ಮೈಸೂರು | ವಂಚಿತರಿಗೆ ಸಾಮಾಜಿಕ ನ್ಯಾಯ ನೀಡುವುದು ಕಾನೂನು ಶಿಕ್ಷಣದ ಮುಖ್ಯ ಗುರಿ: ಪ್ರೊ ಎಂ ಕೆ ರಮೇಶ್

Date:

ಕಾನೂನು ಶಿಕ್ಷಣದ ಮುಖ್ಯ ಗುರಿಯೇ ವಂಚಿತರಿಗೆ ಸಾಮಾಜಿಕ ನ್ಯಾಯ ನೀಡುವುದು ಎಂದು ಬೆಂಗಳೂರಿನ ನ್ಯಾಷನಲ್ ಲಾ ಆಫ್ ಇಂಡಿಯಾ ಯುನಿವರ್ಸಿಟಿಯ ನಿವೃತ್ತ ಕಾನೂನು ಪ್ರಾಧ್ಯಾಪಕ ಪ್ರೊ ಎಂ ಕೆ ರಮೇಶ್ ಅಭಿಪ್ರಾಯಿಸಿದರು.

ಮೈಸೂರಿನ ವಿದ್ಯಾವರ್ಧಕ ಕಾನೂನು ಕಾಲೇಜು ಆಯೋಜಿಸಿದ್ದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅತಿಥಿಯಾಗಿ ಭಾಗವಹಿಸಿ ಅವರು ಮಾತನಾಡಿದರು.

ಕಾನೂನೇತರ ಕಾರಣಗಳಿಂದಾಗಿ ವಂಚಿತರಾದ ದೇಶದ ಜನಕ್ಕೆ ಕಾನೂನಿನ ಮೂಲಕ ನ್ಯಾಯ ಒದಗಿಸುವುದು ಮುಖ್ಯ ಕೆಲಸ ಆಗಬೇಕಿದೆ. ಸಾಮಾಜಿಕ ಅಸಮಾನತೆಗೆ ನೂರಾರು ಕಾರಣ ನೀಡಬಹುದು ಆದರೆ ಕಾನೂನು ಒಂದು ಅಸ್ತ್ರವಾಗಿ, ಒಂದು ಸಾಧನವಾಗಿ ಬಳಸುವುದರ ಮೂಲಕ ಸಾಮಾಜಿಕ ಅಸಮಾನತೆಯನ್ನು ತೊಡೆದು ಹಾಕಬಹುದು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕೆ ಪುಟ್ಟಸ್ವಾಮಿಯವರ ನಿರಂತರ ಶ್ರಮದಿಂದ ಗುಂಡಪ್ಪ ಗೌಡ ಹಾಗೂ ಪಿ ಎಂ ಚಿಕ್ಕಬೋರಯ್ಯ ನೆರವಿನ ಫಲವಾಗಿ ವಿದ್ಯಾವರ್ಧಕ ಕಾನೂನು ಕಾಲೇಜು ಆರಂಭವಾಯಿತು. ನಾನು ಸಹ ಮೊದಲ ಬ್ಯಾಚಿನ ವಿದ್ಯಾರ್ಥಿ ಎಂದ ಅವರು, “ಈ ಹಿಂದೆಯಲ್ಲ ಕಾನೂನು ಶಿಕ್ಷಣ ಕೈಗೆಟಕುವ ರೀತಿಯಲ್ಲಿ ಇರಲಿಲ್ಲ. ನೆರೆ ರಾಜ್ಯಗಳಿಗೆ, ಉತ್ತರ ಭಾರತದ ಕಡೆಗೆ ತೆರಳಬೇಕಾದ ಪರಿಸ್ಥಿತಿ ಇತ್ತು ಆಗ ಇದನ್ನೆಲ್ಲ ಮನಗಂಡು ಹಿರಿಯರ ಶ್ರಮದ ಫಲ ಕಾನೂನಿನ ಅಭ್ಯಾಸಕ್ಕೆ ವೇದಿಕೆಯಾಯಿತು” ಎಂದು ತಿಳಿಸಿದರು.

WhatsApp Image 2024 08 14 at 11.05.12 AM 1

“ಕಾನೂನು ಶಿಕ್ಷಣವನ್ನು ಗಂಭೀರವಾಗಿ ತೆಗೆದುಕೊಂಡ ಹಾಗೆ, ಕಾನೂನು ವೃತ್ತಿಯನ್ನು ಗಂಭೀರವಾಗಿ ತೆಗೆದುಕೊಳ್ಳಿ. ಕಾನೂನು ಕೇವಲ ವ್ಯವಹಾರದಂತೆ ಆಗಬಾರದು. ನೊಂದವರಿಗೆ, ವಂಚಿತರಿಗೆ ನ್ಯಾಯ ಒದಗಿಸುವ ಅಸ್ತ್ರವಾಗಬೇಕು. ಯಾವುದೇ ರಾಜಕೀಯದ ದಾಳವಾಗಿ ಉರುಳದೆ, ಸಾಮಾಜಿಕ ಕಳಕಳಿಯ ಮೂಲವಾಗಬೇಕು. ಕಾಲುದಾರಿಯಲ್ಲಿ ನಡೆಯುವುದರ ಬದಲು ಹೆದ್ದಾರಿಯಲ್ಲಿ ನಡೆಯುವ ದಿಟ್ಟತನ ನಿಮ್ಮಲ್ಲಿರಬೇಕು ಎಂದು ನೆರೆದಿದ್ದ ವಿದ್ಯಾರ್ಥಿಗಳಿಗೆ ಪ್ರೊ ಎಂ ಕೆ ರಮೇಶ್ ಸಲಹೆ ನೀಡಿದರು.

ಇದನ್ನು ಓದಿದ್ದೀರಾ? ಶಿರೂರು ದುರಂತ | ಮತ್ತೆ ಕಾರ್ಯಾಚರಣೆ ಮುಂದುವರಿಸಿದ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ

ಕಾರ್ಯಕ್ರಮದಲ್ಲಿ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿ ಪಿ ವಿಶ್ವನಾಥ್, ಎಸ್ ಶಿವಲಿಂಗಯ್ಯ, ಪ್ರಾಂಶುಪಾಲ ಡಾ ಪಿ ದೀಪು, ಡಾ ಕೆ ಎಲ್ ಚಂದ್ರಶೇಖರ್ ಐಜೂರು, ಐ ಜಿ ಸ್ವಾತಿ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಭಾಗಿಯಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...