ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ದೇವರ ಪ್ರಸಾದವಿದ್ದಂತೆ: ಸಚಿವ ಮಧು ಬಂಗಾರಪ್ಪ

Date:

ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವುದು ದೇವರ ಪ್ರಸಾದವಿದ್ದಂತೆ ಎಂದು ಸಚಿವ ಮಧು ಬಂಗಾರಪ್ಪ ಅಭಿಪ್ರಾಯಪಟ್ಟರು.

ಕುಮಟಾ ತಾಲೂಕಿನ ಕಾಗಾಲ ಗ್ರಾಮದ ಐತಿಹಾಸಿಕ ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸ್ವರ್ಣ ಸಂಭ್ರಮಾಚರಣೆಯಲ್ಲಿ ಭಾಗವಹಿಸಿ ಅವರು ಮಾತನಾಡಿದರು.

“ಸುಮಾರು 154 ವರ್ಷಗಳ ಇತಿಹಾಸವನ್ನು ಹೊಂದಿರುವ ಈ ಶಾಲೆ, ಸ್ವಾತಂತ್ರ್ಯ ಪೂರ್ವದಿಂದ ಇಂದಿನ ಪೀಳಿಗೆಯವರೆಗೆ ಸಾವಿರಾರು ಮಕ್ಕಳಿಗೆ ಶಿಕ್ಷಣ ನೀಡಿರುವುದು ಒಂದು ಮಹೋನ್ನತ ಸಾಧನೆಯಾಗಿದೆ. ಈ ಶಾಲೆಗೆ ತಮ್ಮ ಅಮೂಲ್ಯ ಸೇವೆಯನ್ನು ಸಲ್ಲಿಸಿದ ಪ್ರತಿಯೊಬ್ಬರಿಗೂ ನಾನು ಮನಃಪೂರ್ವಕ ನಮನ ಸಲ್ಲಿಸುತ್ತೇನೆ” ಎಂದು ಅಭಿನಂದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಂದರ್ಭದಲ್ಲಿ ಶಾಲೆಗೆ ಹೊಸ ಕೊಠಡಿಗಳ ಅಗತ್ಯವಿರುವ ವಿಷಯವನ್ನು ಗಮನಿಸಿ, ಅವುಗಳನ್ನು ಶೀಘ್ರದಲ್ಲಿ ನಿರ್ಮಿಸಲು ಕ್ರಮಕೈಗೊಳ್ಳುವಂತೆ ಸಂಬಂಧಿತ ಅಧಿಕಾರಿಗಳಿಗೆ ಸೂಚನೆ ನೀಡಿ. ಇದೇ ವೇಳೆ, ಮುಂಬರುವ ದಿನಗಳಲ್ಲಿ ಈ ಶಾಲೆಯನ್ನು ದ್ವಿಭಾಷಾ ಶಾಲೆಯಾಗಿ ಅಭಿವೃದ್ಧಿಪಡಿಸುವ ಪ್ರಕ್ರಿಯೆ ಕೈಗೊಳ್ಳಲಾಗುವುದೆಂದರು ಶಾಲೆಯಲ್ಲಿ ಹೆಚ್ಚಿನ ದಾಖಲಾತಿಯನ್ನು ಉತ್ತೇಜಿಸುವಂತೆ ಮತ್ತು ಮಕ್ಕಳು ಪ್ರತಿದಿನ ಹಾಜರಾಗುವಂತೆ ವಿಶೇಷ ಕಾಳಜಿ ವಹಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

1001539692

ಇದೇ ಸಂದರ್ಭದಲ್ಲಿ ತಮ್ಮ ತಂದೆಯವರಾದ, ಮಾಜಿ ಮುಖ್ಯಮಂತ್ರಿಗಳಾದ ಎಸ್. ಬಂಗಾರಪ್ಪ ಅವರು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಸ್ಮರಿಸಿದರು.

ಹಾಗೆಯೇ, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಶಿಕ್ಷಣ ಇಲಾಖೆಗೆ ಹಲವಾರು ಯೋಜನೆಗಳನ್ನು ರೂಪಿಸಿ ಯಶಸ್ವಿಯಾಗಿ ಮಕ್ಕಳಿಗೆ ತಲುಪಿಸುವಲ್ಲಿ ನಡೆಸುತ್ತಿರುವ ಸಕಲ ಪ್ರಯತ್ನಗಳನ್ನು ಸ್ಮರಿಸಿ, ಈ ಮೂಲಕ ಮಕ್ಕಳಿಗೆ ದೊರಕುತ್ತಿರುವ ಸೌಲಭ್ಯಗಳು ನನಗೆ ದೇವರ ಪ್ರಸಾದದಂತೆ ಎಂದರು.

ಈ ಸಂದರ್ಭದಲ್ಲಿ ಕುಮಟಾ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ದಿನಕರ್ ಕೆ ಶೆಟ್ಟಿ, ಶಿರಸಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಭೀಮಣ್ಣ ಟಿ ನಾಯ್ಕ, ಕಾಗಾಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸಾವಿತ್ರಿ ವೆಂಕಟೇಶ್ ಪಟಗಾರ, ಕಾಗಾಲ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರಶಾಂತ ಶೆಟ್ಟಿ, ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ನಾಯ್ಕ, ಕುಮಟಾ ವಕೀಲ ಸಂಘದ ಅಧ್ಯಕ್ಷರಾದ ಶ್ರೀಮತಿ ಮಮತಾ ನಾಯ್ಕ, ಜಿ ಕೆ ಪಟಗಾರ, ಶ್ರೀಮತಿ ಅಕ್ಷತಾ, ಸರ್ಕಾರಿ ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರಾದ ಶ್ರೀಮತಿ ಜಾಹ್ನವಿ ಹೆಗ್ಡೆ ಮತ್ತು ಶಿಕ್ಷಣ ಇಲಾಖೆಯ ಅಧಿಕಾರಿಗಳು, ಸರ್ಕಾರಿ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...