ಮಂಗಳೂರಿನಲ್ಲಿ ಹೆಬ್ಬಾವು ಮಾರಾಟ ಜಾಲ ಪತ್ತೆ; ಅಪ್ರಾಪ್ತ ಬಾಲಕ ಸೇರಿ ನಾಲ್ವರ ಬಂಧನ

Date:

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಹೆಬ್ಬಾವು ಮಾರಾಟ ಜಾಲವನ್ನು ಪತ್ತೆ ಹಚ್ಚಿ, ಅಪ್ರಾಪ್ತ ಬಾಲಕ ಸೇರಿ ನಾಲ್ವರನ್ನು ಬಂಧಿಸಿದ್ದಾರೆ.

ಮಂಗಳೂರಿನ ಬಡಗ ಉಳಿಪ್ಪಾಡಿ ನಿವಾಸಿ ವಿಹಾಲ್ ಎಚ್. ಶೆಟ್ಟಿ (18), ಸ್ಟೇಟ್‌ ಬ್ಯಾಂಕ್ ಬಳಿಯ ಸಾಕುಪ್ರಾಣಿ ಅಂಗಡಿ ಮಾಲಕ ಉಳ್ಳಾಲ ಮುನ್ನೂರು ಗ್ರಾಮದ ಇಬ್ರಾಹೀಂ ಶಕೀಲ್ ಇಸ್ಮಾಯಿಲ್ (35), ಅಂಗಡಿ ಸಿಬ್ಬಂದಿ ಉಳ್ಳಾಲ ಹರೇಕಳ ಗ್ರಾಮದ ಮಹಮ್ಮದ್ ಮುಸ್ತಫಾ (22) ಮತ್ತು ಕಾಲೇಜೊಂದರ ಪ್ರಥಮ ಪಿಯುಸಿ ವಿದ್ಯಾರ್ಥಿ 16 ವರ್ಷದ ಬಾಲಕ ಬಂಧಿತರೆಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಮಂಗಳೂರು ವಲಯ ಅರಣ್ಯಾಧಿಕಾರಿ ರಾಜೇಶ್ ಬಳಿಗಾ‌ರ್ ತಂಡವು ಮೊದಲಿಗೆ ಇಬ್ಬರನ್ನು ಹೆಬ್ಬಾವು ಖರೀದಿಸುವ ನೆಪದಲ್ಲಿ ವಿಹಾಲ್‌ ಜತೆಗೆ ಮಾತುಕತೆ ನಡೆಸಿದರು. ಬಳಿಕ ನಗರದ ಕದ್ರಿಯ ಅಶ್ವತ್ಥ ಕಟ್ಟೆಯ ಬಳಿ ಈ ಬಗ್ಗೆ ಆತನೊಂದಿಗೆ ವ್ಯವಹಾರ ಮಾಡಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆತ ಹಾವನ್ನು ತೋರಿಸಿ ರೂ.45 ಸಾವಿರಕ್ಕೆ ನಿಗದಿಪಡಿಸುತ್ತಾರೆ. ಈ ವೇಳೆ ಆತನನ್ನು ಅರಣ್ಯ ಇಲಾಖೆ ಅಧಿಕಾರಿಗಳು ವಶಕ್ಕೆ ಪಡೆದಿದ್ದರಿಂದ ಭೀತನಾದ ಆತ ಹಾವು ನನ್ನದಲ್ಲ ಎಂದು ಅಪ್ರಾಪ್ತ ಬಾಲಕನದು, ಅದನ್ನು ಮಾರಲೆಂದು ನೀಡಿದ್ದಾನೆ ಎಂದು ಹೇಳಿದ ನಂತರ ಆತನ ಮೂಲಕವೇ ಬಾಲಕನಿಗೆ ಕರೆ ಮಾಡಿಸಿ ಮಾಲ್‌ ಬಳಿ ಬರಲು ಹೇಳಿ ಅವನನ್ನು ಅಲ್ಲೇ ಬಂಧಿಸಿದರು.

ಸ್ಟೇಟ್‌ಬ್ಯಾಂಕ್‌ ಬಳಿರುವ ಸಾಕು ಪ್ರಾಣಿ ಮಾರಾಟ ಅಂಗಡಿಯಲ್ಲಿ ಹಾವು ಮಾರಾಟ ಮಾಡುತ್ತಿದ್ದಾರೆ ಎನ್ನುವು ಮಾಹಿತಿ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ಗ್ರಾಹಕರ ಸೋಗಿನಲ್ಲಿ ಒಬ್ಬ ಯುವಕನನ್ನು ಅಲ್ಲಿಗೆ ಕಳುಹಿಸಲಾಯಿತು. ಅಲ್ಲಿನ ಸಿಬ್ಬಂದಿ ತಮ್ಮಲ್ಲಿ ಹಾವಿದೆ ತರಿಸಿ ಕೊಡುತ್ತೇವೆ ಎಂದು ವಿಹಾಲ್‌ಗೆ ಕರೆ ಮಾಡಿದ ಕೂಡಲೇ, ತತ್‌ಕ್ಷಣ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ಮಾಡಿ ಮಾಲೀಕ ಹಾಗೂ ಸಿಬ್ಬಂದಿಯನ್ನು ವಶಪಡೆದುಕೊಂಡರು. ಅಂಗಡಿಯಲ್ಲಿ ಸಿಕ್ಕ ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಇದನ್ನೂ ಓದಿ: ಮಂಗಳೂರು | ಜು.23ರಂದು ಲೋಕಾಯುಕ್ತ ಜನಸಂಪರ್ಕ ಸಭೆ

ವನ್ಯಜೀವಿ ಸಂರಕ್ಷಣ ಕಾಯ್ದೆ 1972ರ ಅನುಸೂಚಿತ (ಶೆಡ್ಯೂಲ್ 1) ಭಾಗ ಸಿ ಯಡಿ ಪ್ರಾಣಿಯಾದ ಇಂಡಿಯನ್ ರಾಕ್ ಪೈಥಾನ್ (ಹೆಬ್ಬಾವು)ಅನ್ನು ಹೊರ ದೇಶ ಅಂದರೆ ಬರ್ಮಿಸ್ ಬಾಲ್ ಪೈಥಾನ್ ಎಂದು ಮಾರಾಟ ಮಾಡುತ್ತಿದ್ದರು. ವನ್ಯ ಜೀವಿ ಸಂರಕ್ಷಣ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈ ಜಾಲಕ್ಕೆ ತಮಿಳುನಾಡುವರೆಗೆ ಸಂಪರ್ಕವಿರುವುದು ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...