಸಮುದಾಯಗಳಿಗೂ ಕೂಡ ಒಳಮೀಸಲಾತಿ ನೀಡಬೇಕು ಎಂದು ಮನವಿ ಮಾಡಿದ್ದೇವೆ. 3% ಇರುವ ಬಲಾಢ್ಯ ಸಮುದಾಯಗಳು 10% ಮೀಸಲಾತಿಯನ್ನು ಕಬಳಿಸುತ್ತಿವೆ. 10% ಇರುವ ಸಮುದಾಯಗಳಿಗೆ 3% ಮೀಸಲಾತಿಯನ್ನಾದರೂ ಕೊಡಲಿ ಎಂಬುದು ನಮ್ಮ ಮನವಿ” ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಹಿಂಡೆನ್ ಬರ್ಗ್ ರಿಸರ್ಚ್ ಸಂಸ್ಥೆಯನ್ನು ಸ್ಥಗಿತಗೊಳಿಸಿದ ಸ್ಥಾಪಕ ನಾಥನ್ ಆಂಡರ್ಸನ್

“ನಾವು ಹಳ್ಳಿಜೋಗದ ಕುಟುಂಬದವರು. ನಮಗೆ ಯಾವುದೇ ರೀತಿಯ ಮೀಸಲಾತಿ ಸಿಗುತ್ತಿಲ್ಲ. ಸರ್ಕಾರದಿಂದ ವಸತಿ, ಶೌಚಾಲಯ, ಕರೆಂಟ್ ಸೇರಿದಂತೆ ಯಾವುದೇ ರೀತಿಯ ಸೌಲಭ್ಯ, ಮೀಸಲಾತಿ ಸಿಗುತ್ತಿಲ್ಲ. ಬಡವರನ್ನ ಕರೆದು ಅವರ ಕುಂದು-ಕೊರತೆಗಳನ್ನ ಕೇಳಬೇಕು. ಆದರೆ, ನಮ್ಮ ಸಮಸ್ಯೆ ಬಗ್ಗೆ ಕೇಳುತ್ತಿಲ್ಲ. ನಮ್ಮ ಪರಿಸ್ಥಿತಿಯನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ. ಸರ್ಕಾರ ನಮ್ಮನ್ನ ಕಡೆಗಣಿಸುತ್ತಿದೆ. ಸರ್ಕಾರದ ಜಾಗ ಇದ್ದರೂ ನಮಗೆ ಕೊಡಲ್ಲ. ಸರ್ಕಾರ ನಮ್ಮನ್ನು ಯಾವತ್ತೂ ಮೇಲೆತ್ತಿಲ್ಲ” ಎಂದು ಚಿಕ್ಕಗಂಗಮ್ಮ ಆರೋಪಿಸಿದ್ದಾರೆ.

ಸುಡುಗಾಡು ಸಿದ್ಧ ಸಮುದಾಯದ ಧನಂಜಯ್ ಮಾತನಾಡಿ, “ಸರ್ಕಾರ ಭಿಕ್ಷಾಟನೆ ನಿಲ್ಲಿಸಿದ ಮೇಲೆ ಜನರೂ ಕೂಲಿಗೆ ಹೋಗುತ್ತಿದ್ದಾರೆ. ಆದರೆ, ಅವರಿಗೆ ಯಾವುದೇ ರೀತಿಯ ಕೂಲಿ ಕೆಲಸ ಸಿಗುತ್ತಿಲ್ಲ. ಪ್ರತಿಯೊಬ್ಬರು ಬಡತನದಲ್ಲಿ ಬದುಕುತ್ತಿದ್ದಾರೆ. ಕಷ್ಟದಲ್ಲಿದ್ದೇವೆ. ಸರ್ಕಾರ 3% ಮೀಸಲಾತಿಯನ್ನು ನೀಡಿದರೆ, ಉದ್ಯೋಗ, ಶಿಕ್ಷಣಕ್ಕೆ ಅನುಕೂಲವಾಗುತ್ತದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...