ಪುತ್ತೂರು | ತಿರಸ್ಕೃತಗೊಂಡ 8420 ಕಡತಗಳ ಮರುಪರಿಶೀಲನೆಗೆ ಶಾಸಕ ಅಶೋಕ್‌ ರೈ ಮನವಿ; ಕಂದಾಯ ಸಚಿವರಿಂದ ಭರವಸೆ

Date:

ಪುತ್ತೂರು ತಾಲೂಕಿನಲ್ಲಿ ತಿರಸ್ಕೃತಗೊಂಡ ಸುಮಾರು 8420 ’94 ಸಿ’ ಮತ್ತು ’94 ಸಿಸಿ’ ಕಡತಗಳನ್ನು ಮರುಪರಿಶೀಲಿಸಿ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವಂತೆ ಶಾಸಕ ಅಶೋಕ್ ರೈ ಅವರು ಬುಧವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ಸಚಿವ ಕೃಷ್ಣ ಬೈರೇಗೌಡ ಅವರು ಈ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಸಚಿವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಅವರು, “ಹಿಂದಿನ ದಿನಗಳಲ್ಲಿ ಸರಿಯಾದ ಪರಿಶೀಲನೆ ಇಲ್ಲದೆ ಕಡತಗಳನ್ನು ತಿರಸ್ಕರಿಸಲಾಗಿದೆ. ಈಗ ಆ ಅರ್ಜಿದಾರರ ಬಹುತೇಕರು ಮನೆಗಳನ್ನು ನಿರ್ಮಿಸಿಕೊಂಡು ವಾಸವಿದ್ದು, ಎಲ್ಲ ದಾಖಲೆಗಳನ್ನೂ ಹೊಂದಿದ್ದಾರೆ. ಆದರೆ ಹಕ್ಕುಪತ್ರ ಇಲ್ಲದಿರುವುದರಿಂದ ಸರ್ಕಾರದಿಂದ ಸಿಗುವ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

ಆನಡ್ಕ ಹಾಲು ಉತ್ಪಾದಕರ ಸಂಘಕ್ಕೆ ಜಮೀನು ಮಂಜೂರಾತಿ ಶಿಫಾರಸು: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಂತಿಗೋಡು ಗ್ರಾಮದ ಆನಡ್ಕ ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘಕ್ಕೆ ಕಟ್ಟಡ ನಿರ್ಮಾಣಕ್ಕಾಗಿ 0.15 ಸೆಂಟ್ಸ್ ನಿವೇಶನ ಮಂಜೂರಾತಿ ನೀಡಬೇಕು. ಹಲವಾರು ವರ್ಷಗಳಿಂದ ಖಾಸಗಿ ಕಟ್ಟಡದಲ್ಲಿ ವ್ಯವಹಾರ ನಡೆಸುತ್ತಿರುವ ಈ ಸಂಘಕ್ಕೆ ಯಾವುದೇ ಸ್ಥಿರಾಸ್ತಿ ಇಲ್ಲ. ಪುತ್ತೂರು ತಾಲೂಕು ನರಿಮೊಗ್ರು ಗ್ರಾಮ ಪಂಚಾಯತ್ ವ್ಯಾಪ್ತಿಯ ಸ.ನಂ: 249/1ಪಿಯಲ್ಲಿನ ಭೂಮಿಯನ್ನು ಸಂಘಕ್ಕೆ ನೀಡಬೇಕೆಂದು ಶಾಸಕ ಅಶೋಕ್‌ ರೈ ಮನವಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: Breaking News | ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು!

15 ದಿನಗಳಲ್ಲಿ ಭೂಮಾಪಕರ ಬಾಕಿ ವೇತನ ಪಾವತಿಗೆ ಸೂಚನೆ: ಪುತ್ತೂರು ತಾಲೂಕಿನಲ್ಲಿ ದರ್ಖಸ್ತು ಪ್ರಕರಣಗಳ ಸರ್ವೇ ಕಾರ್ಯಕ್ಕಾಗಿ ನಿಯೋಜಿಸಲಾದ ಸುಮಾರು 40 ಲೈಸೆನ್ಸ್‌ಡ್ ಸರ್ವೇಯರ್‌ಗಳಿಗೆ ಮಾರ್ಚ್ 2025ರಿಂದ ಬಾಕಿ ಉಳಿದ ವೇತನವನ್ನು 15 ದಿನಗಳಲ್ಲಿ ಪಾವತಿಸುವಂತೆ ಕಂದಾಯ ಸಚಿವ ಕೃಷ್ಣಬೈರೇಗೌಡ ಇಲಾಖೆಗೆ ಸೂಚನೆ ನೀಡಿದ್ದಾರೆ. ಭೂಮಾಪಕರು ಈ ಬಗ್ಗೆ ಶಾಸಕ ಅಶೋಕ್ ರೈ ಅವರ ಗಮನಕ್ಕೆ ತಂದ ಬಳಿಕ ಅವರು ವಿಷಯವನ್ನು ಸಚಿವರ ಮುಂದಿಟ್ಟಿದ್ದರು. ಮುಖ್ಯಮಂತ್ರಿಗಳ ಮಂಗಳೂರು ಭೇಟಿಯ ವೇಳೆ ಸುಮಾರು 1500 ಆರ್‌ಟಿಸಿ ದಾಖಲೆಗಳ ದುರಸ್ತಿ ಕೆಲಸವನ್ನು 3 ತಿಂಗಳೊಳಗೆ ಪೂರ್ಣಗೊಳಿಸಿದ್ದರೂ, ಪ್ರತಿ ಪ್ರಕರಣಕ್ಕೆ ನಿಗದಿಪಡಿಸಲಾದ ₹1200 ವೇತನ ಪಾವತಿಯಾಗಿರಲಿಲ್ಲ. ಶಾಸಕರ ಮನವಿಗೆ ಸ್ಪಂದಿಸಿದ ಸಚಿವರು ವೇತನ ಪಾವತಿ ವಿಳಂಬವಾಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...