ಕಲಬುರಗಿ ಗ್ರಾಮಾಂತರ ಕ್ಷೇತ್ರದಲ್ಲಿ ಹೆಸರಿಗಷ್ಟೇ ಇವೆ ಶುದ್ಧ ನೀರಿನ ಘಟಕಗಳು

Date:

ಕಲ್ಯಾಣ ಕರ್ನಾಟಕ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಯಿಂದ ಜನರು ತತ್ತರಿಸಿಹೋಗಿದ್ದಾರೆ. ಕಲುಷಿತ ನೀರು ಕುಡಿದು ಹಲವಾರು ಮಂದಿ ಸಾವನ್ನಪ್ಪಿದ್ದಾರೆ. ಆಸ್ಪತ್ರೆ ಸೇರಿದ್ದಾರೆ. ಕಲುಷಿತ ನೀರಿನಿಂದ ಸಂಭವಿಸಿದ ಪ್ರಕರಣಗಳಿಂದಾಗಿ ಈ ಭಾಗದ ಜನರು ನೀರು ಕುಡಿಯುವುದಕ್ಕೂ ಭಯ ಪಡುವ ಸನ್ನಿವೇಶವನ್ನು ಸೃಷ್ಟಿಸಿವೆ. ಕುಡಿಯುವ ನೀರಿನ ಸಮಸ್ಯೆ ಜನರನ್ನು ಬಾಧಿಸುತ್ತಿದ್ದರೂ, ಇಲ್ಲಿನ ಅಧಿಕಾರಿಗಳು, ಜನಪ್ರತಿನಿಧಿಗಳು ಕಣ್ಣು-ಕಿವಿ ಮುಚ್ಚಿ ಕುಳಿತಿದ್ದಾರೆ. ಆಳುವವರ ನಿರ್ಲಕ್ಷ್ಯತನವನ್ನು ಬಿಜೆಪಿ ಶಾಸಕ ಬಸವರಾಜ್ ಮತ್ತಿಮುಡ್ ಪ್ರತಿನಿಧಿಸುವ ಕಲಬುರಗಿ ಗ್ರಾಮಾಂತರ ಕ್ಷೇತ್ರದ ಹಳ್ಳಿಗಳು ಎತ್ತಿ ತೋರಿಸುತ್ತಿವೆ.

ಕಲುಷಿತ ನೀರಿನಿಂದಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಲು ಕಲಬುರಗಿ ಗ್ರಾಮೀಣ ಕ್ಷೇತ್ರದ ಪತ್ರಿ ಹಳ್ಳಿಗಳಲ್ಲೂ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ನಿರ್ಮಾಣ ಮಾಡಲಾಗಿದೆ. ಅವುಗಳನ್ನು ಶಾಸಕರು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಭಾರೀ ಹುಮ್ಮಸ್ಸಿನಿಂದ ಉದ್ಘಾಟನೆಯನ್ನೂ ಮಾಡಿದ್ದರು. ಆದರೆ, ಉದ್ಘಾಟನೆಯಾಗಿದ್ದೇ ಭಾಗ್ಯವೆಂಬಂತೆ, ಅವುಗಳು ಅಂದಿನಿಂದ ಇಂದಿನವರೆಗೂ ಕಾರ್ಯಾಚರಣೆ ಆರಂಭಿಸಿಲ್ಲ. ಅವುಗಳಿಂದ ಶುದ್ಧ ಕುಡಿಯುವ ನೀರನ್ನು ಸ್ಥಳೀಯರು ಪಡೆಯಲೂ, ಕುಡಿಯಲೂ ಸಾಧ್ಯವಾಗಿಲ್ಲ.

ಅಲ್ಲದೆ, ಕ್ಷೇತ್ರದ ಹಲವಾರು ಹಳ್ಳಿಗಳಲ್ಲಿ ಶುದ್ಧ ನೀರಿನ ಘಟಕವನ್ನೂ ನಿರ್ಮಾಣ ಮಾಡಿಲ್ಲ. ಕ್ಷೇತ್ರದ ಸಿದ್ದೇಶ್ವರ ಬಡಾವಣೆ, ಕುಸುನೂರ್ ತಾಂಡಾ, ನಂದೂರ್ ತಾಂಡಾ ಕಿಣ್ಣಿ ಸಡಕ್, ಕುದಮುಡ್, ಕಟ್ಟಳ್ಳಿ, ಹಾರಕಂಚಿ, ಬಬಲಾದ್, ಓಕಳಿ, ಜಂಬಗಾ ಹಳ್ಳಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳೇ ಇಲ್ಲ. ಇಲ್ಲಿಯ ಜನರು ಶುದ್ಧ ಕುಡಿಯುವ ನೀರಿನ ಘಟಕಕ್ಕಾಗಿ ಕಾಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಘಟಕಗಳು ಇರುವ ಹಳ್ಳಿಗಳ ಪೈಕಿ, ನಂದೂರ್, ಕುಸುನೂರು, ಗಣಜಲಖೇಡ ಗ್ರಾಮಗಳಲ್ಲಿ ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದು, ಅವುಗಳು ಬಳಕೆಗೆ ಬಾರದ ಸ್ಥಿತಿಯಲ್ಲಿವೆ.

