ಬೀದರ್‌ | ಕುಂದು ಕೊರತೆ : ಮೂಲ ಸೌಕರ್ಯ ಕಲ್ಪಿಸಿ, ಸ್ವಚ್ಛತೆಗೆ ಆದ್ಯತೆ ಕೊಡಿ

Date:

ಜಿಲ್ಲಾದ್ಯಂತ ಕಳೆದ ನಾಲ್ಕೈದು ದಿನಗಳಿಂದ ಸತತವಾಗಿ ಸುರಿಯುತ್ತಿರುವ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಜಿಲ್ಲೆಯ ಹಲವೆಡೆ ಮನೆಯ ಗೋಡೆಗಳು ಕುಸಿಯುತ್ತಿವೆ. ಇನ್ನು ಹಳ್ಳಿಗಳಲ್ಲಿ ಸೂಕ್ತ ಚರಂಡಿ, ಸಿಸಿ ರಸ್ತೆ ಸೇರಿದಂತೆ ಶುದ್ಧ ಕುಡಿಯುವ ನೀರಿನ ಸಮಸ್ಯೆ  ಎದುರಾಗಿದೆ.

ಈ ಬಗ್ಗೆ ಈದಿನ.ಕಾಮ್‌ ಬೀದರ್‌ ಸಹಾಯವಾಣಿ ನಂಬರ್‌ಗೆ ಕಳುಹಿಸಿದ ಸಾರ್ವಜನಿಕರ ಕುಂದು ಕೊರತೆ ಇಲ್ಲಿವೆ.

ಭಾಲ್ಕಿ : ಎರಡು ದಶಗಳಿಂದ ಸಿಸಿ ರಸ್ತೆ, ಚರಂಡಿ ಕಾಣದ ಓಣಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾಲೂಕಿನ ಗ್ರಾಮ ಪಂಚಾಯತ್‌ ಕೇಂದ್ರ ಸ್ಥಾನ ಹೊಂದಿರುವ ಬೀರಿ(ಬಿ) ಗ್ರಾಮದ ಎರಡನೇ ವಾರ್ಡ್‌ನ ಜನರು ಸೂಕ್ತ ರಸ್ತೆ, ಚರಂಡಿ ವ್ಯವಸ್ಥೆ ಇಲ್ಲದೇ ಪರದಾಡುತ್ತಿದ್ದಾರೆ.

ಗ್ರಾಮ ಪಂಚಾಯತ್‌ ಕಟ್ಟಡದ ಪಕ್ಕದಲ್ಲೇ ಇರುವ ಮರಾಠಾ ಬಡಾವಣೆಯಲ್ಲಿ ಕಳೆದ ಎರಡು ದಶಕಗಳ ಹಿಂದೆ ನಿರ್ಮಿಸಿದ ಸಿಸಿ ರಸ್ತೆ, ಚರಂಡಿ ಸಂಪೂರ್ಣ ಕಿತ್ತು ಹೋಗಿದೆ. ಹೀಗಾಗಿ ಮನೆಗಳಿಂದ ಬರುವ ಕೊಳಚೆ ನೀರು, ಮಳೆ ನೀರು ರಸ್ತೆ ಮೇಲೆಯೇ ಸಂಗ್ರಹವಾಗುತ್ತಿದೆ.

beeri b problem
ಭಾಲ್ಕಿ ತಾಲೂಕಿನ ಬೀರಿ(ಬಿ) ಗ್ರಾಮದ ವಾರ್ಡ್‌ 2ರಲ್ಲಿ ಅಸ್ವಚ್ಛತೆ

ಜೆಜೆಎಂ ಕಾಮಗಾರಿಗಾಗಿ ಅಗೆದ ತೆಗ್ಗು ಹಾಗೇ ಮುಚ್ಚಿದ್ದಾರೆ. ಇದರಿಂದ ಓಣಿಯ ಜನರು ಓಡಾಡಲು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ಮಧ್ಯೆ ನೀರು ಸಂಗ್ರಹವಾದ ಕಾರಣ ಜನರು ಮೂಗು ಮುಚ್ಚಿಕೊಂಡು ಓಡಾಡಬೇಕಾದ ಪರಿಸ್ಥಿತಿ ಇದೆ. ಜನರಿಗೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಕಾಡುತ್ತಿದೆ.

ʼಸಾರ್ವಜನಿಕರ ಹಿತದೃಷ್ಟಿಯಿಂದ ಗ್ರಾಮ ಪಂಚಾಯತ್‌ ಅಧಿಕಾರಿಗಳು ತಕ್ಷಣವೇ ಎಚ್ಚೆತುಕೊಂಡು 2ನೇ ವಾರ್ಡ್ ನಲ್ಲಿ ರಸ್ತೆ, ಚರಂಡಿ ಸ್ವಚ್ಛಗೊಳಿಸಲು ಮುಂದಾಗಬೇಕು. ಹೊಸ ಸಿಸಿ ರಸ್ತೆ, ಚರಂಡಿ ನಿರ್ಮಿಸಲು ಯೋಜನೆ ರೂಪಿಸಬೇಕು ʼ ಎಂದು ಓಣಿಯ ನಿವಾಸಿ ಜೀವನ ಬಿರಾದರ್‌ ಆಗ್ರಹಿಸಿದ್ದಾರೆ.

