ಪುತ್ತೂರು | ಬಿಜೆಪಿ ಮುಖಂಡನ‌ ಪುತ್ರನಿಂದ ವಿದ್ಯಾರ್ಥಿನಿ ತಾಯಿಯಾದ ಪ್ರಕರಣ: ಸಂತ್ರಸ್ತೆಯ ಪರ ನಿಂತ ವಿಶ್ವಕರ್ಮ ಸಮಾಜ

Date:

ಮದುವೆಯಾಗುವುದಾಗಿ ನಂಬಿಸಿ ವಿದ್ಯಾರ್ಥಿನಿಯನ್ನು ಪುತ್ತೂರು ಬಿಜೆಪಿ ಮುಖಂಡನ ಪುತ್ರನೋರ್ವ ತಾಯಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಬೆಳವಣಿಗೆ ನಡೆದಿದ್ದು, ಸಂತ್ರಸ್ತೆಯ ವಿದ್ಯಾರ್ಥಿನಿಯ ಪರ ವಿಶ್ವಕರ್ಮ ಸಮಾಜ ನಿಲ್ಲಲು ನಿರ್ಧರಿಸಿದೆ.

ವಿದ್ಯಾರ್ಥಿನಿಯನ್ನು ಗರ್ಭವತಿಯನ್ನಾಗಿಸಿ ಬಿಜೆಪಿ ಮುಖಂಡನ ಪುತ್ರ ಸದ್ಯ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ ಪ್ರಕರಣದ ಸಂತ್ರಸ್ತೆಗೆ ನ್ಯಾಯ ದೊರಕಿಸಿಕೊಡುವ ಕುರಿತು ವಿಶ್ವಕರ್ಮ ಒಕ್ಕೂಟದ ನೇತೃತ್ವದಲ್ಲಿ ಸಮಾಜದ ತುರ್ತು ಸಭೆಯು ಜು.2ರಂದು ಪುತ್ತೂರು ತಾಲೂಕಿನ ಕರ್ಮಲ ವಿಶ್ವಕರ್ಮ ಸಮಾಜ ಸೇವಾ ಸಭಾಂಗಣದಲ್ಲಿ ನಡೆಯಿತು.

ಸಭೆಯಲ್ಲಿ ಸಮಾಜಬಾಂಧವರ ಅಭಿಪ್ರಾಯ ಪಡೆದು ಮುಂದೆ ಸಂತ್ರಸ್ತೆಯನ್ನು ಭೇಟಿ ಮಾಡಿ ಅಲ್ಲಿಂದ ಮಹಿಳಾ ಪೊಲೀಸ್‌ ಠಾಣೆ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಎಸ್‌ಪಿಯವರಿಗೆ ಮನವಿ ನೀಡಿ ಒಂದೆರಡು ದಿನದಲ್ಲಿ ಯಾವುದೇ ಬೆಳವಣಿಗೆ ಕಂಡು ಬಾರದಿದ್ದಲ್ಲಿ ಸಮಾಜ ಬಾಂಧವರನ್ನು ಒಂದುಗೂಡಿಸಿ ಪ್ರತಿಭಟನೆ ನಡೆಸುವುದಾಗಿ ನಿರ್ಣಯಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಭೆಯಲ್ಲಿ ವಿಶ್ವಕರ್ಮ ದಕ್ಷಿಣ ಕನ್ನಡ ಜಿಲ್ಲಾ ಒಕ್ಕೂಟದ ಅಧ್ಯಕ್ಷ ಮಧು ಆಚಾರ್ಯ ಅವರು ಮಾತನಾಡಿ, “ಇವತ್ತು ನಮ್ಮ ಸಮಾಜ ಹೆಣ್ಣು ಮಗಳಿಗೆ ಅನ್ಯಾಯ ಆಗಿದೆ. ಸಂತ್ರಸ್ತೆ ಮತ್ತು ತಾಯಿ ನಮ್ಮಲ್ಲಿ ಬಂದಿಲ್ಲ ಎಂಬ ವಿಷಯ ಬೇಡ. ಒಗ್ಗಟ್ಟು ಹಾಗೆ ಹೀಗೆ ಹೇಳುವಾಗ ನಮ್ಮ ಹಿಂದೂ ಮಗಳಿಗೆ ಅನ್ಯಾಯ ಆದಾಗ ಸುಮ್ಮನೆ ಕೂತುಕೊಳ್ಳಲಾಗುವುದಿಲ್ಲ. ನಮ್ಮ ಸಮುದಾಯವೇ ಆಗಲಿ ಇನ್ನೊಂದು ಸುಮದಾಯವೇ ಆಗಲಿ ಅದು ಸಣ್ಣ ವಿಷಯವಲ್ಲ. ವಿಶ್ವಕರ್ಮ ಸಮಾಜದವರು ಅಂದ್ರೆ ಅಷ್ಟೊಂದು ಕೀಳು ಭಾವನೆ ಏಕೆ?” ಎಂದು ಪ್ರಶ್ನಿಸಿದರು.