ಹಲವೆಡೆ, ನೀರಿನ ಘಟಕಗಳ ಸುತ್ತಮುತ್ತ ಕಸ-ಕಡ್ಡಿ ತುಂಬಿಕೊಂಡಿದೆ. ಕೊಳಚೆ ನೀರು ನಿಂತು ಗಬ್ಬು ನಾರುತ್ತಿದೆ. ಆ ಕೊಳಚೆಯ ನಡುವೆಯೇ ನೀರು ತುಂಬಬೇಕಾದ ಅನಿವಾರ್ಯತೆ ಇದೆ. ಮಹಾಗಾಂವ, ನಂದೂರ್, ಕುಸುನೂರು ಗ್ರಾಮಗಳಲ್ಲಿ ಜನಸಂಖ್ಯೆ ಜಾಸ್ತಿ ಇದ್ದು, ಘಟಕವು 2 ಕಿ.ಮೀ ದೂರದಲ್ಲಿದೆ. ಅಷ್ಟು ದೂರ ಹೋಗಿ ನೀರು ತರುವುದು ಕಷ್ಟವೆಂದು ಅಲ್ಲಿನ ಗ್ರಾಮಸ್ಥರು ಹೇಳುತ್ತಿದ್ದಾರೆ.

ಮಳೆಗಾಲದಲ್ಲಿ ನೀರು ಕಲುಷಿತಗೊಂಡು ಕುಡಿಯಲು ಯೋಗ್ಯವಾಗಿರುವುದಿಲ್ಲ. ಇದರಿಂದ ಜನರ ಆರೋಗ್ಯದಲ್ಲಿ ಸಮಸ್ಯೆ ಉಂಟಾಗುತ್ತವೆ. ಕಲುಷಿತ ನೀರು ಸೇವಿಸುವುದರಿಂದ ವಾತಿಭೇದಿ ಕಾಣಿಸಿಕೊಂಡು, ಸಾವು-ನೋವುಗಳಾಗುತ್ತಿವೆ. ಇಷ್ಟೆಲ್ಲ ನಮ್ಮ ಕಣ್ಣೆದುರೇ ನಡೆಯುತ್ತಿದೆ. ಕುಡಿಯಲು ಶುದ್ಧ ಕುಡಿಯುವ ನೀರು ಒದಗಿಸುವುದು ಆಳುವವರ ಕರ್ತವ್ಯ ಅಲ್ಲವೇ ಎಂದು ಕ್ಷೇತ್ರದ ಜನರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀರಿನ ಸಮಸ್ಯೆ ಬಗ್ಗೆ ಈದಿನ.ಕಾಮ್ ಜೊತೆ ಮಾತನಾಡಿದ ಸಿದ್ದೇಶ್ವರ ಬಡಾವಣೆ ಗ್ರಾಮ ಪಂಚಾಯತಿ ಸದಸ್ಯ ಅಂಬರಾಯ, “ಕುಡಿಯುವ ನೀರಿನ ಘಟಕ ನಿರ್ಮಾಣದ ಬಗ್ಗೆ ಈ ಹಿಂದೆಯೇ ಶಾಸಕರ ಗಮನಕ್ಕೆ ತಂದಿದ್ದೇನೆ. ಈಗಲೂ ಮತ್ತೊಮ್ಮೆ ಶಾಸಕರಿಗೆ ಮನವಿ ಸಲ್ಲಿಸಿ, ಘಟಕ ನಿರ್ಮಾಣ ಮಾಡುವಂತೆ ಕೇಳುತ್ತೇನೆ” ಎಂದು ಹೇಳಿದ್ದಾರೆ.

ಮಾಜಿ ಗ್ರಾಮ ಪಂಚಾಯತ್ ಸದಸ್ಯರು ವಿಜಯಕುಮಾರ ರಾವುರ್ ಮಾತನಾಡಿ, “ಸಿದ್ದೇಶ್ವರ ಬಡಾವಣೆಯಲ್ಲಿ ಹಲವು ಮೂಲಭೂತ ಸೌಕರ್ಯಗಳು ಕೊರತೆ ಇವೆ. ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ಮುಖ್ಯವಾಗಿ, ಶುದ್ಧ ಕುಡಿಯುವ ನೀರು ದೊರೆಯುವಂತೆ ವ್ಯವಸ್ಥೆ ಮಾಡಬೇಕು” ಎಂದು ಒತ್ತಾಯಿಸಿದ್ದಾರೆ.

ಕ್ಷೇತ್ರದ ಶಾಸಕ ಬಸವರಾಜ್ ಮತ್ತಿಮುಡ್ ಅವರನ್ನು ಈದಿನ.ಕಾಮ್ ಫೋನ್ ಮೂಲಕ ಸಂಪರ್ಕಿಸಲು ಯತ್ನಿಸಿದ್ದು, ಅವರು ಸಂಪರ್ಕಕ್ಕೆ ಸಿಗಲಿಲ್ಲ.

ಪೋಸ್ಟ್ ಹಂಚಿಕೊಳ್ಳಿ:

ಗೀತಾ ಹೊಸಮನಿ
ಗೀತಾ ಹೊಸಮನಿ
ಯಾದಗಿರಿ, ಕಲಬುರಗಿ ಜಿಲ್ಲಾ ಸಂಯೋಜಕರು, NCCಯಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಚಿನ್ನದ ಪದಕ(NRAI ಫೈರಿಂಗ್ ವಿಭಾಗ) ವಿಜೇತೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...