ಬೀದರ್‌ : ಗೋರನಳ್ಳಿ(ಬಿ) ಗ್ರಾಮದಲ್ಲಿ ಸ್ವಚ್ಛತೆ ಕಾಪಾಡಿ

ಬೀದರ ತಾಲೂಕಿನ ಅಮಲಾಪುರ ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಡುವ ಗೋರನಳ್ಳಿ (ಬಿ) ಗ್ರಾಮದ ಚರ್ಚ್ ಪಕ್ಕದ ಓಣಿಯಲ್ಲಿ ಸಮರ್ಪಕ ರಸ್ತೆ, ಚರಂಡಿ ಇಲ್ಲದೆ ಮನೆಗಳ ಹೊಲಸು ನೀರು ರಸ್ತೆ ಮೇಲೆ ಹರಿದು ದುರ್ನಾತ ಬೀರುತ್ತಿದೆ.

ಸ್ವಲ್ಪ ಮಳೆಯಾದರೆ ಸಾಕು ರಸ್ತೆ ಕೆಸರು ಗದ್ದೆಯಂತಾಗುತ್ತಿದೆ. ಇದರಿಂದ ಪುಟ್ಟ ಮಕ್ಕಳು, ವೃದ್ಧರಿಗೆ ಓಡಾಡಲು ತುಂಬಾ ತೊಂದರೆ ಆಗುತ್ತಿದೆ.

ಗೋರನಳ್ಳಿ(ಬಿ)
ಬೀದರ್‌ ತಾಲೂಕಿನ ಗೋರನಳ್ಳಿ(ಬಿ) ಗ್ರಾಮದಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದೆ.

ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳು ಎಚ್ಚೆತ್ತು ಈ ಓಣಿಯ ಜನರಿಗೆ ಮೂಲ ಸೌಕರ್ಯ ಕಲ್ಪಿಸಿ ಸ್ಚಚ್ಛತೆಗೆ ಹೆಚ್ಚಿನ ಆದ್ಯತೆ ನೀಡಲು ಮುಂದಾಗಬೇಕು ಎಂದು ಸ್ಥಳೀಯ ನಿವಾಸಿಗಳು ಮನವಿ ಮಾಡಿದ್ದಾರೆ.

ಕಮಲನಗರ : ಕೆಸರು ಗದ್ದೆಯಂತಾದ ರಸ್ತೆ; ಪರದಾಟ

ಸತತವಾಗಿ ಸುರಿಯುತ್ತಿರುವ ಮಳೆಗೆ ಕಮಲನಗರ ತಾಲೂಕಿನ ಡಿಗ್ಗಿ ಗ್ರಾಮದ ಪರಿಶಿಷ್ಟ ಜಾತಿಯ ಓಣಿಯ ರಸ್ತೆ ಕೆಸರಿನ ಗದ್ದೆಯಂತಾಗಿದೆ.

ಗ್ರಾಮ ಪಂಚಾಯಿತಿ ಕೇಂದ್ರ ಸ್ಥಾನವಾಗಿದ್ದರೂ ಜನರಿಗೆ ಸೂಕ್ತ ರಸ್ತೆ, ಚರಂಡಿ ಸೇರಿ ಮೂಲ ಸೌಕರ್ಯ ವ್ಯವಸ್ಥೆ ಕಲ್ಪಿಸುವಲ್ಲಿ ಗ್ರಾಮಾಡಳಿತ ವಿಫಲವಾಗಿದೆ. ಇದರಿಂದ ಸ್ಥಳೀಯ ಶಾಲಾ ಮಕ್ಕಳು, ಓಣಿಯ ನಿವಾಸಿಗಳ ಓಡಾಡಕ್ಕೆ ಸಮಸ್ಯೆ ಆಗುತ್ತಿದೆ.

ಡಿಗ್ಗಿ ಗ್ರಾಮದಲ್ಲಿ ರಸ್ತೆ ಸಮಸ್ಯೆ
ಡಿಗ್ಗಿ ಗ್ರಾಮದ ದಲಿತ ಓಣಿಯಲ್ಲಿ ಕೆಸರು ಗದ್ದೆಯಂತಾದ ರಸ್ತೆ

ಈ ಬಗ್ಗೆ ಗ್ರಾಮ ಪಂಚಾಯತ್ ಅಧಿಕಾರಿಗಳು, ಜನಪ್ರತಿನಿಧಿಗಳು ಕೂಡಲೇ ಎಚ್ಚೆತ್ತುಕೊಂಡು ರಸ್ತೆ ದುರಸ್ತಿಗೊಳಿಸಿ ಸ್ವಚ್ಛತೆ ಕಾಪಾಡಬೇಕು ಎಂದು ಸ್ಥಳೀಯ ನಿವಾಸಿ ವಕೀಲರಾದ ಕಿರಣಕುಮಾರ್ ಆಗ್ರಹಿಸಿದ್ದಾರೆ.