“ಬಿಜೆಪಿ ಮುಖಂಡನ ಮಗ ನಮ್ಮ ಸಮಾಜದ ಹೆಣ್ಣು ಮಗಳಿಗೆ ಅನ್ಯಾಯ ಮಾಡಿದ್ದಾನೆ. ಈ ಕುರಿತು ನಾವು ಮೊದಲು ಆಕೆಯ ಮನೆಗೆ ಹೋಗಿ ಮಾತನಾಡಿ ಬಳಿಕ ಎಸ್ಪಿಗೆ ಮನವಿ ಕೊಡುವುದು. ಆ ಬಳಿಕ ಪೊಲೀಸರು ಕ್ರಮ ಸರಿಯಾಗಿ ಕೈಗೊಳ್ಳದಿದ್ದಲ್ಲಿ ನಾವು ಅನ್ಯಾಯ ಮಾಡಿದ ಯುವಕನ ಮನೆ ಮುಂದೆ ಮತ್ತು ಪೊಲೀಸ್ ಠಾಣೆ ಮುಂದೆ ಉಗ್ರ ಪ್ರತಿಭಟನೆ ಮಾಡಲಿದ್ದೇವೆ” ಎಂದರು.

“ಶಾಸಕರೇ ಕುದ್ದು ನಿಂತು ಮದುವೆ ಮಾಡಿಸಲಿ”

ಸಂತ್ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಶಾಸಕರ ಮನವಿಯಂತೆ ಮದುವೆ ಮಾತುಕತೆ ಮತ್ತು ಮುಚ್ಚಳಿಕೆಯನ್ನು ಆರೋಪಿಯ ತಂದೆ ಕೊಟ್ಟಿದ್ದಾರೆ. ಆ ಬಳಿಕ ಹುಡುಗ ಮದುವೆಯಾಗಲು ಒಪ್ಪದೆ ಮೋಸ ಮಾಡಿದ್ದಾನೆ. ಈಗ ಶಾಸಕರೇ ಖುದ್ದು ನಿಂತು ಅವರಿಗೆ ಮದುವೆ ಮಾಡಿ ಕೊಡಬೇಕು. ಯಾಕೆಂದರೆ ಅವರು ಈಗಾಗಲೇ ಈ ಪ್ರಕರಣಕ್ಕೆ ಎಂಟ್ರಿ ಆಗಿದ್ದಾರೆ. ನಾವು ಈಗ ಶಾಸಕರಲ್ಲಿ ಹೋಗಿ ಮನವಿ ಕೊಡಬೇಕಾಗಿದೆ. ಮಾಡಿಲ್ಲ ಎಂದರೆ ಮುಂದೆ ವಿಶ್ವಕರ್ಮದವರು ಸಂತ್ರಸ್ತೆಗೆ ನ್ಯಾಯ ಕೊಡುವ ತನಕ ಹೋರಾಟ ಮಾಡಬೇಕಾಗಿದೆ ಎಂದು ಮಧು ಆಚಾರ್ಯ ಹೇಳಿದರು.

ಹೆಣ್ಣಿಗೆ ಅನ್ಯಾಯ ಆಗಿದ್ದರೂ ಸಂಘಪರಿವಾರ, ಹಿಂದೂ ಮುಖಂಡರು ಮೌನ

ರಾಜಕೀಯ ಪಕ್ಷದಲ್ಲಿ ನಮ್ಮ ಸಮಾಜದವರಿಗೆ ಯಾವ ಸೀಟ್ ಕೊಡುವುದಿಲ್ಲ. ನಮಗೆ ದೊಡ್ಡ ಅನ್ಯಾಯ ಆಗಿದೆ. ಸಂತ್ರಸ್ತೆಯ ಕುರಿತು ನಮ್ಮವರಲ್ಲಿ ವಿಚಾರಿಸಿದರೆ ಯಾರೋ ಎನೋ ಆಗಿದೆ ಎಂದು ಹೇಳಿದವರೂ ಇದ್ದಾರೆ. ಆರೋಪಿಯ ತಂದೆ ಬಿಜೆಪಿ ಮುಖಂಡರಾಗಿರಬಹುದು, ಜ್ಯೋತಿಷಿ ಆಗಿರಬಹುದು, ದೇವಸ್ಥಾನದಲ್ಲಿ ಇರಬಹುದು. ನಾವೆಲ್ಲ ಒಗ್ಗಟ್ಟಿನಲ್ಲಿರಬೇಕು. ನಮ್ಮಲ್ಲಿ ಅದು ಇದು ಇಲ್ಲ. ಹೆಣ್ಣಿಗೆ ಅನ್ಯಾಯ ಆದ್ರೂ ಸಂಘಪರಿವಾರ, ಹಿಂದೂ ಮುಖಂಡರು ಮೌನ ವಹಿಸಿರುವುದು ಯಾಕೆ ಎಂದು ಮಧು ಆಚಾರ್ಯ ಪ್ರಶ್ನಿಸಿದ್ದಾರೆ.

ನಮ್ಮಲ್ಲಿ ಅದು ಇದು ಇಲ್ಲ. ನಾವೆಲ್ಲ ಒಂದು. ನಮ್ಮ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯ ಆಗಲು ನಮ್ಮ ಒಕ್ಕೂಟ ಬಿಡುವುದಿಲ್ಲ. ನಮಗೆ ಯಾರನ್ನು ಗೆಲ್ಲಿಸಲಾಗದಿದ್ದರೂ ಸೋಲಿಸಲಂತು ಖಂಡಿತಾ ಆಗುತ್ತದೆ ಎಂದು ಮಧು ಆಚಾರ್ಯ ಹೇಳಿದರು.

ಇದನ್ನು ಓದಿದ್ದೀರಾ? ಪುತ್ತೂರಿನಲ್ಲೊಂದು ʼಲವ್‌ ಸೆಕ್ಸ್ ದೋಖಾʼ ಪ್ರಕರಣ; ಹಿಂದುತ್ವದ ಹುಲಿಗಳು ಈಗ ಎಲ್ಲಿ ಅವಿತಿದ್ದಾರೆ?

ಸಭೆಯಲ್ಲಿ ಅವಿಭಜಿತ ದ.ಕ ಜಿಲ್ಲಾ ವಿಶ್ವಕರ್ಮ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಮುರಳೀಧರ ಆಚಾರ್ಯ, ಉಪಾಧ್ಯಕ್ಷ ಅಲೆವೂರು ಯೋಗೀಶ್ ಆಚಾರ್ಯ, ಹರ್ಷವರ್ದನ್ ನಿಟ್ಟೆ, ಜಯರಾಮ ಆಚಾರ್ಯ ಸಾಲಿಗ್ರಾಮ, ಜಯರಾಮ ಆಚಾರ್ಯ ಕುಳಾಯಿ, ಜಿಲ್ಲಾ ವಿಶ್ವಕರ್ಮ ಹಿತರಕ್ಷಣಾ ಸಂಘದ ಗೌರವಾಧ್ಯಕ್ಷ ಜನಾರ್ಧನ ಆಚಾರ್ಯ ಕಾಣಿಯೂರು, ವಿಶ್ವಕರ್ಮ ಬೀರಮಲೆ ಅಧ್ಯಕ್ಷ ಗಂಗಾದರ ಆಚಾರ್ಯ, ಮಹಿಳಾ ಸಂಘದ ಅಧ್ಯಕ್ಷೆ ಇಂದಿರಾ ಪುರುಷೋತ್ತಮ ಆಚಾರ್ಯ, ವಿಶ್ವ ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷ ಶ್ರೀಧರ ಆಚಾರ್ಯ, ಪುರಸಭೆ ಮಾಜಿ ಸದಸ್ಯ ಉದಯ ಆಚಾರ್ಯ ಸಹಿತ ಹಲವಾರು ಮಂದಿ ಸಭೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...