ಔರಾದ್‌ : ಹೊಲಕ್ಕೆ ಹೋಗುವ ದಾರಿ ಯಾವುದಯ್ಯ?

ಔರಾದ ತಾಲೂಕಿನ ಗಡಿಕುಶನೂರ ಗ್ರಾಮದಿಂದ ಕೌಠಾ(ಬಿ) ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಕಚ್ಚಾ ರಸ್ತೆ ಭಾರೀ ಮಳೆಯಿಂದಾಗಿ ಕೆಸರು ಗದ್ದೆಯಾಗಿದೆ. ಎರಡೂ ಗ್ರಾಮದ ರೈತರು , ಕೃಷಿ ಕಾರ್ಮಿಕರು ಮಳೆ ಬಂದರೆ ಸಾಕು ಜಮೀನಿಗೆ ಹೋಗಲು ಪರದಾಡುತ್ತಿದ್ದಾರೆ.

WhatsApp Image 2024 07 23 at 12.56.07 PM
ಗಡಿಕುಶನೂರು ಗ್ರಾಮದ ರೈತರು ಹೊಲಗಳಿಗೆ ಹೋಗುವ ದಾರಿಯಲ್ಲಿ ಕೆಸರೇ ಕೆಸರು

ಹಿಂದಿನಿಂದಲೂ ಗ್ರಾಮಸ್ಥರು ಎತ್ತಿನ ಬಂಡಿ, ಟ್ರಾಕ್ಟರ್ ಸೇರಿದಂತೆ ರೈತರ ಓಡಾಟಕ್ಕೆ ಇದೊಂದೇ ದಾರಿಯಿದೆ. ಆದರೆ, ಒಮ್ಮೆಯೂ ಡಾಂಬರು ಕಾಣದ ಕಾರಣಕ್ಕೆ ರಸ್ತೆಯಲ್ಲಿ ಮೊಳಕಾಲುದ್ದ ಕೆಸರು ಸಂಗ್ರಹವಾದ ಪರಿಣಾಮ ರೈತರು ಹೊಲಗಳಿಗೆ ತೆರಳಲು ಹೈರಾಣಾಗುತ್ತಿದ್ದಾರೆ.

ಹೊಲದ ಹಾದಿ ದುರಸ್ತಿ ಬಗ್ಗೆ ಸ್ಥಳೀಯ ಶಾಸಕರಿಗೆ ಗಡಿಕುಶನೂರು ಗ್ರಾಮಸ್ಥರು ಮನವಿ ಮಾಡಿದರೂ ಅನುದಾನದ ಕೊರತೆಯ ನೆಪವೊಡ್ಡಿ ನಿರ್ಲಕ್ಷಿಸಿದ್ದಾರೆ ಎಂದು ಗ್ರಾಮದ ರೈತ ಜಗದೀಶ್ವರ ಬಿರಾದಾರ್ ಹೇಳುತ್ತಾರೆ.

– ನಿಮ್ಮ ಊರು, ನಗರ, ಪಟ್ಟಣದ ಕುಂದು ಕೊರತೆಗಳ ಪೋಟೋ, ವಿಡಿಯೋ ಮಾಹಿತಿಯನ್ನು
ಈದಿನ.ಕಾಮ್ ನ್ಯೂಸ್ ಬೀದರ್ ಸಹಾಯವಾಣಿ 9035053805 ವಾಟ್ಸಪ್ ನಂಬರ್‌ಗೆ ಕಳುಹಿಸಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಔರಾದ್‌ | ಅಪ್ಪಟ ದೇಶಪ್ರೇಮಿ ಶಾಹೀದ್ ಭಗತ್ ಸಿಂಗ್

ಭಾರತದ ಸ್ವಾತಂತ್ರ್ಯಕ್ಕಾಗಿ ಬ್ರಿಟಿಷರ ನಿದ್ದೆಗೆಡಿಸಿದ ಸಿಂಹಾಳಿಯಂತೆ ಗರ್ಜಿಸಿ ಭಾರತದ ಹಿರಿಮೆ ಗರಿಮೆಯನ್ನು...

ಬೀದರ್‌ | ಕಾರಂಜಾ ಸಂತ್ರಸ್ತರಿಗೆ ಕಾಲಮಿತಿಯಲ್ಲಿ ವಿಶೇಷ ಪ್ಯಾಕೇಜ್ ಘೋಷಿಸಿ

ಕಾರಂಜಾ ಸಂತ್ರಸ್ತರ ಸಮಸ್ಯೆ ಕುರಿತು ದಶಕಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರಕ್ಕೂ ಈ...

ಬೀದರ್‌ನಲ್ಲಿ ಮಾ.25ರಂದು ಉದ್ಯೋಗ ಮೇಳ

ಬೀದರ್ ನಗರದ ನೌಬಾದ್‍ನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಿಲ್ಲಾ ಉದ್ಯೋಗ...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...